Homeಮುಖಪುಟಕುಸ್ತಿ ಫೆಡರೇಶನ್‌ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಂಬಂಧಿಗಳು ಸ್ಪರ್ಧೆ ಮಾಡದಿರಲು ನಿರ್ಧಾರ: ವರದಿ

ಕುಸ್ತಿ ಫೆಡರೇಶನ್‌ ಚುನಾವಣೆಯಲ್ಲಿ ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಂಬಂಧಿಗಳು ಸ್ಪರ್ಧೆ ಮಾಡದಿರಲು ನಿರ್ಧಾರ: ವರದಿ

- Advertisement -
- Advertisement -

”ನಿರ್ಗಮಿತ ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಸದಸ್ಯರು ಅರ್ಹತೆಯ ಹೊರತಾಗಿಯೂ ಮುಂಬರುವ ಫೆಡರೇಶನ್ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ವಿಶ್ವಾಸಾರ್ಹ ಮೂಲಗಳು ಮಂಗಳವಾರ ಪಿಟಿಐಗೆ ತಿಳಿಸಿವೆ.

ಭಾರತೀಯ ಕುಸ್ತಿ ಫೆಡರೇಶನ್‌ನ ಅಧ್ಯಕ್ಷ, ಹಿರಿಯ ಉಪಾಧ್ಯಕ್ಷ, ನಾಲ್ವರು ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಐವರು ಕಾರ್ಯಕಾರಿ ಸದಸ್ಯರ ಸ್ಥಾನಗಳಿಗೆ ಜುಲೈ 6ರಂದು ಚುನಾವಣೆ ನಡೆಯಲಿದೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಈ ಹಿಂದೆ ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ, ”ಸಿಂಗ್ ಅವರ ಕುಟುಂಬದ ಸದಸ್ಯರು ಅಥವಾ ಅವರ ಸಹಚರರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ” ಎಂದು ಭರವಸೆ ನೀಡಿದ್ದಾರೆ. ಹಾಗಾಗಿ ಕುಸ್ತಿಪಟುಗಳು ಜೂನ್ 15ರವರೆಗೆ ತಮ್ಮ ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ.

ಸಿಂಗ್ ಅವರ ಪುತ್ರ ಕರಣ್ ಭೂಷಣ್ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಮುಖ್ಯಸ್ಥರಾಗಿದ್ದರೆ, ಅವರ ಅಳಿಯ ಆದಿತ್ಯ ಪ್ರತಾಪ್ ಸಿಂಗ್ ಬಿಹಾರ ಘಟಕದ ಮುಖ್ಯಸ್ಥರಾಗಿದ್ದಾರೆ.

”ಪ್ರಸ್ತುತ ಪರಿಸ್ಥಿತಿಯಲ್ಲಿ, ವಿವಾದವನ್ನು ಮತ್ತಷ್ಟು ಹೆಚ್ಚಿಸುವ ಕೆಲಸವನ್ನು ಮಾಡುವುದು ಸೂಕ್ತವಲ್ಲ ಎನ್ನುವ ಕಾರಣಕ್ಕೆ ಸಿಂಗ್ ಅವರ ಮಗ ಕರಣ್ ಅಥವಾ ಅವರ ಅಳಿಯ ಆದಿತ್ಯ ಡಬ್ಲ್ಯುಎಫ್‌ಐ ಚುನಾವಣೆಗೆ ನಾಮಪತ್ರ ಸಲ್ಲಿಸುವುದಿಲ್ಲ ಎಂದು ನಿರ್ಧರಿಸಿದ್ದಾರೆ. ಆದರೆ, ಕರಣ್ ಮತ್ತು ಆದಿತ್ಯ ಇಬ್ಬರೂ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ” ಎಂದು ಸಿಂಗ್ ಕುಟುಂಬದ ಮೂಲಗಳು ತಿಳಿಸಿವೆ.

ನಿರ್ಗಮಿತ ಮುಖ್ಯಸ್ಥ ಸಿಂಗ್ ಅವರು ಅಧ್ಯಕ್ಷರಾಗಿ 12 ವರ್ಷಗಳನ್ನು ಪೂರ್ಣಗೊಳಿಸಿರುವುದರಿಂದ ಸ್ಪರ್ಧಿಸಲು ಅನರ್ಹರಾಗಿದ್ದಾರೆ. ಕ್ರೀಡಾ ಸಂಹಿತೆಯು ನಾಲ್ಕು ವರ್ಷಗಳಂತೆ ಸತತ ಮೂರು ಅವಧಿಗೆ ಸೇವೆ ಸಲ್ಲಿಸಿದ ನಂತರ ಚುನಾವಣೆಗಳನ್ನು ಅನುಮತಿಸುವುದಿಲ್ಲ.

