Homeಮುಖಪುಟಬಿಜೆಪಿ ಸಂಸದನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್ ದಾಖಲಿಸದ ಪೊಲೀಸರಿಗೆ ಸುಪ್ರೀಂ ನೋಟಿಸ್

ಬಿಜೆಪಿ ಸಂಸದನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್ ದಾಖಲಿಸದ ಪೊಲೀಸರಿಗೆ ಸುಪ್ರೀಂ ನೋಟಿಸ್

- Advertisement -
- Advertisement -

ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದನ ಲೈಂಗಿಕ ದೌರ್ಜನ್ಯದ ವಿರುದ್ಧ ಕೆಲವು ಭಾರತೀಯ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದ್ದಾರೆ. ವ್ರೆಸ್ಲಿಂಗ್ ಫೆಡರೇಶನ್ ವಿರುದ್ಧ ದೂರು ನೀಡಿದರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದ ಕಾರಣ  ಕೇಸ್ ದಾಖಲಿಸಲು ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಕೋರಿ ಮನವಿ ಮಾಡಿದ್ದರು. ಇದೀಗ ಸುಪ್ರೀಂ ಕೋರ್ಟ್, ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಬಿಜೆಪಿ ಸಂಸದ ಬ್ರಿಜ್ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೂರುದಾರರ ಗುರುತನ್ನು ಮರೆಮಾಚಲು ಏಳು ಕುಸ್ತಿಪಟುಗಳ ಹೆಸರನ್ನು ನ್ಯಾಯಾಂಗ ದಾಖಲೆಗಳಿಂದ ಕಡಿತಗೊಳಿಸುವಂತೆ ನ್ಯಾಯಾಲಯ ಆದೇಶಿಸಿದೆ ಮತ್ತು ವಿಚಾರಣೆಗೆ ಏಪ್ರಿಲ್ 28 ರಂದು ದಿನಾಂಕವನ್ನು ನಿಗದಿಪಡಿಸಿದೆ.

ಏಳು ಮಹಿಳಾ ಕುಸ್ತಿಪಟುಗಳು ತಮ್ಮ ಮೇಲೆ ನಡೆದ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದರೂ ಎಫ್‌ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

”ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕುಸ್ತಿಪಟುಗಳು ತಮ್ಮ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಷಯವನ್ನು ನ್ಯಾಯಾಲಯವು ಪರಿಗಣಿಸಬೇಕಾಗಿದೆ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

ಪೊಲೀಸರು ಪ್ರಕರಣದ ಎಫ್‌ಐಆರ್ ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಲ್ಲಿ ಇರುವುದಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಹೇಳಿದ್ದಾರೆ. ಹಲವು ದಿನಗಳ ಹಿಂದೆ ದೂರು ಸಲ್ಲಿಸಿದಾಗಲೂ ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ್ದರು ಎಂದು ಅವರು ಆರೋಪಿಸಿದ್ದಾರೆ.

ಕ್ರೀಡಾ ಸಚಿವಾಲಯದ ಭರವಸೆಯ ನಂತರ ಜನವರಿಯಲ್ಲಿ ಗಣ್ಯ ಅಥ್ಲೀಟ್‌ಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದರು, ಆದರೆ WFI ಮುಖ್ಯಸ್ಥರ ವಿರುದ್ಧ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ದ ಕುಸ್ತಿಪಟುಗಳ ಪ್ರತಿಭಟನೆ; ಪ್ರತಿಭಟನಾಕಾರರನ್ನು ಭೇಟಿಯಾದ ಕ್ರೀಡಾ ಪ್ರಾಧಿಕಾರದ ಪ್ರತಿನಿಧಿಗಳು

ಈ ಬಗ್ಗೆ ಮಾತನಾಡಿದ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು, ”ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿಸಿದ್ದೇವೆ. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದರು.

”ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ.

”ಸುಳ್ಳು ಆಶ್ವಾಸನೆ”ಯಿಂದ ನಾವು ಜನವರಿಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

”ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಫುಟ್‌ಪಾತ್‌ನಲ್ಲಿ ರಾತ್ರಿ ಕಳೆದ ನಂತರ ಫೋಗಟ್ ಹೇಳಿದರು.

”ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ದೂರಿನ ಮೇರೆಗೆ ಜನವರಿಯಲ್ಲಿ ಕ್ರೀಡಾ ಸಚಿವಾಲಯವು ತನಿಖೆಗಾಗಿ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ರಚಿಸಿತು. ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಆದರೆ ಸಮಿತಿಯು ನೀಡಿದ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹತಾಶೆ ವ್ಯಕ್ತಪಡಿಸಿದರು.

”ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ದೂರುದಾರರ ಹೆಸರನ್ನು ಸೋರಿಕೆ ಮಾಡಬಾರದು ಏಕೆಂದರೆ ಇದು ಸೂಕ್ಷ್ಮ ವಿಷಯವಾಗಿದೆ, ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ ಇದ್ದಾರೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...