Homeಮುಖಪುಟಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ಆರೋಪ : ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ಆರೋಪ : ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

- Advertisement -
- Advertisement -

ಇಸ್ಕಾನ್ ಸಂಸ್ಥೆ ನಡೆಸುವ ಶಾಲೆಗಳಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 24) ವಿಲೇವಾರಿ ಮಾಡಿದೆ.

ಅರ್ಜಿದಾರರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್), ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಮಕ್ಕಳ ಹಕ್ಕುಗಳ ಆಯೋಗಗಳ ಮೊರೆ ಹೋಗುವಂತೆ ಸೂಚಿಸಿದೆ.

ಆಂತರಿಕ ದಾಖಲೆಗಳು ಗಂಭೀರ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸೂಚಿಸುತ್ತವೆ. ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠ ವಿಚಾರಣೆ ನಡೆಸಿದೆ.

“ನಾವೀಗ ನ್ಯಾಯಾಲಯಕ್ಕೆ ತೋರಿಸಿರುವ ದಾಖಲೆಗಳು ಪ್ರಕರಣದ ಒಂದು ಸಣ್ಣ ಭಾಗ ಮಾತ್ರ. ನಿಜವಾಗಿ ಇದಕ್ಕಿಂತ ತುಂಬಾ ದೊಡ್ಡ ಮಟ್ಟದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅನ್ಯಾಯ ನಡೆಯುತ್ತಿದೆ ಎಂದು ಮಕ್ಕಳ ಹಕ್ಕುಗಳ ಸಂಸ್ಥೆಗಳಿಗೆ ಈ ಹಿಂದೆಯೇ ದೂರು ಕೊಟ್ಟಿದ್ದೇವೆ. ಆದರೆ, ಅವರು ಯಾವ ಉತ್ತರವೂ ಕೊಟ್ಟಿಲ್ಲ, ಯಾವ ಕ್ರಮವೂ ಕೈಗೊಂಡಿಲ್ಲ” ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದರು.

ವಾದ ಆಲಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಅರ್ಜಿದಾರರಿಗೆ ಎನ್‌ಸಿಪಿಆರ್‌ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ಆಯೋಗಗಳಿಗೆ ಮತ್ತೊಂದು ಜ್ಞಾಪನೆಯನ್ನು (ರಿಮೈಂಡರ್) ಕಳುಹಿಸಲು ಸೂಚಿಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ಪ್ರಾರಂಭಿಸಲಾಗಿದೆಯೇ ಎಂದು ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ವಕೀಲರು, “ನಮಗೆ ಪೂರ್ತಿ ಮಾಹಿತಿ ಗೊತ್ತಿಲ್ಲ, ಆದರೆ ನಾವು ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.

ಶ್ರೀಲ ಪ್ರಭುಪಾದ ಫೌಂಡೇಶನ್‌ನ ನ್ಯಾಯಮೂರ್ತಿ ರಜನೀಶ್ ಕಪೂರ್ ಮತ್ತು ರಾಧೇ ಕೃಷ್ಣ ಕಾನೂನು ನೆರವು ಪ್ರತಿಷ್ಠಾನ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಇಸ್ಕಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಈ ಅರ್ಜಿಯನ್ನು ಇಸ್ಕಾನ್‌ನ ಬೆಂಗಳೂರು ಬಣ ಮತ್ತು ಸಂಸ್ಥೆಯ ಇತರ ಘಟಕಗಳ ನಡುವೆ ನಡೆಯುತ್ತಿರುವ ವಿವಾದದ ಕಾರಣಕ್ಕೆ ಸಲ್ಲಿಸಲಾಗಿದೆ. ಪರಿಶೀಲನಾ ಪೀಠದಲ್ಲಿನ ವಿಭಜನೆಯ ನಂತರ ಈ ವಿವಾದವು ಮೂವರು ನ್ಯಾಯಾಧೀಶರ ಪೀಠದ ಮುಂದೆ ಪರಿಗಣನೆಗೆ ಬಾಕಿ ಇದೆ ಎಂದು ಹೇಳಿದ್ದಾರೆ.

ಪ್ರಕರಣವು ಬಣ ಸಂಘರ್ಷಕ್ಕೆ ಸಂಬಂಧಿಸಿದೆ ಎಂಬುದನ್ನು ಅರ್ಜಿದಾರರು ನಿರಾಕರಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ನ್ಯಾಯಮೂರ್ತಿ ನಾಗರತ್ನ ಅವರು, “ಈ ಪ್ರಕರಣವು ಮಕ್ಕಳಿಗೆ ಸಂಬಂಧಿಸಿದೆ. ಅದಕ್ಕಾಗಿಯೇ ನಾವು ನಿಮ್ಮನ್ನು ತಟಸ್ಥ ಸಂಸ್ಥೆಗೆ ಹೋಗಲು ಸೂಚಿಸಿದ್ದೇವೆ” ಎಂದು ಹೇಳಿದ್ದಾರೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...