Homeಫ್ಯಾಕ್ಟ್‌ಚೆಕ್ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ.

- Advertisement -
- Advertisement -

ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೇರಳದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಹಿಂದೂಗಳು ಅಲ್ಪ ಸಂಖ್ಯಾತರಾಗಿದ್ದು, ಅವರ ಮೇಲೆ ಇಂತಹ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಅದಕ್ಕೆ ಸಾಕ್ಷಿಯಾಗಿ ಈ ವಿಡಿಯೋ ನೀಡಲಾಗಿತ್ತು.

ಆ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹುಡುಗಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ದೈಹಿಕ-ಲೈಂಗಿಕ ಹಲ್ಲೆಗೆ ಮುಂದಾಗುತ್ತಾನೆ. ಆಕೆ ಬಿಟ್ಟುಬಿಡುವಂತೆ ಎಷ್ಟೇ ಬೇಡಿಕೊಂಡರೂ, ಕಿರುಚಿದರೂ ಸಹ ಆತ ಅದನ್ನು ಗಮನಿಸಿದೆ ಆಕೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಮುಂದುವರೆಸುತ್ತಾನೆ. ಇದೇ ವೇಳೆ ಮತ್ತೋರ್ವ ಯುವತಿ ಆಕೆಯ ರಕ್ಷಣೆಗೆ ಮುಂದಾಗುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ. ಈ ಮೂವರ ಧ್ವನಿಯನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ.

ಹಾಗಾದರೆ, ಆ ವಿಡಿಯೋ ಕೇರಳ ರಾಜ್ಯದ್ದೇ?, ಅಲ್ಲಿ ನಡೆದದ್ದು ಏನು ಎಂಬುದನ್ನು ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಈ ವಿಡಿಯೋದ ಅಸಲಿ ಕಥೆಯನ್ನು ಹೊರಗೆಡವಿದ್ದು, ಸತ್ಯವನ್ನು ಬಯಲು ಮಾಡಿದೆ. ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ. ಜೊತೆಗೆ ಸ್ವತಃ ಯುವತಿಯ ಗೆಳೆಯನೇ ಆತನ ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಅಂಶವನ್ನು ಪತ್ತೆ ಮಾಡಿದೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಸೆ.7 ರಂದು ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರು, “ಇದು ಕೇರಳದ ಮಹಿಳೆಯೊಬ್ಬಳ ಕಿರುಕುಳವನ್ನು ತೋರಿಸುವ ಏಕೈಕ ವೈರಲ್ ವಿಡಿಯೋ ಅಲ್ಲ. ಇಂತಹ ಘಟನೆಗಳು ಅಲ್ಲಿ ಸಾಮಾನ್ಯವಾಗಿದೆ. ಇದಕ್ಕೆ ಮುಖ್ಯ ಕಾರಣವೇನೆಂದರೆ, ಹಿಂದೂಗಳು ಆ ರಾಜ್ಯದಲ್ಲಿ ಅಲ್ಪಸಂಖ್ಯಾತರು” ಎಂದು ಶೀರ್ಷಿಕೆ ನೀಡಿದ್ದರು.

ಟ್ವೀಟ್ ಮಾಡಿ ಅದನ್ನು ಡಿಲೀಟ್ ಮಾಡಿದ್ದರೂ ಸಹ ಅಷ್ಟರಲ್ಲಿ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕೂಡ ಇದನ್ನು ರಿಟ್ವೀಟ್ ಮಾಡಿದ್ದು, ಈ ವಿಷಯವನ್ನು ಕೈಗೆತ್ತಿಕೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗವನ್ನು ಕೋರಿದ್ದರು.

ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಇನ್ವಿಡ್ ಬಳಸಿ ಈ ವಿಡಿಯೋ ಕೀಫ್ರೇಮ್ಗಳಲ್ಲಿ ಒಂದರ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನಿಸಿದಾಗ ಈ ಘಟನೆಯ ಸತ್ಯಾಸತ್ಯತೆ ಬಯಲಾಗಿದೆ. ಈ ಘಟನೆಯ ಕುರಿತು “ದಿ ಟೈಮ್ಸ್ ಆಫ್ ಇಂಡಿಯಾ” ವರದಿಯನ್ನೂ ನಾವು ಶೋಧಿಸಿದ್ದೇವೆ ಎಂದಿದೆ. ಈ ವರದಿಯ ಪ್ರಕಾರ 2017ರ ಆಗಸ್ಟ್‌ನಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆದರೆ, ಈ ವಿಡಿಯೋ ಮಾತ್ರ ಈಗ ವೈರಲ್ ಆಗುತ್ತಿದೆ ಎಂಬುದು ತಿಳಿದುಬಂದಿದೆ ಎಂದಿದ್ದಾರೆ.

“ದಿ ಹಿಂದೂ” ವರದಿ ಪ್ರಕಾರ,  ಆಗಸ್ಟ್ 29, 2017 ರಂದು ಬಾಲಕಿ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೀತಿಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕೆ, ತನ್ನ ಗೆಳೆಯ ಸಾಯಿ ಎಂಬ ವ್ಯಕ್ತಿಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ. ಅಲ್ಲದೆ, ಯುವಕನ ಸ್ನೇಹಿತ ಕಾರ್ತಿಕ್ ಮತ್ತು ಪವನ್ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಆಗಲೇ ಅರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

ಇನ್ನು ಕೇರಳದಲ್ಲಿ ಹಿಂದೂಗಳು ಅಲ್ಪಸಂಖ್ಯಾತರೇ? ಎಂಬ ಪ್ರಶ್ನೆಗೆ 2011 ರ ಜನಗಣತಿ ಉತ್ತರ ನಿಡುತ್ತದೆ. ಇದರ ಪ್ರಕಾರ ಕೇರಳದ ಜನಸಂಖ್ಯೆಯ ಶೇಕಡಾ 54.7 ರಷ್ಟು ಹಿಂದೂಗಳು, ಮುಸ್ಲಿಮರು ಶೇ. 26.5 ಮತ್ತು ಕ್ರಿಶ್ಚಿಯನ್ನರು ಶೇ.18.3 ಇದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...