Homeಮುಖಪುಟಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

- Advertisement -
- Advertisement -

ಬಿಹಾರ ಮೂಲದ ಅಪ್ರಾಪ್ತ ಬಾಲಕಿಯನ್ನು (13 ವರ್ಷ) ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದೂ ಅಲ್ಲದೆ, ಆಕೆಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿರುವುದು ಶುಕ್ರವಾರ (ಡಿ.8) ಬೆಳಕಿದೆ ಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಉದ್ಯೋಗದಾತ ಹಾಗೂ ಆತನ ಮಕ್ಕಳು ದೈಹಿಕ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಆರೋಪಿಸಿದ್ದು, ಕಳೆದ ಆರು ತಿಂಗಳಿನಿಂದ ಮನೆ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಮನೆಗೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ಬಾಲಕಿಯ ತಾಯಿಗೆ ಕಳೆದ ನಾಲ್ಕು ತಿಂಗಳಿಂದ ತನ್ನ ಮಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಸೆಕ್ಟರ್ 51 ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ತನ್ನ ಮಗಳು ಕೆಲಸ ಮಾಡುತ್ತಿದ್ದರಿಂದ ಮಹಿಳೆಯು ಮನೆ ಮಾಲೀಕರಿಗೆ ಹಲವು ಬಾರಿ ಮಗಳ ಜೊತೆ ಮಾತನಾಡಲು ಕರೆ ಮಾಡಿದ್ದರು. ಆದರೆ ಮಾತನಾಡಲು ಅವರು ಅವಕಾಶ ನೀಡಿರಲಿಲ್ಲ. ‘ಹಲವು ಬಾರಿ ಕರೆ ಮಾಡಿ ನನ್ನ ಮಗಳನ್ನು ಭೇಟಿಯಾಗಲು ಏಕೆ ಬಿಡುತ್ತಿಲ್ಲ ಎಂದು ನಾನು ಕೇಳಿದೆ, ಅವರು ನನ್ನ ಕರೆಯನ್ನು ಕಟ್ ಮಾಡಲು ಆರಂಭಿಸಿದರು. ಏನೋ ತಪ್ಪಾಗಿದೆ ಎಂದು ತಿಳಿದು ಅವರ ಮನೆಗೆ ಹೊರಟೆವು’ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಬಾಲಕಿಯ ಪೋಷಕರು ಆರೋಪಿಯ ಮನೆಗೆ ತೆರಳಿದಾಗ ತನ್ನ ಮಗಳನ್ನು ಗುರುತಿಸಲು ಅವರಿಗೆ ಸಾಧ್ಯವಾಗಿಲ್ಲ. ಏಕೆಂದರೆ, ಮನೆ ಮಾಲೀಕರು ಆಕೆಯ ಕೂದಲನ್ನು ಕಿತ್ತುಹಾಕಿದ್ದರು. ಸಾಲದ್ದಕ್ಕೆ ಆಕೆಯ ಕೈಯನ್ನು ಆಸಿಡ್‌ನಿಂದ ಸುಟ್ಟು ಹಾಕಿದ್ದರು. ಆಕೆಯ ಕುತ್ತಿಗೆಯಲ್ಲಿ ಮತ್ತು ಮುಖದಲ್ಲಿ ಹಲವು ಗಾಯದ ಗುರುತುಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

‘ಅವರು ತನ್ನ ಮೇಲೆ ಸುತ್ತಿಗೆ ಮತ್ತು ರಾಡ್‌ಗಳಿಂದ ಹಲ್ಲೆ ಮಾಡುತ್ತಿದ್ದರು. ಮನೆ ಮಾಲೀಕರ ಇಬ್ಬರು ಪುತ್ರರು ನನ್ನ ಬಟ್ಟೆ ಬಿಚ್ಚಿಸಿ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ. ಯಾರಿಗಾದರೂ ಹೇಳಿದರೆ ತಂದೆ-ತಾಯಿಯನ್ನು ಕೊಲ್ಲುವುದಾಗಿ ಬೆದರಿಸಿದ್ದಾರೆ. ತಾನು ನೆಲ ಒರೆಸುತ್ತಿದ್ದಾಗ ಆರೋಪಿಗಳು ಹಿಂದಿನಿಂದ ಬಂದು ಕೈ ಮೇಲೆ ಆಸಿಡ್ ಸುರಿದಿದ್ದಾರೆ ಎಂದು ಹೇಳಿದ್ದಾಳೆ. ಮಲಗಲು ಹೊದಿಕೆಗಳನ್ನೂ ನೀಡಲಿಲ್ಲ; ನೆಲದ ಮೇಲೆಯೇ ಮಲಗಬೇಕಿತ್ತು. ಥಳಿಸುವಾಗ ಶಬ್ಧ ಬರಬಾರದು ಎಂಬ ಕಾರಣಕ್ಕೆ ಬಾಯಿಗೆ ಬಟ್ಟೆಗಳನ್ನು ತುರುಕುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

ಬಾಲಕಿಗೆ ನಾಯಿಗಳು ಕಚ್ಚಿವೆ ಎಂದು ಅಧಿಕಾರಿಗಳು ಹೇಳಿದ್ದು, ‘ಮನೆ ಮಾಲೀಕರು ಮತ್ತು ಅವರ ಮಕ್ಕಳು ನೆಲದ ಮೇಲೆ ಬಿಸ್ಕೆಟ್ ಅನ್ನುಎಸೆಯುತ್ತಿದ್ದರು, ಅವುಗಳನ್ನು ತೆಗೆದುಕೊಳ್ಳಲು ನನಗೆ ಹೇಳುತ್ತಿದ್ದ ಅವರು, ನಾಯಿಯನ್ನು ಛೂ ಬಿಟ್ಟು ಕಚ್ಚಲು ಆದೇಶಿಸುತ್ತಿದ್ದರು ಎಂದೂ ಬಾಲಕಿ ಹೇಳಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ದಿನಕ್ಕೆ ಒಮ್ಮೆ ಮಾತ್ರ ಸಂಜೆ 4 ಗಂಟೆಗೆ ಬಾಲಕಿಗೆ ಆಹಾರ ನೀಡಲಾಗುತ್ತಿತ್ತು. ಕೆಲವೊಮ್ಮೆ ಮೂರು ದಿನಕ್ಕೊಮ್ಮೆ ಮಾತ್ರ ಊಟ ಕೊಡುತ್ತಿದ್ದರು. ಆಹಾರ ತಿನ್ನಲು ಯತ್ನಿಸಿದರೆ ಮಾಲೀಕರು ಬಾಲಕಿಯನ್ನು ಹೊಡೆಯುತ್ತಿದ್ದರು ಎನ್ನಲಾಗಿದೆ. ಪ್ರಸ್ತುತ ಆಕೆಯನ್ನು ಸೆಕ್ಟರ್ 10ರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...