Homeಮುಖಪುಟಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

- Advertisement -
- Advertisement -

ಬಿಹಾರ ಮೂಲದ ಅಪ್ರಾಪ್ತ ಬಾಲಕಿಯನ್ನು (13 ವರ್ಷ) ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದೂ ಅಲ್ಲದೆ, ಆಕೆಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿರುವುದು ಶುಕ್ರವಾರ (ಡಿ.8) ಬೆಳಕಿದೆ ಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಉದ್ಯೋಗದಾತ ಹಾಗೂ ಆತನ ಮಕ್ಕಳು ದೈಹಿಕ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಆರೋಪಿಸಿದ್ದು, ಕಳೆದ ಆರು ತಿಂಗಳಿನಿಂದ ಮನೆ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಮನೆಗೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ಬಾಲಕಿಯ ತಾಯಿಗೆ ಕಳೆದ ನಾಲ್ಕು ತಿಂಗಳಿಂದ ತನ್ನ ಮಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಸೆಕ್ಟರ್ 51 ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ತನ್ನ ಮಗಳು ಕೆಲಸ ಮಾಡುತ್ತಿದ್ದರಿಂದ ಮಹಿಳೆಯು ಮನೆ ಮಾಲೀಕರಿಗೆ ಹಲವು ಬಾರಿ ಮಗಳ ಜೊತೆ ಮಾತನಾಡಲು ಕರೆ ಮಾಡಿದ್ದರು. ಆದರೆ ಮಾತನಾಡಲು ಅವರು ಅವಕಾಶ ನೀಡಿರಲಿಲ್ಲ. ‘ಹಲವು ಬಾರಿ ಕರೆ ಮಾಡಿ ನನ್ನ ಮಗಳನ್ನು ಭೇಟಿಯಾಗಲು ಏಕೆ ಬಿಡುತ್ತಿಲ್ಲ ಎಂದು ನಾನು ಕೇಳಿದೆ, ಅವರು ನನ್ನ ಕರೆಯನ್ನು ಕಟ್ ಮಾಡಲು ಆರಂಭಿಸಿದರು. ಏನೋ ತಪ್ಪಾಗಿದೆ ಎಂದು ತಿಳಿದು ಅವರ ಮನೆಗೆ ಹೊರಟೆವು’ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಬಾಲಕಿಯ ಪೋಷಕರು ಆರೋಪಿಯ ಮನೆಗೆ ತೆರಳಿದಾಗ ತನ್ನ ಮಗಳನ್ನು ಗುರುತಿಸಲು ಅವರಿಗೆ ಸಾಧ್ಯವಾಗಿಲ್ಲ. ಏಕೆಂದರೆ, ಮನೆ ಮಾಲೀಕರು ಆಕೆಯ ಕೂದಲನ್ನು ಕಿತ್ತುಹಾಕಿದ್ದರು. ಸಾಲದ್ದಕ್ಕೆ ಆಕೆಯ ಕೈಯನ್ನು ಆಸಿಡ್‌ನಿಂದ ಸುಟ್ಟು ಹಾಕಿದ್ದರು. ಆಕೆಯ ಕುತ್ತಿಗೆಯಲ್ಲಿ ಮತ್ತು ಮುಖದಲ್ಲಿ ಹಲವು ಗಾಯದ ಗುರುತುಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

‘ಅವರು ತನ್ನ ಮೇಲೆ ಸುತ್ತಿಗೆ ಮತ್ತು ರಾಡ್‌ಗಳಿಂದ ಹಲ್ಲೆ ಮಾಡುತ್ತಿದ್ದರು. ಮನೆ ಮಾಲೀಕರ ಇಬ್ಬರು ಪುತ್ರರು ನನ್ನ ಬಟ್ಟೆ ಬಿಚ್ಚಿಸಿ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ. ಯಾರಿಗಾದರೂ ಹೇಳಿದರೆ ತಂದೆ-ತಾಯಿಯನ್ನು ಕೊಲ್ಲುವುದಾಗಿ ಬೆದರಿಸಿದ್ದಾರೆ. ತಾನು ನೆಲ ಒರೆಸುತ್ತಿದ್ದಾಗ ಆರೋಪಿಗಳು ಹಿಂದಿನಿಂದ ಬಂದು ಕೈ ಮೇಲೆ ಆಸಿಡ್ ಸುರಿದಿದ್ದಾರೆ ಎಂದು ಹೇಳಿದ್ದಾಳೆ. ಮಲಗಲು ಹೊದಿಕೆಗಳನ್ನೂ ನೀಡಲಿಲ್ಲ; ನೆಲದ ಮೇಲೆಯೇ ಮಲಗಬೇಕಿತ್ತು. ಥಳಿಸುವಾಗ ಶಬ್ಧ ಬರಬಾರದು ಎಂಬ ಕಾರಣಕ್ಕೆ ಬಾಯಿಗೆ ಬಟ್ಟೆಗಳನ್ನು ತುರುಕುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

ಬಾಲಕಿಗೆ ನಾಯಿಗಳು ಕಚ್ಚಿವೆ ಎಂದು ಅಧಿಕಾರಿಗಳು ಹೇಳಿದ್ದು, ‘ಮನೆ ಮಾಲೀಕರು ಮತ್ತು ಅವರ ಮಕ್ಕಳು ನೆಲದ ಮೇಲೆ ಬಿಸ್ಕೆಟ್ ಅನ್ನುಎಸೆಯುತ್ತಿದ್ದರು, ಅವುಗಳನ್ನು ತೆಗೆದುಕೊಳ್ಳಲು ನನಗೆ ಹೇಳುತ್ತಿದ್ದ ಅವರು, ನಾಯಿಯನ್ನು ಛೂ ಬಿಟ್ಟು ಕಚ್ಚಲು ಆದೇಶಿಸುತ್ತಿದ್ದರು ಎಂದೂ ಬಾಲಕಿ ಹೇಳಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ದಿನಕ್ಕೆ ಒಮ್ಮೆ ಮಾತ್ರ ಸಂಜೆ 4 ಗಂಟೆಗೆ ಬಾಲಕಿಗೆ ಆಹಾರ ನೀಡಲಾಗುತ್ತಿತ್ತು. ಕೆಲವೊಮ್ಮೆ ಮೂರು ದಿನಕ್ಕೊಮ್ಮೆ ಮಾತ್ರ ಊಟ ಕೊಡುತ್ತಿದ್ದರು. ಆಹಾರ ತಿನ್ನಲು ಯತ್ನಿಸಿದರೆ ಮಾಲೀಕರು ಬಾಲಕಿಯನ್ನು ಹೊಡೆಯುತ್ತಿದ್ದರು ಎನ್ನಲಾಗಿದೆ. ಪ್ರಸ್ತುತ ಆಕೆಯನ್ನು ಸೆಕ್ಟರ್ 10ರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...