Homeಕರ್ನಾಟಕಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

- Advertisement -
- Advertisement -

ಸಿಡಿ ಹಗರಣದ ಸಂತ್ರಸ್ತ ಯುವತಿ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

’ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ..?’ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಿಡಿ ಪ್ರಕರಣದ ಬಗ್ಗೆ ಬರೆದಿರುವ ವಿರೋಧ ಪಕ್ಷದ ನಾಯಕ ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವರ ಮೇಲೆ ಕಿಡಿಕಾರಿದ್ದಾರೆ. ಪ್ರಾಣ ಭಯ ಇದೆ ಎಂದು ಖುದ್ದು ಯುವತಿಯೇ ದೂರು ನೀಡಿದ್ದರೂ, ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

“ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಸಂತ್ರಸ್ತ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ‘ಆಕೆ’ ವಿಜಯ್ ಮಲ್ಯನೋ ಇಲ್ಲ ನೀರವ್ ಮೋದಿಯೋ? – ಸಿಡಿ ಪ್ರಕರಣದ ಕುರಿತು ಸಿದ್ದರಾಮಯ್ಯ

“ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್ ಐಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ” ಎಂದಿದ್ದಾರೆ.

ಸಂತ್ರಸ್ಥ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ ಮುಖ್ಯಮಂತ್ರಿಗಳು, ಗೃಹಸಚಿವರು ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಆದರೆ, ಫಲಿತಾಂಶ ಏನು..? ಎಂದು ಸರ್ಕಾರ ಆರೋಪಿ ರಮೇಶ್ ಜಾರಕಿಹೊಳಿಯನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

“ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ..?” ಎಂದು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿರೋಧ ಪಕ್ಷದ ಶಾಸಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ ಅಭಿಮಾನಿಗಳು ಕೂಡ ಡಿ.ಕೆ.ಶಿವಕುಮಾರ್‌ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಇಂದು(ಸೋಮವಾರ) ನ್ಯಾಯಾಧೀಶರ ಮುಂದೆ ಹಾಜರಾಗಿ ಸ್ಟೇಟ್‌ಮೆಂಟ್ 164 ದಾಖಲಿಸುವ ಸಾಧ್ಯತೆ ಇದೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...