Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ: ಕೊಯಮತ್ತೂರಿನಲ್ಲಿ ಐಎಎಫ್ ಅಧಿಕಾರಿ ಬಂಧನ

ಲೈಂಗಿಕ ದೌರ್ಜನ್ಯ ಆರೋಪ: ಕೊಯಮತ್ತೂರಿನಲ್ಲಿ ಐಎಎಫ್ ಅಧಿಕಾರಿ ಬಂಧನ

- Advertisement -
- Advertisement -

ಭಾರತೀಯ ವಾಯುಪಡೆಯ 26 ವರ್ಷದ ಫ್ಲೈಟ್ ಲೆಫ್ಟಿನೆಂಟ್‌ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 27 ವರ್ಷದ ಮಹಿಳಾ ಅಧಿಕಾರಿಯೊಬ್ಬರು ದೂರು ನೀಡಿದ ಬಳಿಕ ಐಎಎಫ್ ಅಧಿಕಾರಿ ಅನ್ನು ಪೊಲೀಸರು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಿದ್ದಾರೆ.

ಎರಡು ವಾರಗಳ ಹಿಂದೆ ತಾನು ನೀಡಿದ ದೂರಿನ ಬಗ್ಗೆ ಐಎಎಫ್ ತೆಗೆದುಕೊಂಡ ಕ್ರಮದಿಂದ ತೃಪ್ತಿ ಹೊಂದಿರದ ಕಾರಣ ತಾನು ಪೋಲಿಸ್‌ ಬಳಿ ಹೋಗಬೇಕಾಯಿತು ಎಂದು ಸಂತ್ರಸ್ತೆ ಹೇಳಿದ್ದಾರೆ.

ಕೊಯಮತ್ತೂರಿನ ರೆಡ್‌ಫೀಲ್ಡ್ಸ್‌ನಲ್ಲಿರುವ ವಾಯುಪಡೆ ಆಡಳಿತದ ಏರ್ ಫೋರ್ಸ್ ಕಾಲೇಜಿನಲ್ಲಿ ತನ್ನ ಕೊಠಡಿಯೊಳಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಿದ್ದಾರೆ. ಆಕೆ ಏರ್ ಫೋರ್ಸ್ ತರಬೇತಿಗಾಗಿ ಹೋಗಿದ್ದರು.

ಇದನ್ನೂ ಓದಿ: ಭಾರತ್ ಬಂದ್: ರೈತರ ಕರೆಗೆ ಸಂಪೂರ್ಣ ಬೆಂಬಲ ಸೂಚಿಸಿದ ಪಕ್ಷಗಳ ಪಟ್ಟಿ ಇಲ್ಲಿದೆ

ಸಂತ್ರಸ್ತೆಯ ಹೇಳಿಕೆಯ ಪ್ರಕಾರ,  ತರಬೇತಿ ಸಮಯದಲ್ಲಿ ಆಟವಾಡುತ್ತಿದ್ದಾಗ ಗಾಯ ಮಾಡಿಕೊಂಡಿದ್ದರು, ತಮ್ಮ ಕೋಣೆಯಲ್ಲಿ ಮಲಗುವ ಮುನ್ನ ಕೆಲವು ಔಷಧಿಗಳನ್ನು ತೆಗೆದುಕೊಂಡಿದ್ದರು. ನಿದ್ದೆಯಿಂದ ಎಚ್ಚೆತ್ತ ಬಳಿಕ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ತಿಳಿಯಿತು ಎಂದಿದ್ದಾರೆ.

ವಾಯುಪಡೆಯು ತನ್ನ ದೂರನ್ನು ನಿರ್ವಹಿಸಿದ ಕ್ರಮದ ಬಗ್ಗೆ ಅತೃಪ್ತಿ ಇದೆ ಎಂದು ಮಹಿಳಾ ಅಧಿಕಾರಿ ತಿಳಿಸಿದ ಬಳಿಕ ನಾವು ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಯಮತ್ತೂರು ನಗರದ ಗಾಂಧಿಪುರಂ ಪೊಲೀಸ್ ಠಾಣೆಯ ಮಹಿಳಾ ತಂಡವು ಪ್ರಾಥಮಿಕ ತನಿಖೆಯನ್ನು ನಡೆಸಿದೆ.  ಜಿಲ್ಲಾ ನ್ಯಾಯಾಧೀಶರಿಗೆ ಶರಣಾಗಿದ್ದ ಬಂಧಿತ ಅಧಿಕಾರಿ ಛತ್ತೀಸ್‌ಗಢ ಮೂಲದವರಾಗಿದ್ದು, ಆರೋಪಿಯನ್ನು ಉಡುಮಲಪೇಟೆ ಜೈಲಿಗೆ ಕಳುಹಿಸಲಾಗಿದೆ.

ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತನಿಖೆ ನಡೆಸುವ ಅಧಿಕಾರ ಪೊಲೀಸರಿಗೆ ಇಲ್ಲ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ. ಇಂತಹ ಪ್ರಕರಣಗಳನ್ನು ರಕ್ಷಣಾ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ನಡೆಸಬಹುದು ಎಂದು ವಕೀಲರು ಹೇಳಿದ್ದಾರೆ.

ಇತ್ತಿಚೆಗಷ್ಟೇ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಮೂವರು ಕಾಮುಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಆರೋಪಿಸಿದ್ದು, ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಮಧ್ಯಪ್ರದೇಶ: ಮಹಿಳಾ ಕಾನ್‌ಸ್ಟೇಬಲ್ ಮೇಲೆ ಅತ್ಯಾಚಾರ-ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....