Homeಮುಖಪುಟಅತ್ಯಾಚಾರ ಎಸಗಿದ ಇಬ್ಬರು ಸಿಆರ್‌ಪಿಎಫ್‌ ಅಧಿಕಾರಿಗಳ ಅಮಾನತು

ಅತ್ಯಾಚಾರ ಎಸಗಿದ ಇಬ್ಬರು ಸಿಆರ್‌ಪಿಎಫ್‌ ಅಧಿಕಾರಿಗಳ ಅಮಾನತು

- Advertisement -
- Advertisement -

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಕೇಂದ್ರೀಯ ರಿಸರ್ವ್ ಪೊಲೀಸ್ ಪಡೆಯ(ಸಿಆರ್‌ಪಿಎಫ್) ಮುಖ್ಯ ಕ್ರೀಡಾ ಅಧಿಕಾರಿ ಡಿಐಜಿ ಖಜನ್ ಸಿಂಗ್ ಮತ್ತು ತರಬೇತುದಾರ ಇನ್ಸ್‌ಪೆಕ್ಟರ್ ಸುರ್ಜಿತ್ ಸಿಂಗ್ ಅನ್ನು ಬುಧವಾರ ಅಮಾನತುಗೊಳಿಸಲಾಗಿದೆ. ಪ್ರಾಥಮಿಕ ತನಿಖೆಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

30 ವರ್ಷದ ಮಹಿಳಾ ಕಾನ್‌ಸ್ಟೆಬಲ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಗಳು ಸಾಬೀತಾಗಿದೆ ಎಂದು ಶ್ರೀನಗರ ಮೂಲದ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ ಚಾರು ಸಿನ್ಹಾ ನೇತೃತ್ವದ ಸಮಿತಿಯು ಹೇಳಿದೆ.

“ಸಮಿತಿಯು ನಡೆಸಿದ ಪ್ರಾಥಮಿಕ ತನಿಖೆಯ ಶಿಫಾರಸುಗಳನ್ನು ಅನುಸರಿಸಿ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಖಜನ್ ಸಿಂಗ್ ಮತ್ತು ಇನ್ಸ್‌ಪೆಕ್ಟರ್ ಸುರ್ಜಿತ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಅರೆಸೈನಿಕ ಪಡೆಗಳ ಮುಖ್ಯ ಕ್ರೀಡಾ ಅಧಿಕಾರಿ ಖಜನ್ ಸಿಂಗ್ ಅವರು 1986 ರ ಸಿಯೋಲ್ ಏಷ್ಯನ್ ಕ್ರೀಡಾಕೂಟದಲ್ಲಿ 200 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಇದು 1951 ರ ಆವೃತ್ತಿಯ ನಂತರ ಈ ಕ್ರೀಡಾಕೂಟದಲ್ಲಿ ಭಾರತ ಪಡೆದ ಮೊದಲ ಪದಕವಾಗಿದೆ.

ಖಜನ್ ಸಿಂಗ್ ಈ ಹಿಂದೆ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿ, “ಈ ಆರೋಪಗಳು ಸಂಪೂರ್ಣವಾಗಿ ಸುಳ್ಳಾಗಿದ್ದು, ಇದು ನನ್ನ ಇಮೇಜ್ ಅನ್ನು ಹಾಳುಗೆಡವಲು ರೂಪಿಸಿದ್ದಾಗಿದೆ” ಎಂದು ಪಿಟಿಐಗೆ ಹೇಳಿದ್ದರು.

ಇದನ್ನೂ ಓದಿ: 2014-2021ರವರೆಗೆ ಬಂಗಾಳದಲ್ಲಿ ಮೋದಿ ಭಾಷಣಗಳು: ಮಮತಾ ಪರವಿದ್ದ ಮೋದಿ ದಿಢೀರ್ ವಿರೋಧಿಯಾದ ಬಗೆ!

ಕಳೆದ ವರ್ಷ ಡಿಸೆಂಬರ್‌ನಲ್ಲಿ ದೆಹಲಿಯ ಬಾಬಾ ಹರಿದಾಸ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ನೀಡಿದ ದೂರಿನಲ್ಲಿ, ಈ ಅಧಿಕಾರಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಜೊತೆಗೆ ಅವರು ಹಲವು ಮಹಿಳಾ ಕಾನ್‌ಸ್ಟೆಬಲ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

2010 ರಲ್ಲಿ ಸಿಆರ್‌ಪಿಎಫ್‌ಗೆ ಸೇರ್ಪಡೆಯಾದ ಮಹಿಳೆ, ನಂತರ ಪೊಲೀಸ್ ತನಿಖೆಯ ವೇಳೆ ತನ್ನ ಆರೋಪಗಳನ್ನು ಹಿಂತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ. ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ ಮಹಿಳೆ ತನ್ನ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಅಲ್ಲಿ ಇಬ್ಬರು ಸಿಆರ್‌ಪಿಎಫ್ ಕ್ರೀಡಾ ಅಧಿಕಾರಿಗಳ ವಿರುದ್ಧದ ಆರೋಪಗಳನ್ನು ಹಿಂತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಫೆಬ್ರವರಿಯಲ್ಲಿ ನಿವೃತ್ತರಾದ ಸಿಆರ್‌ಪಿಎಫ್‌ನ ಮಾಜಿ ಮಹಾನಿರ್ದೇಶಕ ಆನಂದ್ ಪ್ರಕಾಶ್ ಮಹೇಶ್ವರಿ ಜನವರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಈ ಪ್ರಕರಣದಲ್ಲಿ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಶಿಕ್ಷೆ ವಿಧಿಸಲಾಗುತ್ತದೆ” ಎಂದು ಹೇಳಿದ್ದರು.

ಸಿಆರ್‌ಪಿಎಫ್ ಪಡೆಯು ಸುಮಾರು 3.25 ಲಕ್ಷ ಸಿಬ್ಬಂದಿಗಳನ್ನು ಹೊಂದಿದ್ದು, 1986 ರಲ್ಲಿ ಮೊದಲ ಬಾರಿಗೆ ಮಹಿಳೆಯರನ್ನು ಯುದ್ಧ ಶ್ರೇಣಿಯಲ್ಲಿ ಸೇರಿಸಿಕೊಂಡಿತು. ಇದು ಪ್ರಸ್ತುತ ಆರು ಮಹಿಳಾ ಬೆಟಾಲಿಯನ್‌ಗಳನ್ನು ಹೊಂದಿದ್ದು, ಒಟ್ಟಾರೆ ಸುಮಾರು 8,000 ಸಿಬ್ಬಂದಿಗಳನ್ನು ಹೊಂದಿದೆ. ಇದು ಕ್ರೀಡೆ ಮತ್ತು ಇತರ ಆಡಳಿತ ವಿಭಾಗಗಳಲ್ಲಿಯೂ ಸಹ ಮಹಿಳಾ ಸಿಬ್ಬಂದಿಯನ್ನು ಹೊಂದಿದೆ.


ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...