Homeಮುಖಪುಟಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ - ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ – ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಉಳಿಸಲು ಮೋದಿ ಸರ್ಕಾರ ಬದ್ಧವಾಗಿದ್ದು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

- Advertisement -
- Advertisement -

ರಾಷ್ಟ್ರೀಯ ಪತ್ರಿಕಾ ದಿನದಂದು ಕೇಂದ್ರ ಗೃಹ ಮಂತ್ರಿ ಅಮಿತ್‌ ಷಾ, ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಮಾಡಿದ್ದ ಟ್ವೀಟ್‌ಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನವಾದ ನಿನ್ನೆ, “ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನ ಶುಭಾಶಯಗಳು. ನಮ್ಮ ಮಾಧ್ಯಮ ಭ್ರಾತೃತ್ವ ಮಹಾನ್ ದೇಶದ ಅಡಿಪಾಯವನ್ನು ಬಲಪಡಿಸಲು ದಣಿವರಿಯಿಲ್ಲದೆ ಕೆಲಸಗಳನ್ನು ಮಾಡುತ್ತಿದೆ. ಮೋದಿ ಸರ್ಕಾರ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ. ಕೊರೊನಾ ಸಮಯದಲ್ಲಿ ಮಾಧ್ಯಮದ ಗಮನಾರ್ಹ ಪಾತ್ರವನ್ನು ನಾನು ಶ್ಲಾಘಿಸುತ್ತೇನೆ” ಎಂದು ಅಮಿತ್‌ ಷಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಅರ್ನಬ್ ಪತ್ರಿಕೋದ್ಯಮ ಪೊಳ್ಳಾಗಿರುವ ಸಂದರ್ಭದಲ್ಲಿ ಪೊಲೀಸ್ ಅತಿರೇಕ ಸಮರ್ಥಿಸಬಾರದು, ದಿಟ ಮಾಧ್ಯಮ ಕಟ್ಟಬೇಕು

ಗೃಹಸಚಿವರ ಹೇಳಿಕೆಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಸಿದ್ದು, ಇನ್ನೂ ಪತ್ರಿಕಾ ಸ್ವಾತಂತ್ರವನ್ನು ಕೇಂದ್ರದ ಬಿಜೆಪಿ ಸರ್ಕಾರ ಧಮನಿಸುತ್ತಿದೆ. ಭಾರತವು ಪತ್ರಿಕಾ ಸ್ವಾತಂತ್ಯ್ರ ಸೂಚ್ಯಂಕದಲ್ಲಿ 180 ರಾಷ್ಟ್ರಗಳಲ್ಲಿ 142 ನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಅರ್ಪಿತಾ ಬಾತ್ರ, “ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ನಾವು 180 ರಾಷ್ಟ್ರಗಳಲ್ಲಿ 142 ನೇ ಸ್ಥಾನವನ್ನು ತಲುಪಿದ್ದೇವೆ. ನಾವು ಇನ್ನೂ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದರೆ, ಮ್ಯಾಜಿಕ್ ಸ್ಥಾನಕ್ಕೆ ಹೋಗಲು ಕೇವಲ 38 ಸ್ಥಾನಗಳ ದೂರದಲ್ಲಿದ್ದೇವೆ” ಎಂದು ವ್ಯಂಗ್ಯವಾಡಿ ದಿ ಹಿಂದೂ ಪತ್ರಿಕೆಯ ವರದಿಯೊಂದನ್ನು ಹಾಕಿದ್ದಾರೆ.

ಸಜ್ಜನ್ ಎಂ. ಎಸ್., “ಪತ್ರಿಕಾ ಸ್ವಾತಂತ್ಯ್ರ ಹರಣದ ವಿರುದ್ದದ ನಿಮ್ಮ ವಿರೋಧವು ಕೇವಲ ಅರ್ನಬ್‌ಗೆ ಮಾತ್ರ ಸೀಮಿತವಾಗದಿರಲಿ ಕೆಳಗಿನವರಿಗೂ ಅನ್ವಯಿಸಲಿ” ಎಂದು ಬಂಧನಕ್ಕೊಳಗಾದ ಹಲವಾರು ಪತ್ರಕರ್ತರ ಹೆಸರನ್ನು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಹರ್ಷ ಶರ್ಮ, “ಹೌದು ನಮ್ಮ ಸಮುದಾಯ, ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ನಾಶಮಾಡಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿ, ಭಾರತದ ಪತ್ರಿಕಾ ಸ್ವಾತಂತ್ಯ್ರದ ಸೂಚ್ಯಾಂಕ ಬಗೆಗಿನ ವರದಿಯೊಂದನ್ನು ಹಾಕಿದ್ದಾರೆ.

