Homeಮುಖಪುಟಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ಆರೋಪ : ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ಆರೋಪ : ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

- Advertisement -
- Advertisement -

ಇಸ್ಕಾನ್ ಸಂಸ್ಥೆ ನಡೆಸುವ ಶಾಲೆಗಳಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 24) ವಿಲೇವಾರಿ ಮಾಡಿದೆ.

ಅರ್ಜಿದಾರರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್), ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಮಕ್ಕಳ ಹಕ್ಕುಗಳ ಆಯೋಗಗಳ ಮೊರೆ ಹೋಗುವಂತೆ ಸೂಚಿಸಿದೆ.

ಆಂತರಿಕ ದಾಖಲೆಗಳು ಗಂಭೀರ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸೂಚಿಸುತ್ತವೆ. ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠ ವಿಚಾರಣೆ ನಡೆಸಿದೆ.

“ನಾವೀಗ ನ್ಯಾಯಾಲಯಕ್ಕೆ ತೋರಿಸಿರುವ ದಾಖಲೆಗಳು ಪ್ರಕರಣದ ಒಂದು ಸಣ್ಣ ಭಾಗ ಮಾತ್ರ. ನಿಜವಾಗಿ ಇದಕ್ಕಿಂತ ತುಂಬಾ ದೊಡ್ಡ ಮಟ್ಟದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅನ್ಯಾಯ ನಡೆಯುತ್ತಿದೆ ಎಂದು ಮಕ್ಕಳ ಹಕ್ಕುಗಳ ಸಂಸ್ಥೆಗಳಿಗೆ ಈ ಹಿಂದೆಯೇ ದೂರು ಕೊಟ್ಟಿದ್ದೇವೆ. ಆದರೆ, ಅವರು ಯಾವ ಉತ್ತರವೂ ಕೊಟ್ಟಿಲ್ಲ, ಯಾವ ಕ್ರಮವೂ ಕೈಗೊಂಡಿಲ್ಲ” ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದರು.

ವಾದ ಆಲಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಅರ್ಜಿದಾರರಿಗೆ ಎನ್‌ಸಿಪಿಆರ್‌ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ಆಯೋಗಗಳಿಗೆ ಮತ್ತೊಂದು ಜ್ಞಾಪನೆಯನ್ನು (ರಿಮೈಂಡರ್) ಕಳುಹಿಸಲು ಸೂಚಿಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ಪ್ರಾರಂಭಿಸಲಾಗಿದೆಯೇ ಎಂದು ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ವಕೀಲರು, “ನಮಗೆ ಪೂರ್ತಿ ಮಾಹಿತಿ ಗೊತ್ತಿಲ್ಲ, ಆದರೆ ನಾವು ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.

ಶ್ರೀಲ ಪ್ರಭುಪಾದ ಫೌಂಡೇಶನ್‌ನ ನ್ಯಾಯಮೂರ್ತಿ ರಜನೀಶ್ ಕಪೂರ್ ಮತ್ತು ರಾಧೇ ಕೃಷ್ಣ ಕಾನೂನು ನೆರವು ಪ್ರತಿಷ್ಠಾನ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಇಸ್ಕಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಈ ಅರ್ಜಿಯನ್ನು ಇಸ್ಕಾನ್‌ನ ಬೆಂಗಳೂರು ಬಣ ಮತ್ತು ಸಂಸ್ಥೆಯ ಇತರ ಘಟಕಗಳ ನಡುವೆ ನಡೆಯುತ್ತಿರುವ ವಿವಾದದ ಕಾರಣಕ್ಕೆ ಸಲ್ಲಿಸಲಾಗಿದೆ. ಪರಿಶೀಲನಾ ಪೀಠದಲ್ಲಿನ ವಿಭಜನೆಯ ನಂತರ ಈ ವಿವಾದವು ಮೂವರು ನ್ಯಾಯಾಧೀಶರ ಪೀಠದ ಮುಂದೆ ಪರಿಗಣನೆಗೆ ಬಾಕಿ ಇದೆ ಎಂದು ಹೇಳಿದ್ದಾರೆ.

ಪ್ರಕರಣವು ಬಣ ಸಂಘರ್ಷಕ್ಕೆ ಸಂಬಂಧಿಸಿದೆ ಎಂಬುದನ್ನು ಅರ್ಜಿದಾರರು ನಿರಾಕರಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ನ್ಯಾಯಮೂರ್ತಿ ನಾಗರತ್ನ ಅವರು, “ಈ ಪ್ರಕರಣವು ಮಕ್ಕಳಿಗೆ ಸಂಬಂಧಿಸಿದೆ. ಅದಕ್ಕಾಗಿಯೇ ನಾವು ನಿಮ್ಮನ್ನು ತಟಸ್ಥ ಸಂಸ್ಥೆಗೆ ಹೋಗಲು ಸೂಚಿಸಿದ್ದೇವೆ” ಎಂದು ಹೇಳಿದ್ದಾರೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...