Homeಮುಖಪುಟಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

- Advertisement -
- Advertisement -

ತಿರುವನಂತಪುರಂ: ಪಾಲಕ್ಕಾಡ್ ಜಿಲ್ಲೆಯಲ್ಲಿ ಧೀರ್ಘ ಕಾಲದ ಹಿಂದುತ್ವದ ಮುಖವಾಣಿ ಮತ್ತು ಕೇರಳದ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿರುವ ಕೃಷ್ಣ ಕುಮಾರ್‌ ವಿರುದ್ಧ ಮಹಿಳೆಯೊಬ್ಬರು ಗಂಭೀರ ಲೈಂಗಿಕ ದೌರ್ಜನ್ಯ ಆರೋಪವನ್ನು ಹೊರಿಸಿದ್ದಾರೆ. ಸಂತ್ರಸ್ತ ಮಹಿಳೆಯು ಕೇರಳ ರಾಜ್ಯ ಬಿಜೆಪಿಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಗೆ ನೀಡಿದ ದೂರಿನಲ್ಲಿ ಹಲವು ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪವನ್ನು ಮಾಡಿದ್ದಾರೆ.

ಇಷ್ಟು ಮಾತ್ರವಲ್ಲದೆ ಎಲಮಕ್ಕರ್‌ನಲ್ಲಿರುವ ಆರೆಸ್ಸೆಸ್‌ ರಾಜ್ಯ ಕಚೇರಿಯನ್ನು ಪ್ರತಿನಿಧಿಸುವ ಗೋಪಾಲನ್‌ ಕುಟ್ಟಿಯವರನ್ನು ಸಂಪರ್ಕಿಸಿದ್ದೇನೆ ಎಂದು ಸಂತ್ರಸ್ತೆಯು ಹೇಳಿದ್ದಾರೆ. ಆಗಿನ ಸಂಘಟನಾ ಪ್ರಧಾನ ಕಾರ್ಯದರ್ಶಿ ಸುಭಾಷ್‌, ಎಂ.ಟಿ.ರಮೇಶ್‌ ಮತ್ತು ವಿ.ಮುರಳೀಧರನ್ ಅವರಿಗೂ ದೂರನ್ನು ಸಲ್ಲಿಸಿದ್ದೇನೆ ಎಂದಿದ್ದಾರೆ.

ಈ ಎಲ್ಲ ನಾಯಕರು ಕಠಿಣ ಕ್ರಮ ತಗೆದುಕೊಳ್ಳುವ ಮತ್ತು ತನಗೆ ನ್ಯಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ. ಇಷ್ಟಾಗಿಯೂ ಇಲ್ಲಿಯವರೆಗೆ ಆರೋಪಿಯ ವಿರುದ್ಧ ಯಾವುದೇ ಕ್ರಮವನ್ನು ತಗೆದುಕೊಂಡಿಲ್ಲ ಮತ್ತು ನನ್ನ ದೂರನ್ನು ನಿರ್ಲಕ್ಷಿಸಲಾಗಿದೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಆಕೆ ತಾನು ಅವಮಾನಿತಳಾಗಿ ಮತ್ತು ಕೈಬಿಡಲ್ಪಟ್ಟಂತೆ ಭಾಸವಾಯಿತು ಎಂದು ಹೇಳಿದ್ದಾರೆ. ದೂರಿನಲ್ಲಿ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಮತ್ತು ಕೃಷ್ಣಕುಮಾರ್‌ಗೆ ರಾಹುಲ್ ವಿರುದ್ಧ ಪ್ರತಿಭಟನೆಗಳನ್ನು ಮುನ್ನಡೆಸಲು ನೈತಿಕ ಅಧಿಕಾರವಿಲ್ಲ ಎಂದು ದೃಢಪಡಿಸಲಾಗಿದೆ. ಆಕೆ ಕೃಷ್ಣಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಕೃಷ್ಣಕುಮಾರ್ ಆರೋಪಗಳನ್ನು ತಳ್ಳಿಹಾಕಿದರು, “ಇದು ನನ್ನ ಪತ್ನಿಯ ಸಹೋದರಿಯನ್ನು ಒಳಗೊಂಡ ಆಸ್ತಿ ವಿವಾದವಷ್ಟೇ. ಇದು ಅವರ ಹಕ್ಕುಗಳನ್ನು ಬಲಪಡಿಸಲು ಸೃಷ್ಟಿಸಲಾದ ಸುಳ್ಳು ಪ್ರಕರಣವಾಗಿದೆ” ಎಂದು ಹೇಳಿದರು.

