Homeಕರ್ನಾಟಕದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ ಪತ್ನಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಒಬ್ಬಳು ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯ ಸಹೋದರಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಶಾಲೆಯ ಮಾಲೀಕ ಧನಂಜಯ ಹಾಗೂ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲೆಯಾಗಿರುವ ಧನಂಜಯನ ಪತ್ನಿ ಶೈಲಜಾಳನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಅಕ್ಕ-ತಂಗಿ ವಸತಿ ಶಾಲೆಯಲ್ಲಿ 8 ಮತ್ತು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಫೆ.9ರಂದು ಧನಂಜಯ ಶಾಲೆಯ ಕೊಠಡಿಯೊಂದರಲ್ಲಿ ಅಕ್ಕನ ಮೇಲೆ ಎರಡು ಬಾರಿ ಅತ್ಯಾಚಾರವೆಸಗಿದ್ದ. ನಂತರ ತಂಗಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಶೌಚಾಲಯದಲ್ಲಿ ಅಡಗಿಕೂತು ತಪ್ಪಿಸಿಕೊಂಡಿದ್ದಾಳೆ ಎಂದು ವರದಿಗಳು ವಿವರಿಸಿವೆ.

ಪತ್ನಿಯಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ

ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕಲು ಶಾಲೆಯ ಪ್ರಾಂಶುಪಾಲೆಯಾಗಿರುವ ಆರೋಪಿಯ ಪತ್ನಿ ಶೈಲಜಾ ಯತ್ನಿಸಿದ್ದಳು. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭ ಧರಿಸದಂತೆ ನೋಡಿಕೊಳ್ಳಲು ವಾರಗಟ್ಟಲೆ ಆಕೆಗೆ ಬಲವಂತವಾಗಿ ಪರಂಗಿ ಹಣ್ಣು ತಿನ್ನಿಸಿದ್ದಳು. ನಡೆದ ವಿಷಯವನ್ನು ಯಾರಲ್ಲೂ ಹೇಳಬಾರದು. ಎಸ್‌ಎಸ್‌ಎಲ್‌ಸಿವರೆಗೆ ಯಾವುದೇ ಶುಲ್ಕ ಪಡೆಯದೆ ಓದಿಸುತ್ತೇವೆ, ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದು ಬಾಲಕಿಗೆ ಆಮಿಷವೊಡ್ಡಿದ್ದಳು. ಅಲ್ಲದೆ, ಯಾರಲ್ಲಾದರು ವಿಷಯ ಹೇಳಿದರೆ ಫೇಲ್ ಮಾಡುವುದಾಗಿ ಬೆದರಿಸಿದ್ದಳು ಎಂದು ಆರೋಪಿಸಲಾಗಿದೆ.

ಪ್ರಕರಣ ನಡೆದ ದಿನದಿಂದ ಬಾಲಕಿಯರನ್ನು ಅವರ ಪಾಲಕರು ಭೇಟಿಯಾಗದಂತೆ ನೋಡಿಕೊಳ್ಳಲಾಗಿತ್ತು. ಮಕ್ಕಳು ಪ್ರವಾಸಕ್ಕೆ ತೆರಳಿದ್ದಾರೆ, ಪರೀಕ್ಷೆಗೆ ಓದಿಕೊಳ್ಳುತ್ತಿದ್ದಾರೆ ಎಂಬ ನೆಪಗಳನ್ನು ಹೇಳಿ ಅವರು ಪೋಷಕರ ಸಂಪರ್ಕಕ್ಕೆ ಸಿಗದಂತೆ ಮಾಡಲಾಗಿತ್ತು. ಕೊನೆಗೆ ಪಾಲಕರು ಒತ್ತಾಯ ಮಾಡಿದಾಗ 5 ನಿಮಿಷಗಳ ಕಾಲ ಮಾತ್ರ ಪೋಷಕರನ್ನು ಭೇಟಿಯಾಗಲು ಮಕ್ಕಳಿಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮಕ್ಕಳು ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದರು. ಪೋಷಕರು ದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರು ಮಲಗುತ್ತಿದ್ದ ಕೊಠಡಿಗೆ ಬೋಲ್ಟ್- ಬೀಗವೇ ಇರಲಿಲ್ಲ ಎಂಬುವುದು ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ಧನಂಜಯ ಉದ್ದೇಶಪೂರ್ವಕವಾಗಿಯೇ ಕೊಠಡಿಯನ್ನು ಸುಲಭವಾಗಿ ಪ್ರವೇಶಿಸಲು ಈ ರೀತಿ ಮಾಡಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ ದಿನ ವಸತಿ ಶಾಲೆಯ ವಾರ್ಡನ್ ಆಗಿರುವ ತನ್ನ ಅತ್ತೆಯನ್ನು ಆರೋಪಿ ಮನೆಗೆ ಕಳುಹಿಸಿದ್ದ ಎಂದು ವರದಿಗಳು ಉಲ್ಲೇಖಿಸಿವೆ.

ಇಬ್ಬರು ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಶಾಲೆಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ. ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಭೇಟಿ ಮಾಹಿತಿ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...