Homeಕರ್ನಾಟಕವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ಎಸ್‌ಎಫ್‌ಐಗೂ ವಿಸ್ಟ್ರಾನ್‌ ಘಟನೆಗೂ ಯಾವುದೇ ಸಂಬಂಧವಿಲ್ಲದಿದ್ದರೂ ಎಸ್. ಮುನಿಸ್ವಾಮಿಯವರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ- ಕೆ.ವಾಸುದೇವರೆಡ್ಡಿ

- Advertisement -
- Advertisement -

ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಐಫೋನ್ ತಯಾರಕ ಕಂಪನಿಯಲ್ಲಿ ನಡೆದ ದಾಂಧಲೆಗೆ ಎಸ್‌ಎಫ್‌ಐ ಕಾರ್ಯಕರ್ತರು ಕಾರಣರಾಗಿದ್ದಾರೆ ಎಂಬ ಸಂಸದ ಮುನಿಸ್ವಾಮಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಎಸ್‌ಎಫ್‌ಐ, ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದಿದೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ನಿನ್ನೆ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ನೂರಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಕ್ಕೆ ಹೇಳಿಕೆ ನಿಡಿದ್ದ ಸಂಸದ ಮುನಿಸ್ವಾಮಿಯವರು “ಎಸ್‌ಎಫ್‌ಐ ಸಂಘಟನೆ ಹೊರರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆ ಸಂಘಟಿಸಿದೆ. ಎಸ್‌ಎಫ್‌ಐ ಕಾರ್ಯಕರ್ತರು ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿ ದಾಂಧಲೆಗೆ ಕಾರಣರಾಗಿದ್ದಾರೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕುರಿತು ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ, “ಎಸ್‌ಎಫ್‌ಐಗೂ ವಿಸ್ಟ್ರಾನ್‌ ಘಟನೆಗೂ ಯಾವುದೇ ಸಂಬಂಧವಿಲ್ಲದಿದ್ದರೂ ಕೋಲಾರದ ಸಂಸದ ಎಸ್. ಮುನಿಸ್ವಾಮಿಯವರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಎಸ್ಎಫ್ಐ ಯಾವುದೇ ಪ್ರತಿಭಟನೆಯನ್ನು ಸಂಘಟಿಸಿಲ್ಲರಲಿಲ್ಲ. ಎಸ್ಎಫ್ಐ ಒಂದು ವಿದ್ಯಾರ್ಥಿ ಸಂಘಟನೆಯಾಗಿದ್ದು ಅದು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಹೋರಾಡುತ್ತಿದೆ. ಆದರೆ ವಿಸ್ಟ್ರಾನ್ ಘಟನೆ ಕಾರ್ಮಿಕರು ಮತ್ತು ಕೈಗಾರಿಕೆ ಆಡಳಿತ ಮಂಡಳಿಯ ವಿಷಯವಾಗಿದ್ದು, ಅನಾವಶ್ಯಕವಾಗಿ ವಿದ್ಯಾರ್ಥಿ ಸಂಘಟನೆಯ ಹೆಸರನ್ನು ಎಳೆದು ತರುವ ಪ್ರಯತ್ನವನ್ನು ಸಂಸದರು ನಡೆಸಿರುವುದು ಅವರ ಬೇಜವಾಬ್ದಾರಿತನ ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಕಾನೂನುಗಳನ್ನು ಉಲ್ಲಂಘಿಸಿ ಯುವಜನರನ್ನು ಕಡಿಮೆ ಸಂಬಳ ನೀಡಿ 12 ಗಂಟೆಗಳ ಕಾಲ ದುಡಿಸಿಕೊಂಡು ನಾಲ್ಕೈದು ತಿಂಗಳಿಂದ ಸಂಬಳ ನೀಡದೆ ಸತಾಯಿಸಿ, ಶೋಷಿಸುವುದರ ವಿರುದ್ಧ ಧ್ವನಿ ಎತ್ತಬೇಕಾಗಿದ್ದ ಕೋಲಾರದ ಸಂಸದ ಮುನಿಸ್ವಾಮಿ, ಬಂಡವಾಳಶಾಹಿ ಕಂಪನಿಗಳ ಪ್ರಭಾವಕ್ಕೆ ಒಳಗಾಗಿ ಕಾರ್ಮಿಕರ ಹಿತವನ್ನು ಮರೆತಿದ್ದಾರೆ. ಕಾರ್ಮಿಕರ ಶೋಷಣೆಯ ಮೂಲಕ ಕಾರ್ಪೋರೇಟ್ ಹಣಕಾಸು ಬಂಡವಾಳಶಾಹಿಗಳ ಆಸ್ತಿ ಹೆಚ್ಚಳಕ್ಕೆ ಕೈಜೋಡಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಘಟನೆ ನಡೆಯಲು ಕಾರ್ಮಿಕರ ಗುತ್ತಿಗೆ ಏಜೆನ್ಸಿ ಮತ್ತು ಕಾರ್ಮಿಕರ ನಡುವಿನ ವೇತನ ಶೋಷಣೆ ಮತ್ತು ಈ ಸಮಸ್ಯೆಯನ್ನು ನಿರ್ವಹಿಸುವಲ್ಲಿನ ಕಾರ್ಮಿಕ ಅಧಿಕಾರಿಗಳ ನಿರ್ಲಕ್ಷ್ಯತೆಯೇ ಕಾರಣ. ಹಾಗಾಗಿ ಕಾರ್ಮಿಕರು ರೊಚ್ಚಿಗೆದ್ದು ದಾಂಧಲೆಗೆ ಇಳಿದಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಮತ್ತು ಜವಾಬ್ದಾರಿ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಸಂಸದ ಮುನಿಸ್ವಾಮಿ ವಿಫಲರಾಗಿದ್ದಾರೆ. ಆದ್ದರಿಂದ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ವಿದ್ಯಾರ್ಥಿ ಸಂಘಟನೆಗಳ ವಿರುದ್ಧ ರಾಜಕೀಯ ಪ್ರೇರಿತ ಪಕ್ಷಪಾತಿ ಆರೋಪಗಳನ್ನು ಹೊರಿಸುತ್ತಿದ್ದಾರೆ ಎಂದು ವಾಸುದೇವರೆಡ್ಡಿ ಕಿಡಿಕಾರಿದ್ದಾರೆ.

