Homeಕರ್ನಾಟಕವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ಎಸ್‌ಎಫ್‌ಐಗೂ ವಿಸ್ಟ್ರಾನ್‌ ಘಟನೆಗೂ ಯಾವುದೇ ಸಂಬಂಧವಿಲ್ಲದಿದ್ದರೂ ಎಸ್. ಮುನಿಸ್ವಾಮಿಯವರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ- ಕೆ.ವಾಸುದೇವರೆಡ್ಡಿ

- Advertisement -
- Advertisement -

ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಐಫೋನ್ ತಯಾರಕ ಕಂಪನಿಯಲ್ಲಿ ನಡೆದ ದಾಂಧಲೆಗೆ ಎಸ್‌ಎಫ್‌ಐ ಕಾರ್ಯಕರ್ತರು ಕಾರಣರಾಗಿದ್ದಾರೆ ಎಂಬ ಸಂಸದ ಮುನಿಸ್ವಾಮಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಎಸ್‌ಎಫ್‌ಐ, ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದಿದೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ನಿನ್ನೆ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ನೂರಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಕ್ಕೆ ಹೇಳಿಕೆ ನಿಡಿದ್ದ ಸಂಸದ ಮುನಿಸ್ವಾಮಿಯವರು “ಎಸ್‌ಎಫ್‌ಐ ಸಂಘಟನೆ ಹೊರರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆ ಸಂಘಟಿಸಿದೆ. ಎಸ್‌ಎಫ್‌ಐ ಕಾರ್ಯಕರ್ತರು ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿ ದಾಂಧಲೆಗೆ ಕಾರಣರಾಗಿದ್ದಾರೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕುರಿತು ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ, “ಎಸ್‌ಎಫ್‌ಐಗೂ ವಿಸ್ಟ್ರಾನ್‌ ಘಟನೆಗೂ ಯಾವುದೇ ಸಂಬಂಧವಿಲ್ಲದಿದ್ದರೂ ಕೋಲಾರದ ಸಂಸದ ಎಸ್. ಮುನಿಸ್ವಾಮಿಯವರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಎಸ್ಎಫ್ಐ ಯಾವುದೇ ಪ್ರತಿಭಟನೆಯನ್ನು ಸಂಘಟಿಸಿಲ್ಲರಲಿಲ್ಲ. ಎಸ್ಎಫ್ಐ ಒಂದು ವಿದ್ಯಾರ್ಥಿ ಸಂಘಟನೆಯಾಗಿದ್ದು ಅದು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಹೋರಾಡುತ್ತಿದೆ. ಆದರೆ ವಿಸ್ಟ್ರಾನ್ ಘಟನೆ ಕಾರ್ಮಿಕರು ಮತ್ತು ಕೈಗಾರಿಕೆ ಆಡಳಿತ ಮಂಡಳಿಯ ವಿಷಯವಾಗಿದ್ದು, ಅನಾವಶ್ಯಕವಾಗಿ ವಿದ್ಯಾರ್ಥಿ ಸಂಘಟನೆಯ ಹೆಸರನ್ನು ಎಳೆದು ತರುವ ಪ್ರಯತ್ನವನ್ನು ಸಂಸದರು ನಡೆಸಿರುವುದು ಅವರ ಬೇಜವಾಬ್ದಾರಿತನ ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಕಾನೂನುಗಳನ್ನು ಉಲ್ಲಂಘಿಸಿ ಯುವಜನರನ್ನು ಕಡಿಮೆ ಸಂಬಳ ನೀಡಿ 12 ಗಂಟೆಗಳ ಕಾಲ ದುಡಿಸಿಕೊಂಡು ನಾಲ್ಕೈದು ತಿಂಗಳಿಂದ ಸಂಬಳ ನೀಡದೆ ಸತಾಯಿಸಿ, ಶೋಷಿಸುವುದರ ವಿರುದ್ಧ ಧ್ವನಿ ಎತ್ತಬೇಕಾಗಿದ್ದ ಕೋಲಾರದ ಸಂಸದ ಮುನಿಸ್ವಾಮಿ, ಬಂಡವಾಳಶಾಹಿ ಕಂಪನಿಗಳ ಪ್ರಭಾವಕ್ಕೆ ಒಳಗಾಗಿ ಕಾರ್ಮಿಕರ ಹಿತವನ್ನು ಮರೆತಿದ್ದಾರೆ. ಕಾರ್ಮಿಕರ ಶೋಷಣೆಯ ಮೂಲಕ ಕಾರ್ಪೋರೇಟ್ ಹಣಕಾಸು ಬಂಡವಾಳಶಾಹಿಗಳ ಆಸ್ತಿ ಹೆಚ್ಚಳಕ್ಕೆ ಕೈಜೋಡಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಘಟನೆ ನಡೆಯಲು ಕಾರ್ಮಿಕರ ಗುತ್ತಿಗೆ ಏಜೆನ್ಸಿ ಮತ್ತು ಕಾರ್ಮಿಕರ ನಡುವಿನ ವೇತನ ಶೋಷಣೆ ಮತ್ತು ಈ ಸಮಸ್ಯೆಯನ್ನು ನಿರ್ವಹಿಸುವಲ್ಲಿನ ಕಾರ್ಮಿಕ ಅಧಿಕಾರಿಗಳ ನಿರ್ಲಕ್ಷ್ಯತೆಯೇ ಕಾರಣ. ಹಾಗಾಗಿ ಕಾರ್ಮಿಕರು ರೊಚ್ಚಿಗೆದ್ದು ದಾಂಧಲೆಗೆ ಇಳಿದಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಮತ್ತು ಜವಾಬ್ದಾರಿ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಸಂಸದ ಮುನಿಸ್ವಾಮಿ ವಿಫಲರಾಗಿದ್ದಾರೆ. ಆದ್ದರಿಂದ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ವಿದ್ಯಾರ್ಥಿ ಸಂಘಟನೆಗಳ ವಿರುದ್ಧ ರಾಜಕೀಯ ಪ್ರೇರಿತ ಪಕ್ಷಪಾತಿ ಆರೋಪಗಳನ್ನು ಹೊರಿಸುತ್ತಿದ್ದಾರೆ ಎಂದು ವಾಸುದೇವರೆಡ್ಡಿ ಕಿಡಿಕಾರಿದ್ದಾರೆ.