ಇದನ್ನೂ ಓದಿ: ಕುಸ್ತಿಪಟುಗಳ ಹೋರಾಟಕ್ಕೆ ಮಣಿದ ಕೇಂದ್ರ; ಜು 4ಕ್ಕೆ ಡಬ್ಲ್ಯುಎಫ್‌ಐ ಚುನಾವಣೆ, ಚುನಾವಣಾ ಅಧಿಕಾರಿ ನೇಮಕ

ಸಿಂಗ್ ಅಧಿಕೃತವಾಗಿ ಫೆಡರೇಶನ್‌ನಲ್ಲಿ ಯಾವುದೇ ಸ್ಥಾನವನ್ನು ಹೊಂದಿರುವುದಿಲ್ಲ. ಆದರೆ ಅವರು ಕರಣ್ ಅಥವಾ ಆದಿತ್ಯ ಅಥವಾ ಇಬ್ಬರನ್ನು ಪ್ರಮುಖ ಸ್ಥಾನಗಳಲ್ಲಿ ಕೂರಿಸುವ ಮೂಲಕ ಕ್ರೀಡಾ ಸಂಸ್ಥೆಯನ್ನು ಆಳುತ್ತಾರೆ ಎಂಬುದು ಕುಸ್ತಿಪಟುಗಳಿಗೆ ಭಯವಾಗಿತ್ತು.

ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ದೇಶದ ಅಗ್ರ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಮತ್ತು ಬೆದರಿಕೆಯ ಆರೋಪ ಮಾಡಿದ್ದಾರೆ.

ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಶೀಘ್ರದಲ್ಲೇ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆಯಿದೆ.

ಸಿಂಗ್ ಅವರ ಕುಟುಂಬ ಸದಸ್ಯರು ಹಿಂದೆ ಸರಿಯಲು ಒಪ್ಪಿಕೊಂಡಿದ್ದಾರೆ. ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸುವಾಗ ಪ್ರತಿಭಟನಾ ನಿರತ ಕುಸ್ತಿಪಟುಗಳ ಸಮಾಲೋಚನೆ ನಡೆಸಲಾಗುವುದು ಎಂದು ಠಾಕೂರ್ ಹೇಳಿದ್ದಾರೆ.

ಬಿಜೆಪಿಯ ಹರಿಯಾಣ ಮುಖ್ಯಸ್ಥ ಓಂ ಪ್ರಕಾಶ್ ಧನಕರ್ ಮತ್ತು ಮಾಜಿ ರೈಲ್ವೇ ಸ್ಪೋರ್ಟ್ಸ್ ಪ್ರಮೋಷನ್ ಬೋರ್ಡ್ (ಆರ್‌ಎಸ್‌ಪಿಬಿ) ಕಾರ್ಯದರ್ಶಿ ಎನ್‌ಆರ್ ಚೌಧರಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ವ್ಯಕ್ತಪಡಿಸಿದ್ದಾರೆ ಆದರೆ ಕಣಕ್ಕೆ ಇಳಿಯುವ ಸಾಧ್ಯತೆಯಿಲ್ಲ.

ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯಲು, ಅಭ್ಯರ್ಥಿಯು ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿರಬೇಕು ಮತ್ತು ಧನಕರ್ ಅಥವಾ ಚೌಧರಿ ಅಂತಹ ಸ್ಥಾನವನ್ನು ಹೊಂದಿರುವುದಿಲ್ಲ.

ಒಟ್ಟು 25 ರಾಜ್ಯ ಘಟಕಗಳು ಚುನಾವಣೆಯಲ್ಲಿ ಭಾಗವಹಿಸಲಿವೆ. ಪ್ರತಿ ರಾಜ್ಯ ಘಟಕವು ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು. ಇಬ್ಬರೂ ಸದಸ್ಯರಿಗೆ ಮತದಾನದ ಹಕ್ಕು ಇರುತ್ತದೆ.

ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಾಗಿರುವ ಚುನಾವಣಾಧಿಕಾರಿ ಮಹೇಶ್ ಮಿತ್ತಲ್ ಕುಮಾರ್ ಅವರು ಪ್ರತಿಸ್ಪರ್ಧಿ ಬಣಗಳಲ್ಲಿ ಯಾವ ಸಂಸ್ಥೆಗೆ ಮತ ಹಾಕುತ್ತಾರೆ ಎಂಬುದನ್ನು ನಿರ್ಧರಿಸಬೇಕಾಗುತ್ತದೆ.

ಚುನಾವಣಾ ಕಾಲೇಜು ರಚನೆಗೆ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಿಂದ ಎರಡು ನಾಮನಿರ್ದೇಶನಗಳನ್ನು ಸ್ವೀಕರಿಸಲು ಕೊನೆಯ ದಿನಾಂಕವನ್ನು ಜೂನ್ 19 ಎಂದು ನಿಗದಿಪಡಿಸಲಾಗಿದೆ ಮತ್ತು ಜೂನ್ 22 ರೊಳಗೆ ಪರಿಶೀಲನೆ ಪೂರ್ಣಗೊಳ್ಳಲಿದೆ.

ಚುನಾವಣೆಗೆ ನಾಮಪತ್ರ ಸಲ್ಲಿಕೆ ಜೂನ್ 23 ರಂದು ಪ್ರಾರಂಭವಾಗಿ ಜೂನ್ 25 ರಂದು ಮುಕ್ತಾಯಗೊಳ್ಳಲಿದ್ದು, ನಂತರ ನಾಮಪತ್ರಗಳ ಸಿದ್ಧತೆ ಮತ್ತು ಪ್ರದರ್ಶನದೊಂದಿಗೆ ಜೂನ್ 28 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಜೂನ್ 28 ಮತ್ತು ಜುಲೈ 1 ರ ನಡುವೆ ಹಿಂಪಡೆಯಲು ಸಾಧ್ಯವಾಗುತ್ತದೆ. ನಂತರ ಜುಲೈ 2 ರಂದು ಸ್ಪರ್ಧಿಸುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...