Homeಮುಖಪುಟಕೋಲ್ಕತ್ತಾದ ಪ್ರೆಸಿಡೆನ್ಸಿ ಯುನಿವರ್ಸಿಟಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಸ್‌ಎಫ್‌ಐ ಸಿದ್ಧತೆ

ಕೋಲ್ಕತ್ತಾದ ಪ್ರೆಸಿಡೆನ್ಸಿ ಯುನಿವರ್ಸಿಟಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಸ್‌ಎಫ್‌ಐ ಸಿದ್ಧತೆ

- Advertisement -
- Advertisement -

ದೆಹಲಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಕಚೇರಿಯಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಹಲವಾರು ವಿದ್ಯಾರ್ಥಿಗಳು ಸೇರಿದ್ದರು. ಆದರೆ ಈ ಪ್ರದರ್ಶನದ ಕಾರ್ಯಕ್ರಮಕ್ಕೆ ತಡೆಯೊಡ್ಡಲು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿದ್ಯುತ್ ಮತ್ತು ಇಂಟರ್ನೆಟ್ ಅನ್ನು ಕಡಿತಗೊಳಿಸಿತು. ಅಷ್ಟೇಅಲ್ಲದೇ, ಈ ವೇಳೆ ಎಬಿವಿಪಿ ಗೂಂಡಾಗಳು ಕಲ್ಲು ತೂರಾಟ ನಡೆಸಿತು ಎನ್ನುವ ಆರೋಪ ಕೇಳಿಬಂದಿದೆ.

ಈ ನಡುವೆ ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಜನವರಿ 27 ರಂದು ಸಂಜೆ 4 ಗಂಟೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರ ಪ್ರದರ್ಶಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಅನುಮತಿ ಕೇಳಿದೆ.

ಇದನ್ನೂ ಓದಿ: ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಹೈದರಾಬಾದ್‌ನಲ್ಲಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಗುಂಪು ಅನುಮತಿಯಿಲ್ಲದೆ ತನ್ನ ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆಯೋಜಿಸಿದೆ. ಅಗತ್ಯ ಕ್ರಮ ತೆಗೆದುಕೊಳ್ಳಲು ಕಾರ್ಯಕ್ರಮದ ಕುರಿತು ವರದಿಯನ್ನು ಕೇಳಲು ವಿಶ್ವವಿದ್ಯಾಲಯದ ಅಧಿಕಾರಿಗಳು ತಿರ್ಮಾನಿಸಿದ್ದಾರೆ.

ಕೊಲ್ಕತ್ತಾ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಎಸ್‌ಎಫ್‌ಐ, ಬೃಹತ್ ಪರದೆಯಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ಸಾಧ್ಯತೆಯಿರುವ ಹಿನ್ನೆಲೆ ಕ್ಯಾಂಪಸ್‌ನಲ್ಲಿ ಬ್ಯಾಡ್ಮಿಂಟನ್ ಕೋರ್ಟ್ ಅನ್ನು ಕಾಯ್ದಿರಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಇಮೇಲ್ ಕಳುಹಿಸಿದೆ. ಆದರೆ, ವಿಶ್ವವಿದ್ಯಾಲಯದ ಅಧಿಕಾರಿಗಳು ಮನವಿಗೆ ಇನ್ನೂ ಸ್ಪಂದಿಸಿಲ್ಲ.

ಬಿಬಿಸಿ ಸಾಕ್ಷ್ಯಚಿತ್ರವನ್ನು ಎಡಪಕ್ಷಗಳ ಪರವಾದ ಎಸ್‌ಎಫ್‌ಐ ಸೇರಿದಂತೆ ವಿವಿಧ ರಾಜಕೀಯ ಸಂಘಟನೆಗಳು ಮಂಗಳವಾರ ಕೇರಳದಾದ್ಯಂತ ಪ್ರದರ್ಶಿಸಿದವು. ಈ ವೇಳೆ ಪ್ರದರ್ಶನವನ್ನು ವಿರೋಧಿಸಿ ಬಿಜೆಪಿ ಯುವ ಘಟಕವು ಪ್ರತಿಭಟನೆ ನಡೆಸಿತು. ಇದನ್ನು ರಾಜ್ಯದ ಹಲವು ಭಾಗಗಳಲ್ಲಿ ಪ್ರದರ್ಶಿಸಲಾಯಿತು, ಇದರ ವಿರುದ್ಧ ಬಿಜೆಪಿಯ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆಗಳನ್ನು ಪ್ರೇರೇಪಿಸಿತು. ಯುವ ಮೋರ್ಚಾದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದರು. ಹಾಗಾಗಿ ರಾಜ್ಯ ರಾಜಧಾನಿ ಸೇರಿದಂತೆ ಕೇರಳದ ಕೆಲವು ಪ್ರದೇಶಗಳಲ್ಲಿ ಉದ್ವಿಗ್ನತೆ ಉಂಟಾಗಿದೆ.

ಸಾಕ್ಷ್ಯಚಿತ್ರ ಪ್ರದರ್ಶನಗೊಂಡ ತಿರುವನಂತಪುರಂನ ಪೂಜಾಪ್ಪುರದಲ್ಲೂ ಯುವಮೋರ್ಚಾ ಕಾರ್ಯಕರ್ತರು ಜಮಾಯಿಸಿದ್ದರು. ಮಂಗಳವಾರ ಸಂಜೆ ಎರ್ನಾಕುಲಂ ಮತ್ತು ತಿರುವನಂತಪುರಂನ ಕೆಲವು ಕಾಲೇಜುಗಳಲ್ಲಿ ಹೆಚ್ಚಿನ ಪ್ರದರ್ಶನಗಳು ನಡೆದವು. ಆದರೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳದ ಮಾಜಿ ಸಿಎಂ ಎಕೆ ಆಂಟನಿ ಅವರ ಪುತ್ರ ಅನಿಲ್ ಸಾಕ್ಷ್ಯಚಿತ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಕೆಲವೆಡೆ ಅನಿರೀಕ್ಷಿತವಾಗಿ ಬಿಜೆಪಿಗೆ ಬೆಂಬಲ ವ್ಯಕ್ತವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...