ಈ ರೀತಿಯ ದಾಂಧಲೆ ಹಾಗು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಎಸ್ಎಫ್ಐ ತೀವ್ರವಾಗಿ ವಿರೋಧಿಸುತ್ತದೆ. ಈ ದಾಂಧಲೆ ನಡೆಸಿದವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಕಂಪನಿ ಪುನರ್ ಆರಂಭವಾಗಿ ನಡೆಯಬೇಕು. ಕಾರ್ಮಿಕ ವೇತನ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿರುವ ಕಾರ್ಮಿಕ ಅಧಿಕಾರಿಗಳು, ಕಂಪನಿ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು. ಯಾವುದೇ ಸಾಕ್ಷ್ಯವಿಲ್ಲದೆ ಸಂಘಟನೆ ಹೆಸರು ಕೆಡಿಸಲು ಅನಗತ್ಯ ಆರೋಪ ಮಾಡಿರು ಸಂಸದ ಮುನಿಸ್ವಾಮಿಯವರು ತಮ್ಮ ಹೇಳಿಕೆಯನ್ನು ಈ ಕೂಡಲೇ ಬೇಷರತ್ತಾಗಿ ಹಿಂಪಡೆಯಬೇಕು. ಇಲ್ಲದಿದ್ದರೆ ಈ ಜಿಲ್ಲೆಯ ಯುವಜನರು ಸಂಸದ ಮುನಿಸ್ವಾಮಿ ರವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಪ್ಪ.ಎನ್ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಂಬಳ ಕೊಡದ ಆರೋಪ: ನರಸಾಪುರದ ಐಫೋನ್ ತಯಾರಿಕ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...