Homeಫ್ಯಾಕ್ಟ್‌ಚೆಕ್ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ.

- Advertisement -
- Advertisement -

ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೇರಳದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಹಿಂದೂಗಳು ಅಲ್ಪ ಸಂಖ್ಯಾತರಾಗಿದ್ದು, ಅವರ ಮೇಲೆ ಇಂತಹ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಅದಕ್ಕೆ ಸಾಕ್ಷಿಯಾಗಿ ಈ ವಿಡಿಯೋ ನೀಡಲಾಗಿತ್ತು.

ಆ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹುಡುಗಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ದೈಹಿಕ-ಲೈಂಗಿಕ ಹಲ್ಲೆಗೆ ಮುಂದಾಗುತ್ತಾನೆ. ಆಕೆ ಬಿಟ್ಟುಬಿಡುವಂತೆ ಎಷ್ಟೇ ಬೇಡಿಕೊಂಡರೂ, ಕಿರುಚಿದರೂ ಸಹ ಆತ ಅದನ್ನು ಗಮನಿಸಿದೆ ಆಕೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಮುಂದುವರೆಸುತ್ತಾನೆ. ಇದೇ ವೇಳೆ ಮತ್ತೋರ್ವ ಯುವತಿ ಆಕೆಯ ರಕ್ಷಣೆಗೆ ಮುಂದಾಗುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ. ಈ ಮೂವರ ಧ್ವನಿಯನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ.

ಹಾಗಾದರೆ, ಆ ವಿಡಿಯೋ ಕೇರಳ ರಾಜ್ಯದ್ದೇ?, ಅಲ್ಲಿ ನಡೆದದ್ದು ಏನು ಎಂಬುದನ್ನು ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಈ ವಿಡಿಯೋದ ಅಸಲಿ ಕಥೆಯನ್ನು ಹೊರಗೆಡವಿದ್ದು, ಸತ್ಯವನ್ನು ಬಯಲು ಮಾಡಿದೆ. ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ. ಜೊತೆಗೆ ಸ್ವತಃ ಯುವತಿಯ ಗೆಳೆಯನೇ ಆತನ ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಅಂಶವನ್ನು ಪತ್ತೆ ಮಾಡಿದೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಸೆ.7 ರಂದು ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರು, “ಇದು ಕೇರಳದ ಮಹಿಳೆಯೊಬ್ಬಳ ಕಿರುಕುಳವನ್ನು ತೋರಿಸುವ ಏಕೈಕ ವೈರಲ್ ವಿಡಿಯೋ ಅಲ್ಲ. ಇಂತಹ ಘಟನೆಗಳು ಅಲ್ಲಿ ಸಾಮಾನ್ಯವಾಗಿದೆ. ಇದಕ್ಕೆ ಮುಖ್ಯ ಕಾರಣವೇನೆಂದರೆ, ಹಿಂದೂಗಳು ಆ ರಾಜ್ಯದಲ್ಲಿ ಅಲ್ಪಸಂಖ್ಯಾತರು” ಎಂದು ಶೀರ್ಷಿಕೆ ನೀಡಿದ್ದರು.

ಟ್ವೀಟ್ ಮಾಡಿ ಅದನ್ನು ಡಿಲೀಟ್ ಮಾಡಿದ್ದರೂ ಸಹ ಅಷ್ಟರಲ್ಲಿ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕೂಡ ಇದನ್ನು ರಿಟ್ವೀಟ್ ಮಾಡಿದ್ದು, ಈ ವಿಷಯವನ್ನು ಕೈಗೆತ್ತಿಕೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗವನ್ನು ಕೋರಿದ್ದರು.

ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಇನ್ವಿಡ್ ಬಳಸಿ ಈ ವಿಡಿಯೋ ಕೀಫ್ರೇಮ್ಗಳಲ್ಲಿ ಒಂದರ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನಿಸಿದಾಗ ಈ ಘಟನೆಯ ಸತ್ಯಾಸತ್ಯತೆ ಬಯಲಾಗಿದೆ. ಈ ಘಟನೆಯ ಕುರಿತು “ದಿ ಟೈಮ್ಸ್ ಆಫ್ ಇಂಡಿಯಾ” ವರದಿಯನ್ನೂ ನಾವು ಶೋಧಿಸಿದ್ದೇವೆ ಎಂದಿದೆ. ಈ ವರದಿಯ ಪ್ರಕಾರ 2017ರ ಆಗಸ್ಟ್‌ನಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆದರೆ, ಈ ವಿಡಿಯೋ ಮಾತ್ರ ಈಗ ವೈರಲ್ ಆಗುತ್ತಿದೆ ಎಂಬುದು ತಿಳಿದುಬಂದಿದೆ ಎಂದಿದ್ದಾರೆ.

“ದಿ ಹಿಂದೂ” ವರದಿ ಪ್ರಕಾರ,  ಆಗಸ್ಟ್ 29, 2017 ರಂದು ಬಾಲಕಿ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೀತಿಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕೆ, ತನ್ನ ಗೆಳೆಯ ಸಾಯಿ ಎಂಬ ವ್ಯಕ್ತಿಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ. ಅಲ್ಲದೆ, ಯುವಕನ ಸ್ನೇಹಿತ ಕಾರ್ತಿಕ್ ಮತ್ತು ಪವನ್ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಆಗಲೇ ಅರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

ಇನ್ನು ಕೇರಳದಲ್ಲಿ ಹಿಂದೂಗಳು ಅಲ್ಪಸಂಖ್ಯಾತರೇ? ಎಂಬ ಪ್ರಶ್ನೆಗೆ 2011 ರ ಜನಗಣತಿ ಉತ್ತರ ನಿಡುತ್ತದೆ. ಇದರ ಪ್ರಕಾರ ಕೇರಳದ ಜನಸಂಖ್ಯೆಯ ಶೇಕಡಾ 54.7 ರಷ್ಟು ಹಿಂದೂಗಳು, ಮುಸ್ಲಿಮರು ಶೇ. 26.5 ಮತ್ತು ಕ್ರಿಶ್ಚಿಯನ್ನರು ಶೇ.18.3 ಇದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...