Homeಮುಖಪುಟಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ಆರೋಪ : ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ಆರೋಪ : ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

- Advertisement -
- Advertisement -

ಇಸ್ಕಾನ್ ಸಂಸ್ಥೆ ನಡೆಸುವ ಶಾಲೆಗಳಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 24) ವಿಲೇವಾರಿ ಮಾಡಿದೆ.

ಅರ್ಜಿದಾರರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್), ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಮಕ್ಕಳ ಹಕ್ಕುಗಳ ಆಯೋಗಗಳ ಮೊರೆ ಹೋಗುವಂತೆ ಸೂಚಿಸಿದೆ.

ಆಂತರಿಕ ದಾಖಲೆಗಳು ಗಂಭೀರ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸೂಚಿಸುತ್ತವೆ. ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠ ವಿಚಾರಣೆ ನಡೆಸಿದೆ.

“ನಾವೀಗ ನ್ಯಾಯಾಲಯಕ್ಕೆ ತೋರಿಸಿರುವ ದಾಖಲೆಗಳು ಪ್ರಕರಣದ ಒಂದು ಸಣ್ಣ ಭಾಗ ಮಾತ್ರ. ನಿಜವಾಗಿ ಇದಕ್ಕಿಂತ ತುಂಬಾ ದೊಡ್ಡ ಮಟ್ಟದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅನ್ಯಾಯ ನಡೆಯುತ್ತಿದೆ ಎಂದು ಮಕ್ಕಳ ಹಕ್ಕುಗಳ ಸಂಸ್ಥೆಗಳಿಗೆ ಈ ಹಿಂದೆಯೇ ದೂರು ಕೊಟ್ಟಿದ್ದೇವೆ. ಆದರೆ, ಅವರು ಯಾವ ಉತ್ತರವೂ ಕೊಟ್ಟಿಲ್ಲ, ಯಾವ ಕ್ರಮವೂ ಕೈಗೊಂಡಿಲ್ಲ” ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದರು.

ವಾದ ಆಲಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಅರ್ಜಿದಾರರಿಗೆ ಎನ್‌ಸಿಪಿಆರ್‌ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ಆಯೋಗಗಳಿಗೆ ಮತ್ತೊಂದು ಜ್ಞಾಪನೆಯನ್ನು (ರಿಮೈಂಡರ್) ಕಳುಹಿಸಲು ಸೂಚಿಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ಪ್ರಾರಂಭಿಸಲಾಗಿದೆಯೇ ಎಂದು ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ವಕೀಲರು, “ನಮಗೆ ಪೂರ್ತಿ ಮಾಹಿತಿ ಗೊತ್ತಿಲ್ಲ, ಆದರೆ ನಾವು ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.

ಶ್ರೀಲ ಪ್ರಭುಪಾದ ಫೌಂಡೇಶನ್‌ನ ನ್ಯಾಯಮೂರ್ತಿ ರಜನೀಶ್ ಕಪೂರ್ ಮತ್ತು ರಾಧೇ ಕೃಷ್ಣ ಕಾನೂನು ನೆರವು ಪ್ರತಿಷ್ಠಾನ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಇಸ್ಕಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಈ ಅರ್ಜಿಯನ್ನು ಇಸ್ಕಾನ್‌ನ ಬೆಂಗಳೂರು ಬಣ ಮತ್ತು ಸಂಸ್ಥೆಯ ಇತರ ಘಟಕಗಳ ನಡುವೆ ನಡೆಯುತ್ತಿರುವ ವಿವಾದದ ಕಾರಣಕ್ಕೆ ಸಲ್ಲಿಸಲಾಗಿದೆ. ಪರಿಶೀಲನಾ ಪೀಠದಲ್ಲಿನ ವಿಭಜನೆಯ ನಂತರ ಈ ವಿವಾದವು ಮೂವರು ನ್ಯಾಯಾಧೀಶರ ಪೀಠದ ಮುಂದೆ ಪರಿಗಣನೆಗೆ ಬಾಕಿ ಇದೆ ಎಂದು ಹೇಳಿದ್ದಾರೆ.

ಪ್ರಕರಣವು ಬಣ ಸಂಘರ್ಷಕ್ಕೆ ಸಂಬಂಧಿಸಿದೆ ಎಂಬುದನ್ನು ಅರ್ಜಿದಾರರು ನಿರಾಕರಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ನ್ಯಾಯಮೂರ್ತಿ ನಾಗರತ್ನ ಅವರು, “ಈ ಪ್ರಕರಣವು ಮಕ್ಕಳಿಗೆ ಸಂಬಂಧಿಸಿದೆ. ಅದಕ್ಕಾಗಿಯೇ ನಾವು ನಿಮ್ಮನ್ನು ತಟಸ್ಥ ಸಂಸ್ಥೆಗೆ ಹೋಗಲು ಸೂಚಿಸಿದ್ದೇವೆ” ಎಂದು ಹೇಳಿದ್ದಾರೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...