Homeಫ್ಯಾಕ್ಟ್‌ಚೆಕ್ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ.

- Advertisement -
- Advertisement -

ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೇರಳದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಹಿಂದೂಗಳು ಅಲ್ಪ ಸಂಖ್ಯಾತರಾಗಿದ್ದು, ಅವರ ಮೇಲೆ ಇಂತಹ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಅದಕ್ಕೆ ಸಾಕ್ಷಿಯಾಗಿ ಈ ವಿಡಿಯೋ ನೀಡಲಾಗಿತ್ತು.

ಆ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹುಡುಗಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ದೈಹಿಕ-ಲೈಂಗಿಕ ಹಲ್ಲೆಗೆ ಮುಂದಾಗುತ್ತಾನೆ. ಆಕೆ ಬಿಟ್ಟುಬಿಡುವಂತೆ ಎಷ್ಟೇ ಬೇಡಿಕೊಂಡರೂ, ಕಿರುಚಿದರೂ ಸಹ ಆತ ಅದನ್ನು ಗಮನಿಸಿದೆ ಆಕೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಮುಂದುವರೆಸುತ್ತಾನೆ. ಇದೇ ವೇಳೆ ಮತ್ತೋರ್ವ ಯುವತಿ ಆಕೆಯ ರಕ್ಷಣೆಗೆ ಮುಂದಾಗುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ. ಈ ಮೂವರ ಧ್ವನಿಯನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ.

ಹಾಗಾದರೆ, ಆ ವಿಡಿಯೋ ಕೇರಳ ರಾಜ್ಯದ್ದೇ?, ಅಲ್ಲಿ ನಡೆದದ್ದು ಏನು ಎಂಬುದನ್ನು ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಈ ವಿಡಿಯೋದ ಅಸಲಿ ಕಥೆಯನ್ನು ಹೊರಗೆಡವಿದ್ದು, ಸತ್ಯವನ್ನು ಬಯಲು ಮಾಡಿದೆ. ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ. ಜೊತೆಗೆ ಸ್ವತಃ ಯುವತಿಯ ಗೆಳೆಯನೇ ಆತನ ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಅಂಶವನ್ನು ಪತ್ತೆ ಮಾಡಿದೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಸೆ.7 ರಂದು ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರು, “ಇದು ಕೇರಳದ ಮಹಿಳೆಯೊಬ್ಬಳ ಕಿರುಕುಳವನ್ನು ತೋರಿಸುವ ಏಕೈಕ ವೈರಲ್ ವಿಡಿಯೋ ಅಲ್ಲ. ಇಂತಹ ಘಟನೆಗಳು ಅಲ್ಲಿ ಸಾಮಾನ್ಯವಾಗಿದೆ. ಇದಕ್ಕೆ ಮುಖ್ಯ ಕಾರಣವೇನೆಂದರೆ, ಹಿಂದೂಗಳು ಆ ರಾಜ್ಯದಲ್ಲಿ ಅಲ್ಪಸಂಖ್ಯಾತರು” ಎಂದು ಶೀರ್ಷಿಕೆ ನೀಡಿದ್ದರು.

ಟ್ವೀಟ್ ಮಾಡಿ ಅದನ್ನು ಡಿಲೀಟ್ ಮಾಡಿದ್ದರೂ ಸಹ ಅಷ್ಟರಲ್ಲಿ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕೂಡ ಇದನ್ನು ರಿಟ್ವೀಟ್ ಮಾಡಿದ್ದು, ಈ ವಿಷಯವನ್ನು ಕೈಗೆತ್ತಿಕೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗವನ್ನು ಕೋರಿದ್ದರು.

ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಇನ್ವಿಡ್ ಬಳಸಿ ಈ ವಿಡಿಯೋ ಕೀಫ್ರೇಮ್ಗಳಲ್ಲಿ ಒಂದರ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನಿಸಿದಾಗ ಈ ಘಟನೆಯ ಸತ್ಯಾಸತ್ಯತೆ ಬಯಲಾಗಿದೆ. ಈ ಘಟನೆಯ ಕುರಿತು “ದಿ ಟೈಮ್ಸ್ ಆಫ್ ಇಂಡಿಯಾ” ವರದಿಯನ್ನೂ ನಾವು ಶೋಧಿಸಿದ್ದೇವೆ ಎಂದಿದೆ. ಈ ವರದಿಯ ಪ್ರಕಾರ 2017ರ ಆಗಸ್ಟ್‌ನಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆದರೆ, ಈ ವಿಡಿಯೋ ಮಾತ್ರ ಈಗ ವೈರಲ್ ಆಗುತ್ತಿದೆ ಎಂಬುದು ತಿಳಿದುಬಂದಿದೆ ಎಂದಿದ್ದಾರೆ.

“ದಿ ಹಿಂದೂ” ವರದಿ ಪ್ರಕಾರ,  ಆಗಸ್ಟ್ 29, 2017 ರಂದು ಬಾಲಕಿ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೀತಿಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕೆ, ತನ್ನ ಗೆಳೆಯ ಸಾಯಿ ಎಂಬ ವ್ಯಕ್ತಿಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ. ಅಲ್ಲದೆ, ಯುವಕನ ಸ್ನೇಹಿತ ಕಾರ್ತಿಕ್ ಮತ್ತು ಪವನ್ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಆಗಲೇ ಅರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

ಇನ್ನು ಕೇರಳದಲ್ಲಿ ಹಿಂದೂಗಳು ಅಲ್ಪಸಂಖ್ಯಾತರೇ? ಎಂಬ ಪ್ರಶ್ನೆಗೆ 2011 ರ ಜನಗಣತಿ ಉತ್ತರ ನಿಡುತ್ತದೆ. ಇದರ ಪ್ರಕಾರ ಕೇರಳದ ಜನಸಂಖ್ಯೆಯ ಶೇಕಡಾ 54.7 ರಷ್ಟು ಹಿಂದೂಗಳು, ಮುಸ್ಲಿಮರು ಶೇ. 26.5 ಮತ್ತು ಕ್ರಿಶ್ಚಿಯನ್ನರು ಶೇ.18.3 ಇದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...