Homeಕರ್ನಾಟಕಲೈಂಗಿಕ ಕಿರುಕುಳ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ

ಲೈಂಗಿಕ ಕಿರುಕುಳ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ್ ಬಿವಿ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಅವರು ಮಹಿಳೆ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಅಸ್ಸಾಂ ಪೊಲೀಸರು ಏಪ್ರಿಲ್ 22 ರಂದು ಪ್ರಕರಣ ದಾಖಲಾಗಿತ್ತು.

ಅಸ್ಸಾಂ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿತ್ತು. ಕಿರುಕುಳ, ಹಲ್ಲೆ ಮತ್ತು ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಪದ ಬಳಕೆ ಅಥವಾ ಸನ್ನೆ ಮಾಡಿರುವ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಶ್ರೀನಿವಾಸ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67ರ ಅಡಿಯಲ್ಲಿಯೂ ಆರೋಪ ಮಾಡಲಾಗಿದೆ. ಎಲೆಕ್ಟ್ರಾನಿಕ್ ವಸ್ತುವಿನ ಮೂಲಕ ಅಶ್ಲೀಲ ಸಂಗತಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದನ್ನು ಈ ಸೆಕ್ಷನ್‌ ಶಿಕ್ಷಿಸುತ್ತದೆ.

“ಶ್ರೀನಿವಾಸ್ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ, ಆರು ತಿಂಗಳ ಕಾಲ ನನ್ನ ವಿರುದ್ಧ ತಾರತಮ್ಯ ಎಸಗಿದ್ದಾರೆ. ನನಗೆ ಮೌನವಾಗಿರಲು ಹೇಳಲಾಯಿತು. ನನ್ನ ಆರೋಪಗಳ ಬಗ್ಗೆ ಯಾವುದೇ ತನಿಖೆಯನ್ನು ಪ್ರಾರಂಭಿಸಲಿಲ್ಲ” ಎಂದು ದತ್ತಾ ಏಪ್ರಿಲ್ 18 ರಂದು ದೂರಿದ್ದಾರೆ.

ಮೇ 4 ರಂದು ಗೌಹಾಟಿ ಹೈಕೋರ್ಟ್ ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು, ನಂತರ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.

ಏಪ್ರಿಲ್ 18 ರಂದು ಯುವ ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ದತ್ತಾ ಅವರು ತನಗೆ ಮಾನಸಿಕ ಕಿರುಕುಳ ಮತ್ತು ಆರು ತಿಂಗಳ ಕಾಲ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು. ತನಗೆ ಮೌನವಾಗಿರಲು ಹೇಳಲಾಯಿತು ಮತ್ತು ತನ್ನ ಆರೋಪಗಳ ಬಗ್ಗೆ ಯಾವುದೇ ತನಿಖೆಯನ್ನು ಪ್ರಾರಂಭಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಏಪ್ರಿಲ್ 22 ರಂದು, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ದತ್ತಾ ಅವರನ್ನು ಆರು ವರ್ಷಗಳ ಕಾಲ ಸಂಘಟನೆಯ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಯಿತು.

ಬುಧವಾರ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು ರಾಯಪುರದಲ್ಲಿ ಫೆಬ್ರವರಿ 24 ಮತ್ತು 26 ರ ನಡುವೆ ನಡೆದ ಘಟನೆ ಎಂದು ಹೇಳಲಾಗಿದೆ ಮತ್ತು ಏಪ್ರಿಲ್‌ನಲ್ಲಿ ಅಸ್ಸಾಂನಲ್ಲಿ ದೂರು ದಾಖಲಿಸಲಾಗಿದೆ ಎಂದು ಗಮನಿಸಿದರು.

ಎಫ್‌ಐಆರ್ ದಾಖಲಿಸಲು ಎರಡು ತಿಂಗಳ ವಿಳಂಬವನ್ನು ಪರಿಗಣಿಸಿ, ಅರ್ಜಿದಾರರಿಗೆ ಮಧ್ಯಂತರ ರಕ್ಷಣೆಗೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ”ಬಂಧನದ ಸಂದರ್ಭದಲ್ಲಿ ಅರ್ಜಿದಾರರನ್ನು ರೂ 50,000 ಮೊತ್ತಕ್ಕೆ ಶ್ಯೂರಿಟಿಗಳನ್ನು ಒದಗಿಸುವ ಮೇಲೆ ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೆಂದು ನಾವು ನಿರ್ದೇಶಿಸುತ್ತೇವೆ” ಎಂದು ತಿಳಿಸಲಾಗಿದೆ.

ಶ್ರೀನಿವಾಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ”ದೂರು ಸಲ್ಲಿಸುವ ಮುನ್ನ ದತ್ತಾ ಅವರು ಮಾಡಿರುವ ಟ್ವೀಟ್‌ಗಳು ಪಕ್ಷದಲ್ಲಿ ತಾರತಮ್ಯಕ್ಕೆ ಸಂಬಂಧಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ದೂರು ದಾಖಲಿಸುವ ಮೊದಲು ಅವರು ಆರು ಮಾಧ್ಯಮ ಸಂದರ್ಶನಗಳನ್ನು ನೀಡಿದ್ದರು, ಆದರೆ ಲೈಂಗಿಕ ಕಿರುಕುಳದ ಯಾವುದೇ ಆರೋಪಗಳನ್ನು ಮಾಡಿಲ್ಲ” ಎಂದು ಅವರು ಹೇಳಿದರು.

ಏಪ್ರಿಲ್ 18 ರಂದು, ಶ್ರೀನಿವಾಸ್ ಅವರು ದತ್ತಾ ಅವರ ವಿರುದ್ಧ ”ಸಂಪೂರ್ಣವಾಗಿ ಅಸಂಸದೀಯ, ಅವಮಾನಕರ, ಮಾನಹಾನಿಕರ, ದುರುದ್ದೇಶಪೂರಿತ ಪದಗಳನ್ನು ಬಳಸಿದ್ದಾರೆ” ಎಂದು ಆರೋಪಿಸಿ ಕಾನೂನು ನೋಟಿಸ್ ಕಳುಹಿಸಿದ್ದರು. ದತ್ತಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವ ಉದ್ದೇಶದಿಂದ ಕಾಂಗ್ರೆಸ್ ತೊರೆಯುವ ವಾತಾವರಣವನ್ನು ಸೃಷ್ಟಿಸಲು ಪಕ್ಷವನ್ನು ಕೆಣಕುತ್ತಿದ್ದಾರೆ ಮತ್ತು ಮಾನಹಾನಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...