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ದ ತಾನು ನಡೆಸುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ಈ ದೂರು ಮತ್ತೆ ಸಕ್ರಿಯಗೊಂಡಿದೆ ಎಂದು ಅವರು ದೃಢಪಡಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಒಕ್ಕೂಟದ ಭಾಗವಾಗಿರುವ, ಮಾಜಿ ಬಿಜೆಪಿ ನಾಯಕ ಮತ್ತು ಈಗಿನ ಕಾಂಗ್ರೆಸ್ ವಕ್ತಾರರಾದ ಸಂದೀಪ್ ಜಿ. ವಾರಿಯರ್ ಈ ಪಿತೂರಿಯಲ್ಲಿ ಸೇರಿರುವ ಸಾಧ್ಯತೆಯಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂದೀಪ್ ವಾರಿಯರ್, “ಇದು ಆಸ್ತಿ ವಿವಾದವಲ್ಲ, ಇದು ಸಂಪೂರ್ಣ ಆಸ್ತಿ ಕಿತ್ತುಕೊಳ್ಳುವುದು ಆಗಿದೆ” ಎಂದು ಹೇಳಿದರು. ವಾರಿಯರ್ ಮಾತನಾಡುತ್ತಾ, ಪ್ರಧಾನಮಂತ್ರಿಯ ಕಚೇರಿಯು ಏಪ್ರಿಲ್ 22, 2025 ರಂದು ಕೃಷ್ಣಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿದೆ, ಇದು ಎಸ್‌ಪಿ ಕಚೇರಿಯಲ್ಲಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಮತ್ತು ಕೃಷ್ಣಕುಮಾರ್‌ನ ಹೇಳಿಕೆಗೆ ವಿರುದ್ಧವಾಗಿ, ಲೈಂಗಿಕ ಕಿರುಕುಳ ಪ್ರಕರಣವು ಖುಲಾಸೆಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಆತ ಮುಂದುವರೆದು, “ಸಂತ್ರಸ್ತಳು ಎಲ್ಲರಿಗೂ ಒಂದು ಆಶಾಕಿರಣವಾಗಿದ್ದಾಳೆ. ಆಕೆ ಕಾನೂನು ಓದಿ, ತನ್ನದೇ ಪ್ರಕರಣವನ್ನು ಹೋರಾಡಲು ವಕೀಲೆಯಾದಳು” ಎಂದು ಹೇಳಿದರು. ಆಕೆಯ ಗುರುತನ್ನು ಬಹಿರಂಗಪಡಿಸಿದ್ದಕ್ಕಾಗಿ ಕೃಷ್ಣಕುಮಾರ್ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂದು ಅವರು ಒತ್ತಾಯಿಸಿದರು.

ಆಕೆಯ ಧೈರ್ಯದ ಹೊರತಾಗಿಯೂ, ಸಂತ್ರಸ್ತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಅವಮಾನಿಸಲಾಗುತ್ತಿದೆ ಮತ್ತು ಕಿರುಕುಳ ನೀಡಲಾಗುತ್ತಿದೆ ಎಂದು ಆತ ಹೇಳಿದರು. “ಆಕೆ ಹೋರಾಡಲು ಮುಂದೆ ಬಂದಿದ್ದರೆ, ಆಕೆಯೊಂದಿಗೆ ನಿಲ್ಲುವುದು ಕೇರಳ ಸರಕಾರದ ಜವಾಬ್ದಾರಿಯಾಗಿದೆ” ಎಂದು ವಾರಿಯರ್ ಒತ್ತಿಹೇಳಿದರು.

