Homeಮುಖಪುಟಬಾಬರಿ ಮಸೀದಿ ಧ್ವಂಸ ಪ್ರಕರಣ: ವಿಚಾರಣೆಗೂ ಮುನ್ನ ಅಡ್ವಾಣಿಯನ್ನು ಭೇಟಿಯಾದ ಶಾ

ಬಾಬರಿ ಮಸೀದಿ ಧ್ವಂಸ ಪ್ರಕರಣ: ವಿಚಾರಣೆಗೂ ಮುನ್ನ ಅಡ್ವಾಣಿಯನ್ನು ಭೇಟಿಯಾದ ಶಾ

ಅಡ್ವಾಣಿಯನ್ನು ಅಮಿತ್‌ ಷಾ ಭೇಟಿಯಾದಾಗ ಅವರೊಂದಿಗೆ ಸರ್ಕಾರಿ ವಕೀಲರು ಇದ್ದರು ಎಂದು ಸುದ್ದಿ ಸಂಸ್ಥೆ ತಿಳಿಸಿದೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಬಿಜೆಪಿಯ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿಯನ್ನು ಭೇಟಿಯಾಗಿದ್ದಾರೆ, ಅಡ್ವಾಣಿ ಜುಲೈ 24 ಶುಕ್ರವಾರ ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

92 ವರ್ಷದ ಅಡ್ವಾಣಿಯನ್ನು ಅವರ ನಿವಾಸದಲ್ಲಿ ಅಮಿತ್ ಷಾ ಭೇಟಿಯಾದಾಗ ಅವರೊಂದಿಗೆ ಸರ್ಕಾರಿ ವಕೀಲರು ಇದ್ದರು ಎಂದು ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯನ್ನು 1992 ರ ಡಿಸೆಂಬರ್ 6 ರಂದು ಹಿಂದು ಉಗ್ರಗಾಮಿಗಳು ಕೆಡವಿ ಹಾಕಿದ್ದರು.

ಬಿಜೆಪಿ ಮುಖಂಡರಾದ ಅಡ್ವಾಣಿ, ಉಮಾ ಭಾರತಿ ಮತ್ತು ಮುರುಳಿ ಮನೋಹರ್ ಜೋಶಿಯವರು ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ವಿಶೇಷ ನ್ಯಾಯಾಧೀಶ ಎಸ್. ಕೆ. ಯಾದವ್ ಗುರುವಾರ ಮುರುಳಿ ಮನೋಹರ್‌ ಜೋಶಿ ಹೇಳಿಕೆಯನ್ನು ದಾಖಲಿಸಲಿದ್ದಾರೆ.

ಬಾಬರಿ ಮಸೀದಿ ಧ್ವಂಸಗೊಳಿಸಿದ ಪ್ರಕರಣದ ವಿಚಾರಣೆಯನ್ನು ಒಂಬತ್ತು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ ವರ್ಷ ಜುಲೈನಲ್ಲಿ ಹೇಳಿತ್ತು. ಆದಾಗ್ಯೂ, ಮೇ 8 ರಂದು ವಿಚಾರಣಾ ನ್ಯಾಯಾಲಯವು ತನ್ನ ತೀರ್ಪನ್ನು ಆಗಸ್ಟ್ 31 ರವರೆಗೆ ಘೋಷಿಸಲು ಗಡುವನ್ನು ವಿಸ್ತರಿಸಿದೆ.

ಏಪ್ರಿಲ್ 19, 2017 ರಂದು, ಉನ್ನತ ನ್ಯಾಯಾಲಯವು ಈ ಪ್ರಕರಣದಲ್ಲಿ ದಿನನಿತ್ಯದ ವಿಚಾರಣೆಗೆ ಆದೇಶಿಸಿತ್ತು. ಅದನ್ನು ಎರಡು ವರ್ಷಗಳಲ್ಲಿ ತೀರ್ಮಾನಿಸಬೇಕು ಎಂದು ಹೇಳಲಾಗಿತ್ತು. ಅಡ್ವಾಣಿ, ಜೋಶಿ, ವಿನಯ್ ಕಟಿಯಾರ್, ರಿತಂಬರ ಮತ್ತು ವಿಷ್ಣು ಹರಿ ದಾಲ್ಮಿಯಾ ವಿರುದ್ಧ ದಾಖಲಾದ ಕ್ರಿಮಿನಲ್ ಪಿತೂರಿ ಆರೋಪಗಳನ್ನು ನ್ಯಾಯಾಲಯವು ಮತ್ತೆ ವಿಚಾರಣೆಗೆ ತೆಗೆದುಕೊಂಡಿತು.

ಪ್ರಕರಣದಲ್ಲಿ ಈ ಹಿಂದೆ ಖುಲಾಸೆಗೊಂಡಿದ್ದ ಹಲವಾರು ಇತರ ಹಿಂದುತ್ವ ನಾಯಕರ ವಿರುದ್ಧದ ಆರೋಪಗಳನ್ನೂ ಸಹ ವಿಚಾರಣೆಗೆ ತೆಗೆದುಕೊಂಡಿತು. ಇತರ ಮೂವರು ಆರೋಪಿಗಳಾದ ಗಿರಿರಾಜ್ ಕಿಶೋರ್, ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮತ್ತು ವಿಷ್ಣು ಹರಿ ದಾಲ್ಮಿಯಾ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದರು ಹಾಗಾಗಿ ಅವರ ವಿರುದ್ಧದ ವಿಚಾರಣೆಯನ್ನು ರದ್ದುಪಡಿಸಲಾಯಿತು.

ನವೆಂಬರ್‌ನಲ್ಲಿ ನೀಡಿದ ಮಹತ್ವದ ತೀರ್ಪಿನಲ್ಲಿ, ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಭೂಮಿಯನ್ನು ರಾಮ ಮಂದಿರ ನಿರ್ಮಾಣಕ್ಕಾಗಿ ಸರ್ಕಾರ ನಡೆಸುವ ಟ್ರಸ್ಟ್‌ಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಬಾಬರಿ ಮಸೀದಿ ನೆಲಸಮ ಮಾಡಿರುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಹೇಳಿದ್ದು, ಮಸೀದಿ ನಿರ್ಮಿಸಲು ಪರ್ಯಾಯ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅಯೋಧ್ಯೆಯ ರಾಮ ದೇವಾಲಯದ ಅಡಿಪಾಯ ಹಾಕುವ ಸಮಾರಂಭ ಆಗಸ್ಟ್ 5 ರಂದು ನಡೆಯಲಿದೆ ಎಂದು ಪಿಟಿಐ ವರದಿ ಮಾಡಿದೆ. ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಲಾಗಿದೆ.


ಇದನ್ನೂ ಓದಿ: ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...