ಈ ರೀತಿಯ ದಾಂಧಲೆ ಹಾಗು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಎಸ್ಎಫ್ಐ ತೀವ್ರವಾಗಿ ವಿರೋಧಿಸುತ್ತದೆ. ಈ ದಾಂಧಲೆ ನಡೆಸಿದವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಕಂಪನಿ ಪುನರ್ ಆರಂಭವಾಗಿ ನಡೆಯಬೇಕು. ಕಾರ್ಮಿಕ ವೇತನ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿರುವ ಕಾರ್ಮಿಕ ಅಧಿಕಾರಿಗಳು, ಕಂಪನಿ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು. ಯಾವುದೇ ಸಾಕ್ಷ್ಯವಿಲ್ಲದೆ ಸಂಘಟನೆ ಹೆಸರು ಕೆಡಿಸಲು ಅನಗತ್ಯ ಆರೋಪ ಮಾಡಿರು ಸಂಸದ ಮುನಿಸ್ವಾಮಿಯವರು ತಮ್ಮ ಹೇಳಿಕೆಯನ್ನು ಈ ಕೂಡಲೇ ಬೇಷರತ್ತಾಗಿ ಹಿಂಪಡೆಯಬೇಕು. ಇಲ್ಲದಿದ್ದರೆ ಈ ಜಿಲ್ಲೆಯ ಯುವಜನರು ಸಂಸದ ಮುನಿಸ್ವಾಮಿ ರವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಪ್ಪ.ಎನ್ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಂಬಳ ಕೊಡದ ಆರೋಪ: ನರಸಾಪುರದ ಐಫೋನ್ ತಯಾರಿಕ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...