Homeಮುಖಪುಟಒಕ್ಕೂಟ ಸರ್ಕಾರದ ಹೊಸ ‘ಸಹಕಾರ ಸಚಿವಾಲಯ’ ಅಮಿತ್‌ ಶಾ ತೆಕ್ಕೆಗೆ!

ಒಕ್ಕೂಟ ಸರ್ಕಾರದ ಹೊಸ ‘ಸಹಕಾರ ಸಚಿವಾಲಯ’ ಅಮಿತ್‌ ಶಾ ತೆಕ್ಕೆಗೆ!

- Advertisement -
- Advertisement -

ಹೊಸದಾಗಿ ರಚನೆಯಾದ “ಸಹಕಾರ ಸಚಿವಾಲಯ”ವನ್ನು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ನಿರ್ವಹಿಸಲಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಬುಧವಾರ ಒಕ್ಕೂಟ ಸರ್ಕಾರವು ಸಂಪುಟವನ್ನು ಪುನರ್‌‌ರಚನೆ ಮಾಡಿತ್ತು. ಅದರಲ್ಲಿ ಹೆಚ್ಚುವರಿ ಖಾತೆಯನ್ನು ಅಮಿತ್‌ ಷಾ ಅವರಿಗೆ ಹಸ್ತಾಂತರಿಸಲಾಯಿತು. ಸಂಪುಟ ಪುನರ್ರಚನೆಯಲ್ಲಿ ಹಲವರನ್ನು ಬದಲಾಯಿಸಿ, ಹೊಸಬರಿಗೆ ಮಣೆ ಹಾಕಲಾಗಿದೆ.

ದೇಶದಲ್ಲಿ ಸಹಕಾರಿ ಆಂದೋಲನವನ್ನು ಹೆಚ್ಚಿಸುವ ಉದ್ದೇಶದಿಂದ ಹೊಸ ಸಹಕಾರ ಸಚಿವಾಲಯವನ್ನು ರಚಿಸಲಾಗಿದೆ ಎಂದು ಮಂಗಳವಾರ ಒಕ್ಕೂಟ ಸರ್ಕಾರ ಘೋಷಿಸಿದೆ. ಹೊಸ ಸಚಿವಾಲಯವು ದೇಶದಲ್ಲಿ ಸಹಕಾರಿ ಆಂದೋಲನವನ್ನು ಬಲಪಡಿಸಲು ಬೇಕಾಗಿ ಪ್ರತ್ಯೇಕ ಆಡಳಿತ, ಕಾನೂನು ಮತ್ತು ನೀತಿ ಚೌಕಟ್ಟುಗಳನ್ನು ಒದಗಿಸುತ್ತದೆ. ಇದು ಜನ ಆಧಾರಿತ ಚಳುವಳಿಯಾಗಿ ಕಟ್ಟಲು ತಳಮಟ್ಟದಲ್ಲಿ ಸಹಾಯ ಮಾಡುತ್ತದೆ ಎಂದು ಸರ್ಕಾರ ಹೇಳಿದೆ.

ಸಹಕಾರಿ ಸಚಿವಾಲಯವನ್ನು ರಚಿಸುವ ನಿರ್ಧಾರವನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಈ ವರ್ಷದ ಬಜೆಟ್ ಭಾಷಣದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ನಿತೀಶ್‌ ಕುಮಾರ್‌ರವರ JDU ಯಾವಾಗ ಬೇಕಾದರೂ ಇಬ್ಭಾಗವಾಗಬಹುದು: ಚಿರಾಗ್ ಪಾಸ್ವಾನ್

ಪ್ರಧಾನಿ ನರೇಂದ್ರ ಮೋದಿಯ ರಾಜಕೀಯ ಜೀವನದಲ್ಲಿ ಅಮಿತ್ ಶಾ ಪ್ರಮುಖ ಒಡನಾಡಿಯಾಗಿದ್ದಾರೆ. ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ ಅಮಿತ್‌ ಷಾ ಅಲ್ಲಿನ ಗೃಹ ಸಚಿವರಾಗಿದ್ದರು. ಪ್ರಸ್ತುತ ಅಮಿತ್‌ ಶಾ ಅವರ ಸಹಾಯಕ್ಕೆ ರಾಜ್ಯ ಖಾತೆ ಸಚಿವರಾಗಿ ನಿತ್ಯಾನಂದ್ ರೈ, ಅಜಯ್ ಕುಮಾರ್ ಮತ್ತು ನಿಸಿತ್ ಪ್ರಮಾಣಿಕ್ ಇದ್ದಾರೆ.

ಒಕ್ಕೂಟ ಸರ್ಕಾರ ಹೊಸದಾಗಿ ಪ್ರಾರಂಭಿಸಿದ ಸಹಕಾರ ಸಚಿವಾಲಯದ ವಿರುದ್ದ ವಿರೋಧ ಪಕ್ಷಗಳು ಕಿಡಿ ಕಾರಿದೆ.

ಸಿಪಿಐಎಂ ನಾಯಕ ಸೀತಾರಾಮ್ ಯಚೂರಿ ಅವರು, “ನರೇಂದ್ರ ಮೋದಿಯವರೇ, ಹೊಸ ಸಹಕಾರ ಸಚಿವಾಲಯ ಯಾಕೆ? ಸಹಕಾರ ಕ್ಷೇತ್ರವೆಂಬುದು ಸಂವಿಧಾನದ 7 ನೇ ಶೆಡ್ಯೂಲ್‌‌ ಪ್ರಕಾರ ರಾಜ್ಯ ಪಟ್ಟಿಯಲ್ಲಿರುವ ವಿಷಯ. ಇದು ಒಕ್ಕೂಟ ವ್ಯವಸ್ಥೆಯ ಮೇಲೆ ಎಸಗಿದ ಮತ್ತೊಂದು ದಾಳಿ. ಸಾರ್ವಜನಿಕ ವಲಯದ ಬ್ಯಾಂಕ್ ಗಳ ಮೂಲಕ ಕ್ರೋನಿ ಬಂಡವಾಳಶಾಹಿಗಳಿಗೆ ಸಾವಿರಾರು ಕೋಟಿ ರುಪಾಯಿ ಸಾಲ ಕೊಟ್ಟು, ಈಗ ಇನ್ನೂ ಹೆಚ್ಚಿನ ಲೂಟಿ ಮಾಡಲು ದೇಶದಾದ್ಯಂತ ಇರುವ ಸಹಕಾರಿ ಬ್ಯಾಂಕುಗಳ ದುಡ್ಡಿನ ಮೇಲೆ ಕಣ್ಣು ಹಾಕಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...