ಪಂಕಜ್ ಸರಪ್, “ಕೊರೊನಾ ಮತ್ತು ಆರ್ಥಿಕ ಸಂಬಂಧಿತ ಸಮಸ್ಯೆಗಳನ್ನು ವರದಿ ಮಾಡದೆ, ಮಧ್ಯಮ ವರ್ಗದ ಜನರ ನಡುವೆ ದ್ವೇಷ ಹರಡಿ ಉತ್ತಮವಾಗಿ ಟೈಮ್‌ಪಾಸ್‌ಗೆ ತೊಡಗಿಸಿಕೊಂಡದ್ದಕ್ಕೆ ಈ ಶುಭಾಶಯವೆ” ಎಂದು ಪ್ರಶ್ನಿಸಿದ್ದಾರೆ.

ಪಿ. ಬಾಲಸುಂದರಂ, ಗೃಹಮಂತ್ರಿಗಳ ಶುಭಾಶಯ ಹಾಗೂ ಪತ್ರಿಕಾ ಸ್ವಾತಂತ್ಯ್ರದ ಬಗೆಗಿನ ಮಾತುಗಳ ಹೊರತಾಗಿಯೂ, ನಮ್ಮ ಪ್ರಧಾನ ಮಂತ್ರಿ ಪತ್ರಿಕೆಯವರನ್ನು ಯಾಕೆ ಇನ್ನೂ ಭೇಟಿಯಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತವನ್ನು ವಹಿಸಿಕೊಂಡ ನಂತರ ಪೂರ್ಣ ಪ್ರಮಾಣದ ಪತ್ರಿಕಾಗೋಷ್ಠಿಯನ್ನಾಗಲಿ ಪತ್ರಕರ್ತರ ಪ್ರಶ್ನೆಗಳನ್ನಾಗಿ ಇದುವರೆಗೂ ಎದುರಿಸಲಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

ರೆಡ್ ಇಂಡಿಯನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, ಉತ್ತರ ಪ್ರದೇಶ ಸರ್ಕಾರದಿಂದ ಬಂಧಿತರಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಬಗ್ಗೆ ಪ್ರಶ್ನಿಸಿದ್ದು, “ಸಿದ್ದೀಕ್ ಕಪ್ಪನ್ ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಾತನಾಡಿ, ಇದು ಒಳ್ಳೆಯ ಕೆಲಸ” ಎಂದು ಹೇಳಿದ್ದಾರೆ.

ರಾಜೇಶ್ ಸ್ರೀವಾತ್ಸವ, “ಭಾರತದಲ್ಲಿ ಇಂದು ಬಿಜೆಪಿಯ ಸಾಕು ಪ್ರಾಣಿಗಳ ದಿನ, ಶುಭಾಶಯಗಳು ಅರ್ನಬ್, ಅಂಜನಾ, ಸುಧೀರ್‌ ಚೌಧರಿ, ದೀಪಕ್‌ ಚುರಾಸಿಯಾ, ನಾವಿಕಾ ಕುಮಾರ್‌, ಶಿವ ಶಂಕರ್‌, ಅಮಿಶ್ ದೇವಗನ್, ರುಬಿಕಾ ಲಿಕಾಯತ್ ಮತ್ತು ಈ ಪಟ್ಟಿಗೆ ಕೊನೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಗುಡ್ ಮ್ಯಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ಎಲ್ಲವನ್ನೂ ಖರೀದಿ ಮಾಡಲಾಗಿದೆ ಮೋಟಾ ಭಾಯ್” ಎಂದು ಹೇಳಿದ್ದಾರೆ.

ಆರ್‌‌. ಥಾನ್‌ಕಪ್ಪನ್, ಬಿಜೆಪಿ ಸರ್ಕರ ಬಂಧಿಸಿದ ಎಲ್ಲಾ ಪತ್ರಕರ್ತರಿಗೆ ಅನುಕಂಪವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶರಣು ಎನ್. ಒಳ್ಳೆಯ ಹಾಸ್ಯ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ನೀತಿ ಧಿಕ್ಕರಿಸಿ ಮೃತದೇಹದ ಚಿತ್ರ ಪ್ರಕಟಣೆ ಸಮರ್ಥಿಸಿಕೊಂಡ ’ಗುಜರಾತ್ ಸಮಾಚಾರ್‌’

ಅಮಿತ್‌ ಅಣ್ಣಾ ನಿಮಗೆ ಒಳ್ಳೆಯ ಹಾಸ್ಯ ಗುಣವಿದೆ ಎಂದು ನಂದು ಬರೆದಿದ್ದಾರೆ.

“ಗೃಹ ಸಚಿವರು ತಮ್ಮ ಸಂದೇಶದ ನಂತರ ನಗುತ್ತಿರುವ ಸ್ಟಿಕ್ಕರ್‌ ಹಾಕಲು ಮರೆತಿದ್ದಾರೆ ಎಂಬ ವ್ಯಂಗ್ಯ”

ಸುನಿಲ್ ಕುಮಾರ್‌, ವಿಶೇಷವಾಗಿ ಅರ್ನಬ್‌ಗೆ ಈ ಸಂದೇಶ ಎಂದು ವ್ಯಂಗ್ಯವಾಡಿದ್ದಾರೆ.

ಐಶಿ, “ವ್ಯಂಗ್ಯ ಸತ್ತೇ ಹೋಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...