Homeಕರ್ನಾಟಕಲೈಂಗಿಕ ಕಿರುಕುಳ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ

ಲೈಂಗಿಕ ಕಿರುಕುಳ ಆರೋಪ: ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ್ ಬಿವಿ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಅವರು ಮಹಿಳೆ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಅಸ್ಸಾಂ ಪೊಲೀಸರು ಏಪ್ರಿಲ್ 22 ರಂದು ಪ್ರಕರಣ ದಾಖಲಾಗಿತ್ತು.

ಅಸ್ಸಾಂ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿತ್ತು. ಕಿರುಕುಳ, ಹಲ್ಲೆ ಮತ್ತು ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಪದ ಬಳಕೆ ಅಥವಾ ಸನ್ನೆ ಮಾಡಿರುವ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಶ್ರೀನಿವಾಸ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67ರ ಅಡಿಯಲ್ಲಿಯೂ ಆರೋಪ ಮಾಡಲಾಗಿದೆ. ಎಲೆಕ್ಟ್ರಾನಿಕ್ ವಸ್ತುವಿನ ಮೂಲಕ ಅಶ್ಲೀಲ ಸಂಗತಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದನ್ನು ಈ ಸೆಕ್ಷನ್‌ ಶಿಕ್ಷಿಸುತ್ತದೆ.

“ಶ್ರೀನಿವಾಸ್ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ, ಆರು ತಿಂಗಳ ಕಾಲ ನನ್ನ ವಿರುದ್ಧ ತಾರತಮ್ಯ ಎಸಗಿದ್ದಾರೆ. ನನಗೆ ಮೌನವಾಗಿರಲು ಹೇಳಲಾಯಿತು. ನನ್ನ ಆರೋಪಗಳ ಬಗ್ಗೆ ಯಾವುದೇ ತನಿಖೆಯನ್ನು ಪ್ರಾರಂಭಿಸಲಿಲ್ಲ” ಎಂದು ದತ್ತಾ ಏಪ್ರಿಲ್ 18 ರಂದು ದೂರಿದ್ದಾರೆ.

ಮೇ 4 ರಂದು ಗೌಹಾಟಿ ಹೈಕೋರ್ಟ್ ಪ್ರಥಮ ಮಾಹಿತಿ ವರದಿಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು, ನಂತರ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.

ಏಪ್ರಿಲ್ 18 ರಂದು ಯುವ ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ದತ್ತಾ ಅವರು ತನಗೆ ಮಾನಸಿಕ ಕಿರುಕುಳ ಮತ್ತು ಆರು ತಿಂಗಳ ಕಾಲ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು. ತನಗೆ ಮೌನವಾಗಿರಲು ಹೇಳಲಾಯಿತು ಮತ್ತು ತನ್ನ ಆರೋಪಗಳ ಬಗ್ಗೆ ಯಾವುದೇ ತನಿಖೆಯನ್ನು ಪ್ರಾರಂಭಿಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಏಪ್ರಿಲ್ 22 ರಂದು, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ದತ್ತಾ ಅವರನ್ನು ಆರು ವರ್ಷಗಳ ಕಾಲ ಸಂಘಟನೆಯ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಯಿತು.

ಬುಧವಾರ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು ರಾಯಪುರದಲ್ಲಿ ಫೆಬ್ರವರಿ 24 ಮತ್ತು 26 ರ ನಡುವೆ ನಡೆದ ಘಟನೆ ಎಂದು ಹೇಳಲಾಗಿದೆ ಮತ್ತು ಏಪ್ರಿಲ್‌ನಲ್ಲಿ ಅಸ್ಸಾಂನಲ್ಲಿ ದೂರು ದಾಖಲಿಸಲಾಗಿದೆ ಎಂದು ಗಮನಿಸಿದರು.

ಎಫ್‌ಐಆರ್ ದಾಖಲಿಸಲು ಎರಡು ತಿಂಗಳ ವಿಳಂಬವನ್ನು ಪರಿಗಣಿಸಿ, ಅರ್ಜಿದಾರರಿಗೆ ಮಧ್ಯಂತರ ರಕ್ಷಣೆಗೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ”ಬಂಧನದ ಸಂದರ್ಭದಲ್ಲಿ ಅರ್ಜಿದಾರರನ್ನು ರೂ 50,000 ಮೊತ್ತಕ್ಕೆ ಶ್ಯೂರಿಟಿಗಳನ್ನು ಒದಗಿಸುವ ಮೇಲೆ ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೆಂದು ನಾವು ನಿರ್ದೇಶಿಸುತ್ತೇವೆ” ಎಂದು ತಿಳಿಸಲಾಗಿದೆ.

ಶ್ರೀನಿವಾಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ”ದೂರು ಸಲ್ಲಿಸುವ ಮುನ್ನ ದತ್ತಾ ಅವರು ಮಾಡಿರುವ ಟ್ವೀಟ್‌ಗಳು ಪಕ್ಷದಲ್ಲಿ ತಾರತಮ್ಯಕ್ಕೆ ಸಂಬಂಧಿಸಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ದೂರು ದಾಖಲಿಸುವ ಮೊದಲು ಅವರು ಆರು ಮಾಧ್ಯಮ ಸಂದರ್ಶನಗಳನ್ನು ನೀಡಿದ್ದರು, ಆದರೆ ಲೈಂಗಿಕ ಕಿರುಕುಳದ ಯಾವುದೇ ಆರೋಪಗಳನ್ನು ಮಾಡಿಲ್ಲ” ಎಂದು ಅವರು ಹೇಳಿದರು.

ಏಪ್ರಿಲ್ 18 ರಂದು, ಶ್ರೀನಿವಾಸ್ ಅವರು ದತ್ತಾ ಅವರ ವಿರುದ್ಧ ”ಸಂಪೂರ್ಣವಾಗಿ ಅಸಂಸದೀಯ, ಅವಮಾನಕರ, ಮಾನಹಾನಿಕರ, ದುರುದ್ದೇಶಪೂರಿತ ಪದಗಳನ್ನು ಬಳಸಿದ್ದಾರೆ” ಎಂದು ಆರೋಪಿಸಿ ಕಾನೂನು ನೋಟಿಸ್ ಕಳುಹಿಸಿದ್ದರು. ದತ್ತಾ ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವ ಉದ್ದೇಶದಿಂದ ಕಾಂಗ್ರೆಸ್ ತೊರೆಯುವ ವಾತಾವರಣವನ್ನು ಸೃಷ್ಟಿಸಲು ಪಕ್ಷವನ್ನು ಕೆಣಕುತ್ತಿದ್ದಾರೆ ಮತ್ತು ಮಾನಹಾನಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...