Homeಕರ್ನಾಟಕದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ ಪತ್ನಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಒಬ್ಬಳು ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯ ಸಹೋದರಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಶಾಲೆಯ ಮಾಲೀಕ ಧನಂಜಯ ಹಾಗೂ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲೆಯಾಗಿರುವ ಧನಂಜಯನ ಪತ್ನಿ ಶೈಲಜಾಳನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಅಕ್ಕ-ತಂಗಿ ವಸತಿ ಶಾಲೆಯಲ್ಲಿ 8 ಮತ್ತು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಫೆ.9ರಂದು ಧನಂಜಯ ಶಾಲೆಯ ಕೊಠಡಿಯೊಂದರಲ್ಲಿ ಅಕ್ಕನ ಮೇಲೆ ಎರಡು ಬಾರಿ ಅತ್ಯಾಚಾರವೆಸಗಿದ್ದ. ನಂತರ ತಂಗಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಶೌಚಾಲಯದಲ್ಲಿ ಅಡಗಿಕೂತು ತಪ್ಪಿಸಿಕೊಂಡಿದ್ದಾಳೆ ಎಂದು ವರದಿಗಳು ವಿವರಿಸಿವೆ.

ಪತ್ನಿಯಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ

ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕಲು ಶಾಲೆಯ ಪ್ರಾಂಶುಪಾಲೆಯಾಗಿರುವ ಆರೋಪಿಯ ಪತ್ನಿ ಶೈಲಜಾ ಯತ್ನಿಸಿದ್ದಳು. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭ ಧರಿಸದಂತೆ ನೋಡಿಕೊಳ್ಳಲು ವಾರಗಟ್ಟಲೆ ಆಕೆಗೆ ಬಲವಂತವಾಗಿ ಪರಂಗಿ ಹಣ್ಣು ತಿನ್ನಿಸಿದ್ದಳು. ನಡೆದ ವಿಷಯವನ್ನು ಯಾರಲ್ಲೂ ಹೇಳಬಾರದು. ಎಸ್‌ಎಸ್‌ಎಲ್‌ಸಿವರೆಗೆ ಯಾವುದೇ ಶುಲ್ಕ ಪಡೆಯದೆ ಓದಿಸುತ್ತೇವೆ, ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದು ಬಾಲಕಿಗೆ ಆಮಿಷವೊಡ್ಡಿದ್ದಳು. ಅಲ್ಲದೆ, ಯಾರಲ್ಲಾದರು ವಿಷಯ ಹೇಳಿದರೆ ಫೇಲ್ ಮಾಡುವುದಾಗಿ ಬೆದರಿಸಿದ್ದಳು ಎಂದು ಆರೋಪಿಸಲಾಗಿದೆ.

ಪ್ರಕರಣ ನಡೆದ ದಿನದಿಂದ ಬಾಲಕಿಯರನ್ನು ಅವರ ಪಾಲಕರು ಭೇಟಿಯಾಗದಂತೆ ನೋಡಿಕೊಳ್ಳಲಾಗಿತ್ತು. ಮಕ್ಕಳು ಪ್ರವಾಸಕ್ಕೆ ತೆರಳಿದ್ದಾರೆ, ಪರೀಕ್ಷೆಗೆ ಓದಿಕೊಳ್ಳುತ್ತಿದ್ದಾರೆ ಎಂಬ ನೆಪಗಳನ್ನು ಹೇಳಿ ಅವರು ಪೋಷಕರ ಸಂಪರ್ಕಕ್ಕೆ ಸಿಗದಂತೆ ಮಾಡಲಾಗಿತ್ತು. ಕೊನೆಗೆ ಪಾಲಕರು ಒತ್ತಾಯ ಮಾಡಿದಾಗ 5 ನಿಮಿಷಗಳ ಕಾಲ ಮಾತ್ರ ಪೋಷಕರನ್ನು ಭೇಟಿಯಾಗಲು ಮಕ್ಕಳಿಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮಕ್ಕಳು ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದರು. ಪೋಷಕರು ದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರು ಮಲಗುತ್ತಿದ್ದ ಕೊಠಡಿಗೆ ಬೋಲ್ಟ್- ಬೀಗವೇ ಇರಲಿಲ್ಲ ಎಂಬುವುದು ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ಧನಂಜಯ ಉದ್ದೇಶಪೂರ್ವಕವಾಗಿಯೇ ಕೊಠಡಿಯನ್ನು ಸುಲಭವಾಗಿ ಪ್ರವೇಶಿಸಲು ಈ ರೀತಿ ಮಾಡಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ ದಿನ ವಸತಿ ಶಾಲೆಯ ವಾರ್ಡನ್ ಆಗಿರುವ ತನ್ನ ಅತ್ತೆಯನ್ನು ಆರೋಪಿ ಮನೆಗೆ ಕಳುಹಿಸಿದ್ದ ಎಂದು ವರದಿಗಳು ಉಲ್ಲೇಖಿಸಿವೆ.

ಇಬ್ಬರು ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಶಾಲೆಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ. ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಭೇಟಿ ಮಾಹಿತಿ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...