Homeಕರ್ನಾಟಕವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ಎಸ್‌ಎಫ್‌ಐಗೂ ವಿಸ್ಟ್ರಾನ್‌ ಘಟನೆಗೂ ಯಾವುದೇ ಸಂಬಂಧವಿಲ್ಲದಿದ್ದರೂ ಎಸ್. ಮುನಿಸ್ವಾಮಿಯವರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ- ಕೆ.ವಾಸುದೇವರೆಡ್ಡಿ

- Advertisement -
- Advertisement -

ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಐಫೋನ್ ತಯಾರಕ ಕಂಪನಿಯಲ್ಲಿ ನಡೆದ ದಾಂಧಲೆಗೆ ಎಸ್‌ಎಫ್‌ಐ ಕಾರ್ಯಕರ್ತರು ಕಾರಣರಾಗಿದ್ದಾರೆ ಎಂಬ ಸಂಸದ ಮುನಿಸ್ವಾಮಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಎಸ್‌ಎಫ್‌ಐ, ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದಿದೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ನಿನ್ನೆ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ನೂರಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಕ್ಕೆ ಹೇಳಿಕೆ ನಿಡಿದ್ದ ಸಂಸದ ಮುನಿಸ್ವಾಮಿಯವರು “ಎಸ್‌ಎಫ್‌ಐ ಸಂಘಟನೆ ಹೊರರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆ ಸಂಘಟಿಸಿದೆ. ಎಸ್‌ಎಫ್‌ಐ ಕಾರ್ಯಕರ್ತರು ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿ ದಾಂಧಲೆಗೆ ಕಾರಣರಾಗಿದ್ದಾರೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕುರಿತು ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ, “ಎಸ್‌ಎಫ್‌ಐಗೂ ವಿಸ್ಟ್ರಾನ್‌ ಘಟನೆಗೂ ಯಾವುದೇ ಸಂಬಂಧವಿಲ್ಲದಿದ್ದರೂ ಕೋಲಾರದ ಸಂಸದ ಎಸ್. ಮುನಿಸ್ವಾಮಿಯವರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಎಸ್ಎಫ್ಐ ಯಾವುದೇ ಪ್ರತಿಭಟನೆಯನ್ನು ಸಂಘಟಿಸಿಲ್ಲರಲಿಲ್ಲ. ಎಸ್ಎಫ್ಐ ಒಂದು ವಿದ್ಯಾರ್ಥಿ ಸಂಘಟನೆಯಾಗಿದ್ದು ಅದು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಹೋರಾಡುತ್ತಿದೆ. ಆದರೆ ವಿಸ್ಟ್ರಾನ್ ಘಟನೆ ಕಾರ್ಮಿಕರು ಮತ್ತು ಕೈಗಾರಿಕೆ ಆಡಳಿತ ಮಂಡಳಿಯ ವಿಷಯವಾಗಿದ್ದು, ಅನಾವಶ್ಯಕವಾಗಿ ವಿದ್ಯಾರ್ಥಿ ಸಂಘಟನೆಯ ಹೆಸರನ್ನು ಎಳೆದು ತರುವ ಪ್ರಯತ್ನವನ್ನು ಸಂಸದರು ನಡೆಸಿರುವುದು ಅವರ ಬೇಜವಾಬ್ದಾರಿತನ ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಕಾನೂನುಗಳನ್ನು ಉಲ್ಲಂಘಿಸಿ ಯುವಜನರನ್ನು ಕಡಿಮೆ ಸಂಬಳ ನೀಡಿ 12 ಗಂಟೆಗಳ ಕಾಲ ದುಡಿಸಿಕೊಂಡು ನಾಲ್ಕೈದು ತಿಂಗಳಿಂದ ಸಂಬಳ ನೀಡದೆ ಸತಾಯಿಸಿ, ಶೋಷಿಸುವುದರ ವಿರುದ್ಧ ಧ್ವನಿ ಎತ್ತಬೇಕಾಗಿದ್ದ ಕೋಲಾರದ ಸಂಸದ ಮುನಿಸ್ವಾಮಿ, ಬಂಡವಾಳಶಾಹಿ ಕಂಪನಿಗಳ ಪ್ರಭಾವಕ್ಕೆ ಒಳಗಾಗಿ ಕಾರ್ಮಿಕರ ಹಿತವನ್ನು ಮರೆತಿದ್ದಾರೆ. ಕಾರ್ಮಿಕರ ಶೋಷಣೆಯ ಮೂಲಕ ಕಾರ್ಪೋರೇಟ್ ಹಣಕಾಸು ಬಂಡವಾಳಶಾಹಿಗಳ ಆಸ್ತಿ ಹೆಚ್ಚಳಕ್ಕೆ ಕೈಜೋಡಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಘಟನೆ ನಡೆಯಲು ಕಾರ್ಮಿಕರ ಗುತ್ತಿಗೆ ಏಜೆನ್ಸಿ ಮತ್ತು ಕಾರ್ಮಿಕರ ನಡುವಿನ ವೇತನ ಶೋಷಣೆ ಮತ್ತು ಈ ಸಮಸ್ಯೆಯನ್ನು ನಿರ್ವಹಿಸುವಲ್ಲಿನ ಕಾರ್ಮಿಕ ಅಧಿಕಾರಿಗಳ ನಿರ್ಲಕ್ಷ್ಯತೆಯೇ ಕಾರಣ. ಹಾಗಾಗಿ ಕಾರ್ಮಿಕರು ರೊಚ್ಚಿಗೆದ್ದು ದಾಂಧಲೆಗೆ ಇಳಿದಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಮತ್ತು ಜವಾಬ್ದಾರಿ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಸಂಸದ ಮುನಿಸ್ವಾಮಿ ವಿಫಲರಾಗಿದ್ದಾರೆ. ಆದ್ದರಿಂದ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ವಿದ್ಯಾರ್ಥಿ ಸಂಘಟನೆಗಳ ವಿರುದ್ಧ ರಾಜಕೀಯ ಪ್ರೇರಿತ ಪಕ್ಷಪಾತಿ ಆರೋಪಗಳನ್ನು ಹೊರಿಸುತ್ತಿದ್ದಾರೆ ಎಂದು ವಾಸುದೇವರೆಡ್ಡಿ ಕಿಡಿಕಾರಿದ್ದಾರೆ.

