Homeಕರ್ನಾಟಕಕುಂಕುಮ ಹಚ್ಚುವ ನೆಪದಲ್ಲಿ ಲೈಂಗಿಕ ಕಿರುಕುಳ ಆರೋಪ: ತುಮಕೂರು ದೇವಾಲಯದಲ್ಲಿ ಅರ್ಚಕನ ಮೇಲೆ ಹಲ್ಲೆ-VIDEO

ಕುಂಕುಮ ಹಚ್ಚುವ ನೆಪದಲ್ಲಿ ಲೈಂಗಿಕ ಕಿರುಕುಳ ಆರೋಪ: ತುಮಕೂರು ದೇವಾಲಯದಲ್ಲಿ ಅರ್ಚಕನ ಮೇಲೆ ಹಲ್ಲೆ-VIDEO

- Advertisement -
- Advertisement -

ತುಮಕೂರು: ತುಮಕೂರು ಜಿಲ್ಲೆಯ ಸ್ಥಳೀಯ ದೇವಾಲಯವೊಂದರಲ್ಲಿ ಮಹಿಳಾ ಭಕ್ತರಿಗೆ ಕುಂಕುಮ ಹಚ್ಚುವ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಆರೋಪಿಸಿ ಅರ್ಚಕರೊಬ್ಬರಿಗೆ ಭಕ್ತರು ಥಳಿಸಿದ್ದಾರೆ. ಭಾನುವಾರ ನಡೆದ ಈ ಘಟನೆಯಲ್ಲಿ, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ದೇವಾಲಯಕ್ಕೆ ಭೇಟಿ ನೀಡಿದ್ದ ಹಲವು ಮಹಿಳಾ ಭಕ್ತರು ವೃದ್ಧ ಅರ್ಚಕ ನಾಗಭೂಷಣಾಚಾರ್, ಆಶೀರ್ವಾದ ಮಾಡುವಾಗ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು. ಈ ದೂರುಗಳು ಕೂಡಲೇ ಅಲ್ಲಿ ನೆರೆದಿದ್ದ ಭಕ್ತರಲ್ಲಿ ಹರಡಿ, ಕೋಪಗೊಂಡ ಜನರು ಅರ್ಚಕರನ್ನು ಸುತ್ತುವರೆದರು. ಪರಿಸ್ಥಿತಿ ಉದ್ವಿಗ್ನಗೊಂಡು, ಅವರಲ್ಲಿ ಕೆಲವರು ಅರ್ಚಕರನ್ನು ದೇವಾಲಯದ ಹೊರಗೆ ಎಳೆದು ತಂದು ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಸ್ಥಳೀಯ ನಿವಾಸಿಗಳ ಪ್ರಕಾರ, ಇದು ಅರ್ಚಕರ ವಿರುದ್ಧ ಬಂದ ಮೊದಲ ಆರೋಪವಲ್ಲ. ಈ ಹಿಂದೆ ಸಹ ಮಹಿಳೆಯರು ಅವರ ನಡವಳಿಕೆಯ ಬಗ್ಗೆ ದೂರು ನೀಡಿದ್ದರು. ಆದರೆ, ಯಾವುದೇ ಕ್ರಮ ಕೈಗೊಳ್ಳದ ಕಾರಣ ಜನರು ಸಹನೆ ಕಳೆದುಕೊಂಡು ಈ ರೀತಿ ವರ್ತಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊ ವೈರಲ್ ಆದ ನಂತರ, ಅನೇಕ ಬಳಕೆದಾರರು ಕೂಡ ಈ ಹಿಂದೆ ಅರ್ಚಕರಿಂದ ಇದೇ ರೀತಿಯ ಅನುಭವ ಆಗಿತ್ತು ಎಂದು ಪ್ರತಿಕ್ರಿಯಿಸಿದ್ದಾರೆ. ಆದರೂ, ಪೊಲೀಸರ ಬಳಿ ಈ ಬಗ್ಗೆ ಯಾವುದೇ ದೂರುಗಳು ದಾಖಲಾಗಿಲ್ಲ.

ಪೊಲೀಸರ ಪ್ರಕಾರ, ಕಳೆದ 22 ವರ್ಷಗಳಿಂದ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ನಾಗಭೂಷಣಾಚಾರ್, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ತಾವು ಕೇವಲ ಭಕ್ತರ ಹಣೆಗೆ ಮತ್ತು ಕುತ್ತಿಗೆಗೆ ಕುಂಕುಮ ಹಚ್ಚುತ್ತಿದ್ದೆ ಎಂದು ಅವರು ಹೇಳಿದ್ದಾರೆ.

ತುಮಕೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ನಾವು ಈ ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಆರೋಪಗಳನ್ನು ಪರಿಶೀಲಿಸುತ್ತಿದ್ದೇವೆ. ಸಂತ್ರಸ್ತರು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಈ ಘಟನೆ ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಲವರು ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕುದುರೆಮುಖದ ಜಾಗವನ್ನು ಅರಣ್ಯ ಇಲಾಖೆಗೆ ಕೊಡುವುದಕ್ಕೆ ವಿರೋಧ: ಪರಿಸರ ಹೋರಾಟಗಾರ ಕಲ್ಕುಳಿ ವಿಠಲ್ ಹೆಗಡೆಯವರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...