Homeಮುಖಪುಟಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ - ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ – ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಉಳಿಸಲು ಮೋದಿ ಸರ್ಕಾರ ಬದ್ಧವಾಗಿದ್ದು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

- Advertisement -
- Advertisement -

ರಾಷ್ಟ್ರೀಯ ಪತ್ರಿಕಾ ದಿನದಂದು ಕೇಂದ್ರ ಗೃಹ ಮಂತ್ರಿ ಅಮಿತ್‌ ಷಾ, ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಮಾಡಿದ್ದ ಟ್ವೀಟ್‌ಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನವಾದ ನಿನ್ನೆ, “ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನ ಶುಭಾಶಯಗಳು. ನಮ್ಮ ಮಾಧ್ಯಮ ಭ್ರಾತೃತ್ವ ಮಹಾನ್ ದೇಶದ ಅಡಿಪಾಯವನ್ನು ಬಲಪಡಿಸಲು ದಣಿವರಿಯಿಲ್ಲದೆ ಕೆಲಸಗಳನ್ನು ಮಾಡುತ್ತಿದೆ. ಮೋದಿ ಸರ್ಕಾರ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ. ಕೊರೊನಾ ಸಮಯದಲ್ಲಿ ಮಾಧ್ಯಮದ ಗಮನಾರ್ಹ ಪಾತ್ರವನ್ನು ನಾನು ಶ್ಲಾಘಿಸುತ್ತೇನೆ” ಎಂದು ಅಮಿತ್‌ ಷಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಅರ್ನಬ್ ಪತ್ರಿಕೋದ್ಯಮ ಪೊಳ್ಳಾಗಿರುವ ಸಂದರ್ಭದಲ್ಲಿ ಪೊಲೀಸ್ ಅತಿರೇಕ ಸಮರ್ಥಿಸಬಾರದು, ದಿಟ ಮಾಧ್ಯಮ ಕಟ್ಟಬೇಕು

ಗೃಹಸಚಿವರ ಹೇಳಿಕೆಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಸಿದ್ದು, ಇನ್ನೂ ಪತ್ರಿಕಾ ಸ್ವಾತಂತ್ರವನ್ನು ಕೇಂದ್ರದ ಬಿಜೆಪಿ ಸರ್ಕಾರ ಧಮನಿಸುತ್ತಿದೆ. ಭಾರತವು ಪತ್ರಿಕಾ ಸ್ವಾತಂತ್ಯ್ರ ಸೂಚ್ಯಂಕದಲ್ಲಿ 180 ರಾಷ್ಟ್ರಗಳಲ್ಲಿ 142 ನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಅರ್ಪಿತಾ ಬಾತ್ರ, “ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ನಾವು 180 ರಾಷ್ಟ್ರಗಳಲ್ಲಿ 142 ನೇ ಸ್ಥಾನವನ್ನು ತಲುಪಿದ್ದೇವೆ. ನಾವು ಇನ್ನೂ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದರೆ, ಮ್ಯಾಜಿಕ್ ಸ್ಥಾನಕ್ಕೆ ಹೋಗಲು ಕೇವಲ 38 ಸ್ಥಾನಗಳ ದೂರದಲ್ಲಿದ್ದೇವೆ” ಎಂದು ವ್ಯಂಗ್ಯವಾಡಿ ದಿ ಹಿಂದೂ ಪತ್ರಿಕೆಯ ವರದಿಯೊಂದನ್ನು ಹಾಕಿದ್ದಾರೆ.

ಸಜ್ಜನ್ ಎಂ. ಎಸ್., “ಪತ್ರಿಕಾ ಸ್ವಾತಂತ್ಯ್ರ ಹರಣದ ವಿರುದ್ದದ ನಿಮ್ಮ ವಿರೋಧವು ಕೇವಲ ಅರ್ನಬ್‌ಗೆ ಮಾತ್ರ ಸೀಮಿತವಾಗದಿರಲಿ ಕೆಳಗಿನವರಿಗೂ ಅನ್ವಯಿಸಲಿ” ಎಂದು ಬಂಧನಕ್ಕೊಳಗಾದ ಹಲವಾರು ಪತ್ರಕರ್ತರ ಹೆಸರನ್ನು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಹರ್ಷ ಶರ್ಮ, “ಹೌದು ನಮ್ಮ ಸಮುದಾಯ, ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ನಾಶಮಾಡಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿ, ಭಾರತದ ಪತ್ರಿಕಾ ಸ್ವಾತಂತ್ಯ್ರದ ಸೂಚ್ಯಾಂಕ ಬಗೆಗಿನ ವರದಿಯೊಂದನ್ನು ಹಾಕಿದ್ದಾರೆ.