ಈ ರೀತಿಯ ದಾಂಧಲೆ ಹಾಗು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಎಸ್ಎಫ್ಐ ತೀವ್ರವಾಗಿ ವಿರೋಧಿಸುತ್ತದೆ. ಈ ದಾಂಧಲೆ ನಡೆಸಿದವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಕಂಪನಿ ಪುನರ್ ಆರಂಭವಾಗಿ ನಡೆಯಬೇಕು. ಕಾರ್ಮಿಕ ವೇತನ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿರುವ ಕಾರ್ಮಿಕ ಅಧಿಕಾರಿಗಳು, ಕಂಪನಿ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು. ಯಾವುದೇ ಸಾಕ್ಷ್ಯವಿಲ್ಲದೆ ಸಂಘಟನೆ ಹೆಸರು ಕೆಡಿಸಲು ಅನಗತ್ಯ ಆರೋಪ ಮಾಡಿರು ಸಂಸದ ಮುನಿಸ್ವಾಮಿಯವರು ತಮ್ಮ ಹೇಳಿಕೆಯನ್ನು ಈ ಕೂಡಲೇ ಬೇಷರತ್ತಾಗಿ ಹಿಂಪಡೆಯಬೇಕು. ಇಲ್ಲದಿದ್ದರೆ ಈ ಜಿಲ್ಲೆಯ ಯುವಜನರು ಸಂಸದ ಮುನಿಸ್ವಾಮಿ ರವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಪ್ಪ.ಎನ್ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಂಬಳ ಕೊಡದ ಆರೋಪ: ನರಸಾಪುರದ ಐಫೋನ್ ತಯಾರಿಕ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...