Homeಚಳವಳಿಶಾಲಾ ಕಾಲೇಜುಗಳ ಶುಲ್ಕ ಮನ್ನಾಗೆ ಆಗ್ರಹಿಸಿ ಪಶ್ಚಿಮ ಬಂಗಾಳದಾದ್ಯಂತ ಎಸ್‌ಎ‌ಫ್‌ಐ ಪ್ರತಿಭಟನೆ

ಶಾಲಾ ಕಾಲೇಜುಗಳ ಶುಲ್ಕ ಮನ್ನಾಗೆ ಆಗ್ರಹಿಸಿ ಪಶ್ಚಿಮ ಬಂಗಾಳದಾದ್ಯಂತ ಎಸ್‌ಎ‌ಫ್‌ಐ ಪ್ರತಿಭಟನೆ

ಇದು ಕೂಡ ಸರ್ಕಾರದ ಕಣ್ಣು ತೆರೆಯದಿದ್ದರೆ, ನಾವು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿಕ್ಷಣ ಸಚಿವ ಪಾರ್ಥಾ ಚಟರ್ಜಿ ಅವರ ಮನೆಗಳನ್ನು ಘೆರಾವ್ ಮಾಡುತ್ತೇವೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ. 

- Advertisement -
- Advertisement -

ಜೂನ್ 18 ರ ಬುಧವಾರ ಶಾಲಾ ಕಾಲೇಜುಗಳಲ್ಲಿ ಶುಲ್ಕವನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಪಶ್ಚಿಮ ಬಂಗಾಳದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿತು. ಲಾಕ್‌ಡೌನ್‌ ಆಧ ತಿಂಗಳುಗಳವರೆಗೆ ಶಾಲೆ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರಸ್ತುತ ಸೆಮಿಸ್ಟರ್‌ ಶುಲ್ಕವನ್ನು ಮನ್ನಾ ಮಾಡಬೇಕೆಂದು ಸಂಘಟೆಯೂ ಒತ್ತಾಯಿಸಿದೆ. ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಧರಣಿ ಪ್ರತಿಭಟನೆ ನಡೆಸಲಾಯಿತು.

“ಲಾಕ್‌ಡೌನ್ ಅವಧಿಯವರೆಗೆ ಶುಲ್ಕವನ್ನು ಮನ್ನಾ ಮಾಡಬೇಕು, ಪ್ರತಿಯೊಬ್ಬ ವಿದ್ಯಾರ್ಥಿಗೂ ಇಂಟರ್ನೆಟ್ ಲಭ್ಯವಾಗುವವರೆಗೆ ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಬಾರದು” ಎಂದು ಎಸ್‌ಎಫ್‌ಐ ಪಶ್ಚಿಮ ಬಂಗಾಳ ಹೇಳಿದೆ.

“ತರಗತಿಗಳು ಪುನರಾರಂಭಗೊಳ್ಳುವ ಮೊದಲು, ಎಲ್ಲಾ ಶಾಲಾ ಕಾಲೇಜು ಕ್ಯಾಂಪಸ್‌ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಮಾಸ್ಕ್‌ಗಳನ್ನು ಮತ್ತು ಸ್ಯಾನಿಟೈಸರ್‌ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಾಗುವಂತೆ ಮಾಡಬೇಕು” ಎಂದು ಅದು ಹೇಳಿದೆ.

ಶಾಂತಿಯುತ ಧರಣಿ ನಡೆಸುತ್ತಿದ್ದ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೂಂಡಾಗಳು ಬಿರ್ಭಮ್‌ನಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಎಸ್‌ಎಫ್‌ಐ ಪಶ್ಚಿಮ ಬಂಗಾಳ ರಾಜ್ಯ ಸಮಿತಿ ಸದಸ್ಯ ವಾಸಿಮ್ ರಾಜಾ ಕೂಡ ಗೂಂಡಾಗಳಿಂದ ದೈಹಿಕವಾಗಿ ಹಲ್ಲೆಗೊಳಗಾದರು. ಇದರ ಹೊರತಾಗಿಯೂ ಪ್ರತಿಭಟನೆ ಮುಂದುವರೆಯಿತು.

