Homeಫ್ಯಾಕ್ಟ್‌ಚೆಕ್ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ.

- Advertisement -
- Advertisement -

ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೇರಳದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಹಿಂದೂಗಳು ಅಲ್ಪ ಸಂಖ್ಯಾತರಾಗಿದ್ದು, ಅವರ ಮೇಲೆ ಇಂತಹ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಅದಕ್ಕೆ ಸಾಕ್ಷಿಯಾಗಿ ಈ ವಿಡಿಯೋ ನೀಡಲಾಗಿತ್ತು.

ಆ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹುಡುಗಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ದೈಹಿಕ-ಲೈಂಗಿಕ ಹಲ್ಲೆಗೆ ಮುಂದಾಗುತ್ತಾನೆ. ಆಕೆ ಬಿಟ್ಟುಬಿಡುವಂತೆ ಎಷ್ಟೇ ಬೇಡಿಕೊಂಡರೂ, ಕಿರುಚಿದರೂ ಸಹ ಆತ ಅದನ್ನು ಗಮನಿಸಿದೆ ಆಕೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಮುಂದುವರೆಸುತ್ತಾನೆ. ಇದೇ ವೇಳೆ ಮತ್ತೋರ್ವ ಯುವತಿ ಆಕೆಯ ರಕ್ಷಣೆಗೆ ಮುಂದಾಗುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ. ಈ ಮೂವರ ಧ್ವನಿಯನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ.

ಹಾಗಾದರೆ, ಆ ವಿಡಿಯೋ ಕೇರಳ ರಾಜ್ಯದ್ದೇ?, ಅಲ್ಲಿ ನಡೆದದ್ದು ಏನು ಎಂಬುದನ್ನು ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಈ ವಿಡಿಯೋದ ಅಸಲಿ ಕಥೆಯನ್ನು ಹೊರಗೆಡವಿದ್ದು, ಸತ್ಯವನ್ನು ಬಯಲು ಮಾಡಿದೆ. ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ. ಜೊತೆಗೆ ಸ್ವತಃ ಯುವತಿಯ ಗೆಳೆಯನೇ ಆತನ ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಅಂಶವನ್ನು ಪತ್ತೆ ಮಾಡಿದೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಸೆ.7 ರಂದು ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರು, “ಇದು ಕೇರಳದ ಮಹಿಳೆಯೊಬ್ಬಳ ಕಿರುಕುಳವನ್ನು ತೋರಿಸುವ ಏಕೈಕ ವೈರಲ್ ವಿಡಿಯೋ ಅಲ್ಲ. ಇಂತಹ ಘಟನೆಗಳು ಅಲ್ಲಿ ಸಾಮಾನ್ಯವಾಗಿದೆ. ಇದಕ್ಕೆ ಮುಖ್ಯ ಕಾರಣವೇನೆಂದರೆ, ಹಿಂದೂಗಳು ಆ ರಾಜ್ಯದಲ್ಲಿ ಅಲ್ಪಸಂಖ್ಯಾತರು” ಎಂದು ಶೀರ್ಷಿಕೆ ನೀಡಿದ್ದರು.

ಟ್ವೀಟ್ ಮಾಡಿ ಅದನ್ನು ಡಿಲೀಟ್ ಮಾಡಿದ್ದರೂ ಸಹ ಅಷ್ಟರಲ್ಲಿ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕೂಡ ಇದನ್ನು ರಿಟ್ವೀಟ್ ಮಾಡಿದ್ದು, ಈ ವಿಷಯವನ್ನು ಕೈಗೆತ್ತಿಕೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗವನ್ನು ಕೋರಿದ್ದರು.

ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಇನ್ವಿಡ್ ಬಳಸಿ ಈ ವಿಡಿಯೋ ಕೀಫ್ರೇಮ್ಗಳಲ್ಲಿ ಒಂದರ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನಿಸಿದಾಗ ಈ ಘಟನೆಯ ಸತ್ಯಾಸತ್ಯತೆ ಬಯಲಾಗಿದೆ. ಈ ಘಟನೆಯ ಕುರಿತು “ದಿ ಟೈಮ್ಸ್ ಆಫ್ ಇಂಡಿಯಾ” ವರದಿಯನ್ನೂ ನಾವು ಶೋಧಿಸಿದ್ದೇವೆ ಎಂದಿದೆ. ಈ ವರದಿಯ ಪ್ರಕಾರ 2017ರ ಆಗಸ್ಟ್‌ನಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆದರೆ, ಈ ವಿಡಿಯೋ ಮಾತ್ರ ಈಗ ವೈರಲ್ ಆಗುತ್ತಿದೆ ಎಂಬುದು ತಿಳಿದುಬಂದಿದೆ ಎಂದಿದ್ದಾರೆ.

“ದಿ ಹಿಂದೂ” ವರದಿ ಪ್ರಕಾರ,  ಆಗಸ್ಟ್ 29, 2017 ರಂದು ಬಾಲಕಿ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೀತಿಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕೆ, ತನ್ನ ಗೆಳೆಯ ಸಾಯಿ ಎಂಬ ವ್ಯಕ್ತಿಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ. ಅಲ್ಲದೆ, ಯುವಕನ ಸ್ನೇಹಿತ ಕಾರ್ತಿಕ್ ಮತ್ತು ಪವನ್ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಆಗಲೇ ಅರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

ಇನ್ನು ಕೇರಳದಲ್ಲಿ ಹಿಂದೂಗಳು ಅಲ್ಪಸಂಖ್ಯಾತರೇ? ಎಂಬ ಪ್ರಶ್ನೆಗೆ 2011 ರ ಜನಗಣತಿ ಉತ್ತರ ನಿಡುತ್ತದೆ. ಇದರ ಪ್ರಕಾರ ಕೇರಳದ ಜನಸಂಖ್ಯೆಯ ಶೇಕಡಾ 54.7 ರಷ್ಟು ಹಿಂದೂಗಳು, ಮುಸ್ಲಿಮರು ಶೇ. 26.5 ಮತ್ತು ಕ್ರಿಶ್ಚಿಯನ್ನರು ಶೇ.18.3 ಇದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...