Homeಮುಖಪುಟಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

- Advertisement -
- Advertisement -

ಬಿಹಾರ ಮೂಲದ ಅಪ್ರಾಪ್ತ ಬಾಲಕಿಯನ್ನು (13 ವರ್ಷ) ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದೂ ಅಲ್ಲದೆ, ಆಕೆಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿರುವುದು ಶುಕ್ರವಾರ (ಡಿ.8) ಬೆಳಕಿದೆ ಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಉದ್ಯೋಗದಾತ ಹಾಗೂ ಆತನ ಮಕ್ಕಳು ದೈಹಿಕ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಆರೋಪಿಸಿದ್ದು, ಕಳೆದ ಆರು ತಿಂಗಳಿನಿಂದ ಮನೆ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಮನೆಗೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ಬಾಲಕಿಯ ತಾಯಿಗೆ ಕಳೆದ ನಾಲ್ಕು ತಿಂಗಳಿಂದ ತನ್ನ ಮಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಸೆಕ್ಟರ್ 51 ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ತನ್ನ ಮಗಳು ಕೆಲಸ ಮಾಡುತ್ತಿದ್ದರಿಂದ ಮಹಿಳೆಯು ಮನೆ ಮಾಲೀಕರಿಗೆ ಹಲವು ಬಾರಿ ಮಗಳ ಜೊತೆ ಮಾತನಾಡಲು ಕರೆ ಮಾಡಿದ್ದರು. ಆದರೆ ಮಾತನಾಡಲು ಅವರು ಅವಕಾಶ ನೀಡಿರಲಿಲ್ಲ. ‘ಹಲವು ಬಾರಿ ಕರೆ ಮಾಡಿ ನನ್ನ ಮಗಳನ್ನು ಭೇಟಿಯಾಗಲು ಏಕೆ ಬಿಡುತ್ತಿಲ್ಲ ಎಂದು ನಾನು ಕೇಳಿದೆ, ಅವರು ನನ್ನ ಕರೆಯನ್ನು ಕಟ್ ಮಾಡಲು ಆರಂಭಿಸಿದರು. ಏನೋ ತಪ್ಪಾಗಿದೆ ಎಂದು ತಿಳಿದು ಅವರ ಮನೆಗೆ ಹೊರಟೆವು’ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಬಾಲಕಿಯ ಪೋಷಕರು ಆರೋಪಿಯ ಮನೆಗೆ ತೆರಳಿದಾಗ ತನ್ನ ಮಗಳನ್ನು ಗುರುತಿಸಲು ಅವರಿಗೆ ಸಾಧ್ಯವಾಗಿಲ್ಲ. ಏಕೆಂದರೆ, ಮನೆ ಮಾಲೀಕರು ಆಕೆಯ ಕೂದಲನ್ನು ಕಿತ್ತುಹಾಕಿದ್ದರು. ಸಾಲದ್ದಕ್ಕೆ ಆಕೆಯ ಕೈಯನ್ನು ಆಸಿಡ್‌ನಿಂದ ಸುಟ್ಟು ಹಾಕಿದ್ದರು. ಆಕೆಯ ಕುತ್ತಿಗೆಯಲ್ಲಿ ಮತ್ತು ಮುಖದಲ್ಲಿ ಹಲವು ಗಾಯದ ಗುರುತುಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

‘ಅವರು ತನ್ನ ಮೇಲೆ ಸುತ್ತಿಗೆ ಮತ್ತು ರಾಡ್‌ಗಳಿಂದ ಹಲ್ಲೆ ಮಾಡುತ್ತಿದ್ದರು. ಮನೆ ಮಾಲೀಕರ ಇಬ್ಬರು ಪುತ್ರರು ನನ್ನ ಬಟ್ಟೆ ಬಿಚ್ಚಿಸಿ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ. ಯಾರಿಗಾದರೂ ಹೇಳಿದರೆ ತಂದೆ-ತಾಯಿಯನ್ನು ಕೊಲ್ಲುವುದಾಗಿ ಬೆದರಿಸಿದ್ದಾರೆ. ತಾನು ನೆಲ ಒರೆಸುತ್ತಿದ್ದಾಗ ಆರೋಪಿಗಳು ಹಿಂದಿನಿಂದ ಬಂದು ಕೈ ಮೇಲೆ ಆಸಿಡ್ ಸುರಿದಿದ್ದಾರೆ ಎಂದು ಹೇಳಿದ್ದಾಳೆ. ಮಲಗಲು ಹೊದಿಕೆಗಳನ್ನೂ ನೀಡಲಿಲ್ಲ; ನೆಲದ ಮೇಲೆಯೇ ಮಲಗಬೇಕಿತ್ತು. ಥಳಿಸುವಾಗ ಶಬ್ಧ ಬರಬಾರದು ಎಂಬ ಕಾರಣಕ್ಕೆ ಬಾಯಿಗೆ ಬಟ್ಟೆಗಳನ್ನು ತುರುಕುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

ಬಾಲಕಿಗೆ ನಾಯಿಗಳು ಕಚ್ಚಿವೆ ಎಂದು ಅಧಿಕಾರಿಗಳು ಹೇಳಿದ್ದು, ‘ಮನೆ ಮಾಲೀಕರು ಮತ್ತು ಅವರ ಮಕ್ಕಳು ನೆಲದ ಮೇಲೆ ಬಿಸ್ಕೆಟ್ ಅನ್ನುಎಸೆಯುತ್ತಿದ್ದರು, ಅವುಗಳನ್ನು ತೆಗೆದುಕೊಳ್ಳಲು ನನಗೆ ಹೇಳುತ್ತಿದ್ದ ಅವರು, ನಾಯಿಯನ್ನು ಛೂ ಬಿಟ್ಟು ಕಚ್ಚಲು ಆದೇಶಿಸುತ್ತಿದ್ದರು ಎಂದೂ ಬಾಲಕಿ ಹೇಳಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ದಿನಕ್ಕೆ ಒಮ್ಮೆ ಮಾತ್ರ ಸಂಜೆ 4 ಗಂಟೆಗೆ ಬಾಲಕಿಗೆ ಆಹಾರ ನೀಡಲಾಗುತ್ತಿತ್ತು. ಕೆಲವೊಮ್ಮೆ ಮೂರು ದಿನಕ್ಕೊಮ್ಮೆ ಮಾತ್ರ ಊಟ ಕೊಡುತ್ತಿದ್ದರು. ಆಹಾರ ತಿನ್ನಲು ಯತ್ನಿಸಿದರೆ ಮಾಲೀಕರು ಬಾಲಕಿಯನ್ನು ಹೊಡೆಯುತ್ತಿದ್ದರು ಎನ್ನಲಾಗಿದೆ. ಪ್ರಸ್ತುತ ಆಕೆಯನ್ನು ಸೆಕ್ಟರ್ 10ರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...