ಪಶ್ಚಿಮ ಬಂಗಾಳದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಶ್ರೀಜನ್ ಭಟ್ಟಾಚಾರ್ಯ, “ಲಾಕ್‌ಡೌ‌ನ್‌ ಅವಧಿಯಲ್ಲಿ ಶಾಲೆಗಳು ಶುಲ್ಕವನ್ನು ತೆಗೆದುಕೊಳ್ಳಬಾರದು. ಬಹಳಷ್ಟು ಕುಟುಂಬಗಳು ತಮ್ಮ ಆದಾಯದ ಮೂಲವನ್ನು ಕಳೆದುಕೊಂಡಿವೆ. ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೋಷಕರು ಈಗ ಬಹಳ ಸಮಯದಿಂದ ಶುಲ್ಕ ಮನ್ನಾ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಯಾಕೆ ಸರ್ಕಾರ ಗಮನ ಹರಿಸುತ್ತಿಲ್ಲ? ರಾಜ್ಯದ ಟಿಎಂಸಿ ಸರ್ಕಾರವು ಖಾಸಗಿ ಶಾಲೆಗಳನ್ನು ಸಹಕರಿಸುವಂತೆ ಏಕೆ ಕೇಳಬಾರದು? ” ಎಂದು ಕೇಳಿದ್ದಾರೆ.

ಪಶ್ಚಿಮ ಬಂಗಾಳದ ಕೆಲವು ಶಾಲೆಗಳು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶುಲ್ಕ ಪರಿಹಾರವನ್ನು ನೀಡುತ್ತವೆ ಎಂದು ಸೂಚಿಸಿದರೆ, ಹೆಚ್ಚಿನ ಶಾಲೆಗಳು ಈ ವಿಷಯದ ಬಗ್ಗೆ ಏನೂ ಮಾತನಾಡಿಲ್ಲ. ಈಗ ಮೂರು ತಿಂಗಳಿನಿಂದ ಶಾಲೆಗಳನ್ನು ಮುಚ್ಚಲಾಗಿದ್ದರೂ ಹೆಚ್ಚಿನ ಸಂಖ್ಯೆಯ ಖಾಸಗಿ ಶಾಲೆಗಳಲ್ಲಿ, ವಿದ್ಯಾರ್ಥಿಗಳ ಪೋಷಕರು ಸಾರಿಗೆ ಶುಲ್ಕವನ್ನು ಪಾವತಿಸುತ್ತಿದ್ದಾರೆ. ಅವರು ಲ್ಯಾಬ್ ಶುಲ್ಕ ಮತ್ತು ಇತರ ಅಭಿವೃದ್ಧಿ ಶುಲ್ಕಗಳನ್ನು ಸಹ ಪಾವತಿಸುತ್ತಿದ್ದಾರೆ. ಪೋಷಕರು ಈ ಸಮಸ್ಯೆಗಳನ್ನು ಹಲವು ಬಾರಿ ಎತ್ತಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 76,703 ಪ್ರಾಥಮಿಕ ಶಾಲೆಗಳು, 8,839 ಉನ್ನತ ಪ್ರಾಥಮಿಕ ಶಾಲೆಗಳು, 3,296 ಮಾಧ್ಯಮಿಕ ಶಾಲೆಗಳು ಮತ್ತು 6,898 ಹಿರಿಯ ಮಾಧ್ಯಮಿಕ ಶಾಲೆಗಳಿವೆ ಎಂದು 2018 ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್‌ಆರ್‌ಡಿ) ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಸಂಖ್ಯೆ 1,411.

ಎಸ್‌‌ಫ್‌ಐ ಸದಸ್ಯ ಶ್ರೀಜನ್, “ಸಾಂಕ್ರಾಮಿಕ ಸಮಯದಲ್ಲಿ ಸಾಮಾನ್ಯ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ನಾವು ಬೀದಿಗಿಳಿದಿದ್ದೇವೆ. ಇದು ಕೂಡ ಸರ್ಕಾರದ ಕಣ್ಣು ತೆರೆಯದಿದ್ದರೆ, ನಾವು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಶಿಕ್ಷಣ ಸಚಿವ ಪಾರ್ಥಾ ಚಟರ್ಜಿ ಅವರ ಮನೆಗಳನ್ನು ಘೆರಾವ್ ಮಾಡುತ್ತೇವೆ.” ಎಂದು ಎಚ್ಚರಿಸಿದ್ದಾರೆ.


ಓದಿ: ರಾಜಕೀಯ ಹಿಂಸಾಚಾರವನ್ನು ಪ್ರಚಾರ ಮಾಡುವ ಏಕೈಕ ರಾಜ್ಯ ಪಶ್ಚಿಮ ಬಂಗಾಳ: ಅಮಿತ್‌ ಶಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...