Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವಲೋಕನ ಮಾಡುವಾಗ ನ್ಯಾಯಾಧೀಶರು ಜಾಗರೂಕರಾಗಿರಬೇಕು: ಸುಪ್ರೀಂ ಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವಲೋಕನ ಮಾಡುವಾಗ ನ್ಯಾಯಾಧೀಶರು ಜಾಗರೂಕರಾಗಿರಬೇಕು: ಸುಪ್ರೀಂ ಕೋರ್ಟ್

- Advertisement -
- Advertisement -

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಧೀಶರು ಅವಲೋಕನಗಳನ್ನು ಮಾಡುವಾಗ ಜಾಗರೂಕರಾಗಿರಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. 2024 ರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಾರ್ಚ್ 11 ರಂದು ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ಆದೇಶದ ಬಗ್ಗೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಈ ಹೇಳಿಕೆ ನೀಡಿದೆ. ಲೈಂಗಿಕ ದೌರ್ಜನ್ಯ

2024ರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡುವಾಗ ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್, ಪ್ರಕರಣದಲ್ಲಿ ”ಮಹಿಳೆಯೆ ಸಮಸ್ಯೆಯನ್ನು ಮೈಗೆಳೆದುಕೊಂಡಿದ್ದಾರೆ” ಎಂದು ಎಂದು ಹೇಳಿದ್ದು, ಅವರ ವಿರುದ್ಧ ನಡೆದ ಅಪರಾಧಕ್ಕೆ ಅವರೇ ಕಾರಣರಾಗಿದ್ದಾರೆ ಎಂದು ಇತ್ತೀಚೆಗೆ ಹೇಳಿದ್ದರು.

ಪ್ರತಿ ಪ್ರಕರಣದ ಸಂಗತಿಗಳನ್ನು ಅವಲಂಬಿಸಿ ಜಾಮೀನು ನೀಡುವುದು ನ್ಯಾಯಾಧೀಶರ ವಿವೇಚನೆಯಾಗಿದ್ದರೂ, ದೂರುದಾರರ ವಿರುದ್ಧ ಅನಗತ್ಯ ಅವಲೋಕನಗಳನ್ನು ತಪ್ಪಿಸಬೇಕು ಎಂದು ಮಂಗಳವಾರ ಸುಪ್ರೀಂಕೋರ್ಟ್ ಹೇಳಿದೆ.

“ಈಗ ಇನ್ನೊಬ್ಬ ನ್ಯಾಯಮೂರ್ತಿ ಮತ್ತೊಂದು ಆದೇಶ ನೀಡಿದ್ದಾರೆ. ಆರೋಪಿಗೆ ಜಾಮೀನು ನೀಡುವುದು ತಪ್ಪೇನಲ್ಲ, ಆದರೆ ‘ಮಹಿಳೆಯೆ ತೊಂದರೆ ಮೈಗೆಳೆದುಕೊಂಡಿದ್ದಾಳೆ’ ಎಂಬ ಚರ್ಚೆ ಏಕೆ ಮಾಡಬೇಕು? ವಿಶೇಷವಾಗಿ ಈ ಕಡೆಯಿಂದ [ನ್ಯಾಯಾಧೀಶರು] ಅಂತಹ ವಿಷಯಗಳನ್ನು ಹೇಳುವಾಗ ಜಾಗರೂಕರಾಗಿರಬೇಕು.” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

“ಸಂಪೂರ್ಣ ನ್ಯಾಯ ದೊರಕಿಸಿಕೊಡುವುದು ಮಾತ್ರವಲ್ಲ, ನ್ಯಾಯ ದೊರಕಿಸಿಕೊಟ್ಟಿದ್ದೇವೆ ಎಂದು ಕೂಡಾ ಕಾಣುವಂತಿರಬೇಕು. ಸಾಮಾನ್ಯ ವ್ಯಕ್ತಿಯೊಬ್ಬ ಅಂತಹ ಆದೇಶಗಳನ್ನು ಹೇಗೆ ಗ್ರಹಿಸುತ್ತಾರೆ ಎಂಬುದನ್ನು ಸಹ ನೋಡಬೇಕಾಗುತ್ತದೆ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೇಳಿದ್ದಾರೆ.

ಹೆಣ್ಣು ಮಗುವಿನ ಎದೆಗಳನ್ನು ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ ಎಂದು ಹೇಳಿದ್ದ ಅಲಹಾಬಾದ್ ಹೈಕೋರ್ಟ್‌ನ ಮತ್ತೊಂದು ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿತ್ತು.

2021 ರಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಹೊತ್ತಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ವಿಚಾರಣೆ ನಡೆಸಿ ಮಾರ್ಚ್ 17 ರಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು ಈ ಅವಲೋಕನಗಳನ್ನು ಮಾಡಿದ್ದರು.

ಭಾರತೀಯ ದಂಡ ಸಂಹಿತೆಯಡಿಯಲ್ಲಿ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯ ನ್ಯಾಯಾಲಯವು ಈ ಇಬ್ಬರು ವ್ಯಕ್ತಿಗಳಿಗೆ ಸಮನ್ಸ್ ನೀಡಿತ್ತು. ದೂರನ್ನು ಮೇಲ್ನೋಟಕ್ಕೆ ತೆಗೆದುಕೊಂಡರೂ ಅದು ಅತ್ಯಾಚಾರ ಯತ್ನದ ಅಪರಾಧವಾಗುವುದಿಲ್ಲ ಎಂದು ವಾದಿಸಿ ಅವರು ಸಮನ್ಸ್ ಅನ್ನು ಪ್ರಶ್ನಿಸಿದ್ದರು.

ಭಾರತೀಯ ದಂಡ ಸಂಹಿತೆಯಡಿಯಲ್ಲಿ ವಿವಸ್ತ್ರಗೊಳ್ಳುವ ಉದ್ದೇಶದಿಂದ ಹಲ್ಲೆ ನಡೆಸಿದ್ದಕ್ಕಾಗಿ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಈ ರೀತಿಯ ಪ್ರಕರಣದಲ್ಲಿ ಕಡಿಮೆ ಶಿಕ್ಷೆ ವಿಧಿಸಲಾಗುತ್ತದೆ.

ಅದಾಗ್ಯೂ, ಮಾರ್ಚ್ 26 ರಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು. ನ್ಯಾಯಮೂರ್ತಿಗಳಾದ ಬೇಲಾ ತ್ರಿವೇದಿ ಮತ್ತು ಪ್ರಸನ್ನ ಬಿ. ವರಾಳೆ ಅವರ ಮತ್ತೊಂದು ಪೀಠವು ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ಒಂದು ದಿನದ ನಂತರ ಪೀಠವು ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಪರಿಗಣಿಸಿತ್ತು.

ಈ ವೇಳೆ ಹೈಕೋರ್ಟ್‌ನ ಅವಲೋಕನಗಳು “ಆಘಾತಕಾರಿ” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಮಂಗಳವಾರ ನಡೆದ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಒಂದು ತಿಂಗಳ ಕಾಲ ಮುಂದೂಡಿತು. ಲೈಂಗಿಕ ದೌರ್ಜನ್ಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ಅತ್ಯಾಚಾರಕ್ಕೆ ಸಂತ್ರಸ್ತೆಯನ್ನೆ ಹೊಣೆಯಾಗಿಸಿದ ಅಲಹಾಬಾದ್ ಹೈಕೋರ್ಟ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...