ಪಂಕಜ್ ಸರಪ್, “ಕೊರೊನಾ ಮತ್ತು ಆರ್ಥಿಕ ಸಂಬಂಧಿತ ಸಮಸ್ಯೆಗಳನ್ನು ವರದಿ ಮಾಡದೆ, ಮಧ್ಯಮ ವರ್ಗದ ಜನರ ನಡುವೆ ದ್ವೇಷ ಹರಡಿ ಉತ್ತಮವಾಗಿ ಟೈಮ್‌ಪಾಸ್‌ಗೆ ತೊಡಗಿಸಿಕೊಂಡದ್ದಕ್ಕೆ ಈ ಶುಭಾಶಯವೆ” ಎಂದು ಪ್ರಶ್ನಿಸಿದ್ದಾರೆ.

ಪಿ. ಬಾಲಸುಂದರಂ, ಗೃಹಮಂತ್ರಿಗಳ ಶುಭಾಶಯ ಹಾಗೂ ಪತ್ರಿಕಾ ಸ್ವಾತಂತ್ಯ್ರದ ಬಗೆಗಿನ ಮಾತುಗಳ ಹೊರತಾಗಿಯೂ, ನಮ್ಮ ಪ್ರಧಾನ ಮಂತ್ರಿ ಪತ್ರಿಕೆಯವರನ್ನು ಯಾಕೆ ಇನ್ನೂ ಭೇಟಿಯಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತವನ್ನು ವಹಿಸಿಕೊಂಡ ನಂತರ ಪೂರ್ಣ ಪ್ರಮಾಣದ ಪತ್ರಿಕಾಗೋಷ್ಠಿಯನ್ನಾಗಲಿ ಪತ್ರಕರ್ತರ ಪ್ರಶ್ನೆಗಳನ್ನಾಗಿ ಇದುವರೆಗೂ ಎದುರಿಸಲಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

ರೆಡ್ ಇಂಡಿಯನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, ಉತ್ತರ ಪ್ರದೇಶ ಸರ್ಕಾರದಿಂದ ಬಂಧಿತರಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಬಗ್ಗೆ ಪ್ರಶ್ನಿಸಿದ್ದು, “ಸಿದ್ದೀಕ್ ಕಪ್ಪನ್ ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಾತನಾಡಿ, ಇದು ಒಳ್ಳೆಯ ಕೆಲಸ” ಎಂದು ಹೇಳಿದ್ದಾರೆ.

ರಾಜೇಶ್ ಸ್ರೀವಾತ್ಸವ, “ಭಾರತದಲ್ಲಿ ಇಂದು ಬಿಜೆಪಿಯ ಸಾಕು ಪ್ರಾಣಿಗಳ ದಿನ, ಶುಭಾಶಯಗಳು ಅರ್ನಬ್, ಅಂಜನಾ, ಸುಧೀರ್‌ ಚೌಧರಿ, ದೀಪಕ್‌ ಚುರಾಸಿಯಾ, ನಾವಿಕಾ ಕುಮಾರ್‌, ಶಿವ ಶಂಕರ್‌, ಅಮಿಶ್ ದೇವಗನ್, ರುಬಿಕಾ ಲಿಕಾಯತ್ ಮತ್ತು ಈ ಪಟ್ಟಿಗೆ ಕೊನೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಗುಡ್ ಮ್ಯಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ಎಲ್ಲವನ್ನೂ ಖರೀದಿ ಮಾಡಲಾಗಿದೆ ಮೋಟಾ ಭಾಯ್” ಎಂದು ಹೇಳಿದ್ದಾರೆ.

ಆರ್‌‌. ಥಾನ್‌ಕಪ್ಪನ್, ಬಿಜೆಪಿ ಸರ್ಕರ ಬಂಧಿಸಿದ ಎಲ್ಲಾ ಪತ್ರಕರ್ತರಿಗೆ ಅನುಕಂಪವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶರಣು ಎನ್. ಒಳ್ಳೆಯ ಹಾಸ್ಯ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ನೀತಿ ಧಿಕ್ಕರಿಸಿ ಮೃತದೇಹದ ಚಿತ್ರ ಪ್ರಕಟಣೆ ಸಮರ್ಥಿಸಿಕೊಂಡ ’ಗುಜರಾತ್ ಸಮಾಚಾರ್‌’

ಅಮಿತ್‌ ಅಣ್ಣಾ ನಿಮಗೆ ಒಳ್ಳೆಯ ಹಾಸ್ಯ ಗುಣವಿದೆ ಎಂದು ನಂದು ಬರೆದಿದ್ದಾರೆ.

“ಗೃಹ ಸಚಿವರು ತಮ್ಮ ಸಂದೇಶದ ನಂತರ ನಗುತ್ತಿರುವ ಸ್ಟಿಕ್ಕರ್‌ ಹಾಕಲು ಮರೆತಿದ್ದಾರೆ ಎಂಬ ವ್ಯಂಗ್ಯ”

ಸುನಿಲ್ ಕುಮಾರ್‌, ವಿಶೇಷವಾಗಿ ಅರ್ನಬ್‌ಗೆ ಈ ಸಂದೇಶ ಎಂದು ವ್ಯಂಗ್ಯವಾಡಿದ್ದಾರೆ.

ಐಶಿ, “ವ್ಯಂಗ್ಯ ಸತ್ತೇ ಹೋಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...