Homeಮುಖಪುಟಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ಭೂಷಣ್ ಸಿಂಗ್‌ಗೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ಭೂಷಣ್ ಸಿಂಗ್‌ಗೆ ಜಾಮೀನು ನೀಡಿದ ದೆಹಲಿ ನ್ಯಾಯಾಲಯ

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೆಷನ್‌ನ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ ಮತ್ತು ಅವರ ಸಹಾಯಕ ಕಾರ್ಯದರ್ಶಿ ವಿನೋದ್ ಥೋಮರ್‌ರವರಿಗೆ ದೆಹಲಿಯ ರೋಸ್ ಅವಿನ್ಯೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ನ್ಯಾಯಾಲಯವು ಆರೋಪಿಗೆ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಂದು 25,000 ರೂ ಗಳ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 28ಕ್ಕೆ ಮೂಂದೂಡಿದೆ.

ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶವನ್ನು ತೊರೆಯಲು ಅವಕಾಶವಿಲ್ಲ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದಿಲ್ಲ ಅಥವಾ ಸಾಕ್ಷ್ಯವನ್ನು ಹಾಳುಮಾಡುವಂತಿಲ್ಲ ಎಂಬ ಷರತ್ತುಗಳನ್ನು ನ್ಯಾಯಾಲಯವು ವಿಧಿಸಿದೆ.

ದೆಹಲಿ ಪೊಲೀಸರು ನಾವು ಜಾಮೀನು ನೀಡಬಾರದೆಂದು ವಿರೋಧಿಸುವುದಿಲ್ಲ ಜೊತೆಗೆ ಆರೋಪಿ ಕಸ್ಟಡಿಗೆ ಬೇಕೆಂದು ಕೇಳುವುದಿಲ್ಲ. ಜಾಮೀನು ನೀಡುವ ವಿಚಾರ ನ್ಯಾಯಾಲಯದ ವಿವೇಚನೆಗೆ ಬಿಟ್ಟಿದೆ ಎಂದಿದ್ದರು. ಹಾಗಾಗಿ ಬ್ರಿಜ್‌ ಭೂಷಣ್‌ರವರಗೆ ಜಾಮೀನು ದೊರೆತಿದೆ.

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ನಿರ್ಗಮಿತ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮತ್ತು ಅವರಿಗೆ ಶಿಕ್ಷೆ ನೀಡಲು ಅರ್ಹರಾಗಿದ್ದಾರೆ ಎಂದು ದೆಹಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಪೊಲೀಸರು ಸೆಕ್ಷನ್ 506 (ಅಪರಾಧ ಬೆದರಿಕೆ), 354 (ಮಹಿಳೆಯರ ಅತಿರೇಕದ ನಮ್ರತೆ); 354 ಎ (ಲೈಂಗಿಕ ಕಿರುಕುಳ); ಮತ್ತು ಚಾರ್ಜ್‌ಶೀಟ್‌ನಲ್ಲಿ 354 ಡಿ (ಹಿಂಬಾಲಿಸುವಿಕೆ) ಮತ್ತು ಒಂದು ಪ್ರಕರಣದಲ್ಲಿ ಸಿಂಗ್‌ನ ಕಿರುಕುಳವು “ಪುನರಾವರ್ತನೆಯಾಗಿದೆ ಮತ್ತು ಮುಂದುವರೆಯುತ್ತಿದೆ” ಎಂದು ಆರೋಪ ಮಾಡಲಾಗಿದೆ.

ಆರೋಪಪಟ್ಟಿಯ ಪ್ರಕಾರ, ಪೊಲೀಸರು 108 ಸಾಕ್ಷಿಗಳೊಂದಿಗೆ ಮಾತನಾಡಿದ್ದು, ಅವರಲ್ಲಿ ಕುಸ್ತಿಪಟುಗಳು, ಕೋಚ್‌ಗಳು ಮತ್ತು ರೆಫರಿಗಳು ಸೇರಿದಂತೆ 15 ಮಂದಿ ಕುಸ್ತಿಪಟುಗಳು ಮಾಡಿದ ಆರೋಪಗಳನ್ನು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿ, ಮೈಕ್ ಕಿತ್ತೆಸೆದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...