Homeಕರ್ನಾಟಕದಲಿತ ಮಹಿಳೆ ಮೇಲೆ ನಿರಂತರ ಲೈಂಗಿಕ ಕಿರುಕುಳ, ವಂಚನೆ ಆರೋಪ: ಕ್ರಮಕ್ಕೆ ಮಹಿಳೆಯ ಆಗ್ರಹ

ದಲಿತ ಮಹಿಳೆ ಮೇಲೆ ನಿರಂತರ ಲೈಂಗಿಕ ಕಿರುಕುಳ, ವಂಚನೆ ಆರೋಪ: ಕ್ರಮಕ್ಕೆ ಮಹಿಳೆಯ ಆಗ್ರಹ

- Advertisement -
- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರ ಸರಕಾರಿ ಆಸ್ಪತ್ರೆಯಲ್ಲಿ ಟೆಕ್ನಿಷಿಯನ್ ಆದ ಕುಬೇರ ಸಾವಂತ ಎಂಬುವವನು ತನಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದು, ಕೆಲಸ ಖಾಯಂ ಮಾಡುವುದಾಗಿ 50,000 ರೂ ಪಡೆದು ವಂಚಿಸಿದ್ದಾನೆ ಎಂದು ಅದೇ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ದಲಿತ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಈ ಕುರಿತು ‘ಲೈಂಗಿಕ ಕಿರುಕುಳ ಕುರಿತು ದೂರು’ ಹೆಸರಿನಲ್ಲಿ ತಾಲೂಕು ವೈದ್ಯಾಧಿಕಾರಿಗಳು, ಹಾವೇರಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮಹಿಳಾ ಆಯೋಗ ಸೇರಿದಂತೆ ಹತ್ತಾರು ಜನರಿಗೆ ದೂರು ನೀಡಿದ್ದರು ತನಗೆ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿದ್ದಾರೆ.

ನಾನು ದಲಿತ ಜಾತಿಗೆ ಸೇರಿದ್ದು, ಹಾನಗಲ್ಲ ತಾಲೂಕಿನ ಅಕ್ಕಿಆಲೂರ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 7-8 ವರ್ಷಗಳಿಂದ ಹೊರಗುತ್ತಿಗೆ ನೌಕರಳಾಗಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದೇನೆ. ಆರಂಭದಲ್ಲಿ ದಿನಕ್ಕೆ ಕೇವಲ 100 ರೂ ನೀಡುತ್ತಿದ್ದರು. ನನ್ನ ಕೆಲಸ ಖಾಯಂ ಮಾಡುವುದಾಗಿ ದವಾಖಾನೆಯ ಮ್ಯಾನೆಜರ ಆದ ಕುಬೇರ ಸಾವಂತ 60,000 ರೂ ಪಡೆದಿದ್ದಾರೆ. ಆದರೆ ಕಳೆದ ಎರಡು ವರ್ಷಗಳಿಂದ ಕುಬೇರ ಸಾವಂತ ಇವನು ನನಗೆ ಹೊರಗುತ್ತಿಗೆ ನೌಕರಿ ಕಾಯಂ ಮಾಡಿಕೊಟ್ಟಾಗಿನಿಂದ ನನಗೆ ತುಂಬಾ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ. ಕೆಟ್ಟದಾಗಿ ಮಾತಾನಾಡುವುದು, ಮೈಮುಟ್ಟುವುದು, ವಿವಸ್ತ್ರಗೊಳಿಸುವುದು, ಬಲವಂತವಾಗಿ ಹಿಂಸಿಸುವುದು, ಮನೆಗೆ ಬಾ ಎಂದು ಒತ್ತಾಯಿಸುವುದು ಮಾಡುತ್ತಿದ್ದಾನೆ. ಜನವರಿ 26 ರಂದು ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ನಾನು ಅದನ್ನು ವಿರೋಧಿಸಿ ಕೂಗಾಡಿದ್ದರಿಂದ ಓಡಿ ಹೋಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಕುಬೇರ ಸಾವಂತನ ಈ ಎಲ್ಲ ಲೈಂಗಿಕ ಛೇಷ್ಟೆಗಳ ಕಾರಣಗಳಿಂದಾಗಿ ನನಗೆ ಮಾನಸಿಕವಾಗಿ,
ದೈಹಿಕವಾಗಿ, ಹಾಗೂ ಆರ್ಥಿಕವಾಗಿ ಭರಿಸಲಾಗದಷ್ಟು ಹಾನಿಯಾಗಿದೆ. ನನಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದೆಂದು ಫೆಬ್ರವರಿ 6ನೇ ತಾರೀಖಿನಂದೇ ದೂರು ನೀಡಿದ್ದೇನೆ. ಈ ಕೂಡಲೇ ಕುಬೇರ ಸಾವಂತನನ್ನು ಕೆಲಸದಿಂದ ಅಮಾನತ್ತಿನಲ್ಲಿಟ್ಟು, ಬಂಧಿಸಿ, ವಿಚಾರಣೆ ನಡೆಸಿ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.

ದೂರು ನೀಡಿ ಹದಿನೈದು ದಿನ ಕಳೆದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಲಿ, ಆರೋಗ್ಯ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಪಿಯನ್ನು ಬಂಧಿಸುವ, ವಿಚಾರಣೆ ನಡೆಸುವ ಕೆಲಸ ಮಾಡಿಲ್ಲ. ಈ ಕುರಿತು ದಲಿತ ಸಂಘಟನೆಗಳು ಒತ್ತಾಯ ಮಾಡಿದ ನಂತರ ಮಾತ್ರ ಫೆಬ್ರವರಿ 22 ರ ರಾತ್ರಿ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿಲ್ಲ. ಆರೋಪಿಗೆ ರಾಜಕೀಯ ನಾಯಕರ ಬೆಂಬಲವಿರುವುದರಿಂದ ದಲಿತ ಮಹಿಳೆಗೆ ಅನ್ಯಾಯವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರಾದ ಪ್ರಶಾಂತ್ ಮುಚ್ಚಂಡಿಯವರು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು “ಆ ಮಹಿಳೆಗೆ ಕೆಲಸ ಖಾಯಂ ಆಗಿಲ್ಲ. ಆಕೆಗೆ ಎಲ್ಲ ರೀತಿಯಿಂದಲೂ ಅನ್ಯಾಯವಾಗಿದೆ. ಹಾಗಾಗಿ ಆರೋಪಿಯ ಮೇಲೆ ಈ ಕೂಡಲೇ ಪೊಲೀಸರು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನದ ಪ್ರಕರಣ ದಾಖಲಿಸಬೇಕು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು. ತಕ್ಷಣ ಕೆಲಸದಿಂದ ಅಮಾನತ್ತು ಮಾಡಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪುರುಷಾಧಿಪತ್ಯ ಮುರಿಯುವ ಹೋರಾಟ: ಭನ್ವಾರಿ ದೇವಿಯಿಂದ, ನಿರ್ಭಯಳಿಂದ ಪ್ರಿಯಾ ರಮಣಿವರೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....