ಬಿಜೆಪಿಯ ಕೋರ್ ಕಮಿಟಿಯ ಸದಸ್ಯರ ವಿರುದ್ಧ ಕಾಂಗ್ರೆಸ್ ಪಕ್ಷವು ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಾಡಿದಂತೆ ಕ್ರಮ ಕೈಗೊಳ್ಳುತ್ತದೆಯೇ ಎಂದು ಪ್ರಶ್ನಿಸುವ ಸಂದೇಶವನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಸೂಚ್ಯವಾಗಿ ಪೋಸ್ಟ್ ಮಾಡಿದ್ದಾರೆ.

ಕೇರಳದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಆರೋಪಗಳ ನಂತರ ಬಿಜೆಪಿಯ ವಿರುದ್ಧ ಎಕ್ಸ್‌ನಲ್ಲಿ ತೀವ್ರವಾಗಿ ವಾಗ್ದಾಳಿ ನಡೆಸಿತು.

ಬಿಜೆಪಿ ರಾಜ್ಯಾಧ್ಯಕ್ಷರ ಕಚೇರಿಯು ದೂರನ್ನು ಸ್ವೀಕರಿಸಿದ್ದನ್ನು ದೃಢಪಡಿಸಿತು, ಬೆಂಗಳೂರಿನಲ್ಲಿರುವ ಕೇರಳ ಬಿಜೆಪಿಯ ರಾಜ್ಯಾಧ್ಯಕ್ಷ ಚಂದ್ರಶೇಖರ್ ಅವರು, ತಾನು ವಾಪಸಾದ ನಂತರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ದುರಂತವೆಂದರೆ, ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್‌ ಅವರ ಹೇಳಿಕೆಯು “ನಿಷ್ಕ್ರಿಯ ಬಾಂಬ್‌” ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಗರು ಕೃಷ್ಣಕುಮಾರ್‌ಗೆ ಬೆಂಬಲವಾಗಿ ಒಗ್ಗೂಡಿದ್ದು, ಈ ಆರೋಪವನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ, ಕೃಷ್ಣಕುಮಾರ್‌ಗೆ ಬೆಂಬಲ ಸೂಚಿಸುವ ಪೋಸ್ಟರ್‌ಗಳು ಪಾಲಕ್ಕಾಡ್‌ ನಗರದಲ್ಲಿ ರಾರಾಜಿಸುತ್ತಿವೆ. ಈ ಘಟನೆಯು ಈ ಚುನಾವಣಾ ಕಣವನ್ನು ಮತ್ತಷ್ಟು ರಂಗೇರಿಸಿದೆ.

ಕೇರಳದಲ್ಲಿ ಇತ್ತೀಚೆಗೆ ಲೈಂಗಿಕ ಕಿರುಕುಳ ಆರೋಪಗಳು ರಾಜಕೀಯ ವಲಯದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿವೆ. ಈ ಬಿರುಗಾಳಿ ಕಾಂಗ್ರೆಸ್ ಪಕ್ಷದ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರ ಸುತ್ತ ಸುತ್ತಿಕೊಂಡಿದೆ. ಬಿಜೆಪಿ ಈ ವಿಷಯವನ್ನು ತೀವ್ರವಾಗಿ ಖಂಡಿಸಿದೆ. ಹಲವಾರು ಮಹಿಳೆಯರು ಮಾಂಕೂಟತ್ತಿತ್ತಿಲ್ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ. ಈ ವಿಷಯವು ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ತೀವ್ರ ಆಕ್ರೋಶಕ್ಕೆ ಒಳಗಾದ ಕಾಂಗ್ರೆಸ್ ಪಕ್ಷ ಮಾಂಕೂಟತ್ತಿಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ಅಸ್ಸಾಂನಲ್ಲಿ ಬಂಗಾಳಿ ಭಾಷಿಕರ ಪರಿಸ್ಥಿತಿ ಭೀಕರ: ಸತ್ಯಶೋಧನಾ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...