Homeಮುಖಪುಟಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

ಮನೆ ಕೆಲಸಕ್ಕಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಕೂಡಿಹಾಕಿ ಥಳಿಸಿದ ಮಾಲೀಕ!

- Advertisement -
- Advertisement -

ಬಿಹಾರ ಮೂಲದ ಅಪ್ರಾಪ್ತ ಬಾಲಕಿಯನ್ನು (13 ವರ್ಷ) ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದೂ ಅಲ್ಲದೆ, ಆಕೆಗೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿರುವುದು ಶುಕ್ರವಾರ (ಡಿ.8) ಬೆಳಕಿದೆ ಬಂದಿದೆ.

ಅಪ್ರಾಪ್ತ ಬಾಲಕಿ ಮೇಲೆ ಉದ್ಯೋಗದಾತ ಹಾಗೂ ಆತನ ಮಕ್ಕಳು ದೈಹಿಕ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಆರೋಪಿಸಿದ್ದು, ಕಳೆದ ಆರು ತಿಂಗಳಿನಿಂದ ಮನೆ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಮನೆಗೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ಬಾಲಕಿಯ ತಾಯಿಗೆ ಕಳೆದ ನಾಲ್ಕು ತಿಂಗಳಿಂದ ತನ್ನ ಮಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಸೆಕ್ಟರ್ 51 ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

ತಾನು ಈ ಹಿಂದೆ ಕೆಲಸ ಮಾಡುತ್ತಿದ್ದ ಮನೆಯಲ್ಲೇ ತನ್ನ ಮಗಳು ಕೆಲಸ ಮಾಡುತ್ತಿದ್ದರಿಂದ ಮಹಿಳೆಯು ಮನೆ ಮಾಲೀಕರಿಗೆ ಹಲವು ಬಾರಿ ಮಗಳ ಜೊತೆ ಮಾತನಾಡಲು ಕರೆ ಮಾಡಿದ್ದರು. ಆದರೆ ಮಾತನಾಡಲು ಅವರು ಅವಕಾಶ ನೀಡಿರಲಿಲ್ಲ. ‘ಹಲವು ಬಾರಿ ಕರೆ ಮಾಡಿ ನನ್ನ ಮಗಳನ್ನು ಭೇಟಿಯಾಗಲು ಏಕೆ ಬಿಡುತ್ತಿಲ್ಲ ಎಂದು ನಾನು ಕೇಳಿದೆ, ಅವರು ನನ್ನ ಕರೆಯನ್ನು ಕಟ್ ಮಾಡಲು ಆರಂಭಿಸಿದರು. ಏನೋ ತಪ್ಪಾಗಿದೆ ಎಂದು ತಿಳಿದು ಅವರ ಮನೆಗೆ ಹೊರಟೆವು’ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಬಾಲಕಿಯ ಪೋಷಕರು ಆರೋಪಿಯ ಮನೆಗೆ ತೆರಳಿದಾಗ ತನ್ನ ಮಗಳನ್ನು ಗುರುತಿಸಲು ಅವರಿಗೆ ಸಾಧ್ಯವಾಗಿಲ್ಲ. ಏಕೆಂದರೆ, ಮನೆ ಮಾಲೀಕರು ಆಕೆಯ ಕೂದಲನ್ನು ಕಿತ್ತುಹಾಕಿದ್ದರು. ಸಾಲದ್ದಕ್ಕೆ ಆಕೆಯ ಕೈಯನ್ನು ಆಸಿಡ್‌ನಿಂದ ಸುಟ್ಟು ಹಾಕಿದ್ದರು. ಆಕೆಯ ಕುತ್ತಿಗೆಯಲ್ಲಿ ಮತ್ತು ಮುಖದಲ್ಲಿ ಹಲವು ಗಾಯದ ಗುರುತುಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

‘ಅವರು ತನ್ನ ಮೇಲೆ ಸುತ್ತಿಗೆ ಮತ್ತು ರಾಡ್‌ಗಳಿಂದ ಹಲ್ಲೆ ಮಾಡುತ್ತಿದ್ದರು. ಮನೆ ಮಾಲೀಕರ ಇಬ್ಬರು ಪುತ್ರರು ನನ್ನ ಬಟ್ಟೆ ಬಿಚ್ಚಿಸಿ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ. ಯಾರಿಗಾದರೂ ಹೇಳಿದರೆ ತಂದೆ-ತಾಯಿಯನ್ನು ಕೊಲ್ಲುವುದಾಗಿ ಬೆದರಿಸಿದ್ದಾರೆ. ತಾನು ನೆಲ ಒರೆಸುತ್ತಿದ್ದಾಗ ಆರೋಪಿಗಳು ಹಿಂದಿನಿಂದ ಬಂದು ಕೈ ಮೇಲೆ ಆಸಿಡ್ ಸುರಿದಿದ್ದಾರೆ ಎಂದು ಹೇಳಿದ್ದಾಳೆ. ಮಲಗಲು ಹೊದಿಕೆಗಳನ್ನೂ ನೀಡಲಿಲ್ಲ; ನೆಲದ ಮೇಲೆಯೇ ಮಲಗಬೇಕಿತ್ತು. ಥಳಿಸುವಾಗ ಶಬ್ಧ ಬರಬಾರದು ಎಂಬ ಕಾರಣಕ್ಕೆ ಬಾಯಿಗೆ ಬಟ್ಟೆಗಳನ್ನು ತುರುಕುತ್ತಿದ್ದರು ಎಂದು ಬಾಲಕಿ ನಮಗೆ ತಿಳಿಸಿದ್ದಾರೆ’ ಎಂದು ಅವರು ಹೇಳಿದರು.

ಬಾಲಕಿಗೆ ನಾಯಿಗಳು ಕಚ್ಚಿವೆ ಎಂದು ಅಧಿಕಾರಿಗಳು ಹೇಳಿದ್ದು, ‘ಮನೆ ಮಾಲೀಕರು ಮತ್ತು ಅವರ ಮಕ್ಕಳು ನೆಲದ ಮೇಲೆ ಬಿಸ್ಕೆಟ್ ಅನ್ನುಎಸೆಯುತ್ತಿದ್ದರು, ಅವುಗಳನ್ನು ತೆಗೆದುಕೊಳ್ಳಲು ನನಗೆ ಹೇಳುತ್ತಿದ್ದ ಅವರು, ನಾಯಿಯನ್ನು ಛೂ ಬಿಟ್ಟು ಕಚ್ಚಲು ಆದೇಶಿಸುತ್ತಿದ್ದರು ಎಂದೂ ಬಾಲಕಿ ಹೇಳಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ದಿನಕ್ಕೆ ಒಮ್ಮೆ ಮಾತ್ರ ಸಂಜೆ 4 ಗಂಟೆಗೆ ಬಾಲಕಿಗೆ ಆಹಾರ ನೀಡಲಾಗುತ್ತಿತ್ತು. ಕೆಲವೊಮ್ಮೆ ಮೂರು ದಿನಕ್ಕೊಮ್ಮೆ ಮಾತ್ರ ಊಟ ಕೊಡುತ್ತಿದ್ದರು. ಆಹಾರ ತಿನ್ನಲು ಯತ್ನಿಸಿದರೆ ಮಾಲೀಕರು ಬಾಲಕಿಯನ್ನು ಹೊಡೆಯುತ್ತಿದ್ದರು ಎನ್ನಲಾಗಿದೆ. ಪ್ರಸ್ತುತ ಆಕೆಯನ್ನು ಸೆಕ್ಟರ್ 10ರ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...