Homeಮುಖಪುಟಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ - ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ – ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಉಳಿಸಲು ಮೋದಿ ಸರ್ಕಾರ ಬದ್ಧವಾಗಿದ್ದು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

- Advertisement -
- Advertisement -

ರಾಷ್ಟ್ರೀಯ ಪತ್ರಿಕಾ ದಿನದಂದು ಕೇಂದ್ರ ಗೃಹ ಮಂತ್ರಿ ಅಮಿತ್‌ ಷಾ, ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಮಾಡಿದ್ದ ಟ್ವೀಟ್‌ಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನವಾದ ನಿನ್ನೆ, “ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನ ಶುಭಾಶಯಗಳು. ನಮ್ಮ ಮಾಧ್ಯಮ ಭ್ರಾತೃತ್ವ ಮಹಾನ್ ದೇಶದ ಅಡಿಪಾಯವನ್ನು ಬಲಪಡಿಸಲು ದಣಿವರಿಯಿಲ್ಲದೆ ಕೆಲಸಗಳನ್ನು ಮಾಡುತ್ತಿದೆ. ಮೋದಿ ಸರ್ಕಾರ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ. ಕೊರೊನಾ ಸಮಯದಲ್ಲಿ ಮಾಧ್ಯಮದ ಗಮನಾರ್ಹ ಪಾತ್ರವನ್ನು ನಾನು ಶ್ಲಾಘಿಸುತ್ತೇನೆ” ಎಂದು ಅಮಿತ್‌ ಷಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಅರ್ನಬ್ ಪತ್ರಿಕೋದ್ಯಮ ಪೊಳ್ಳಾಗಿರುವ ಸಂದರ್ಭದಲ್ಲಿ ಪೊಲೀಸ್ ಅತಿರೇಕ ಸಮರ್ಥಿಸಬಾರದು, ದಿಟ ಮಾಧ್ಯಮ ಕಟ್ಟಬೇಕು

ಗೃಹಸಚಿವರ ಹೇಳಿಕೆಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಸಿದ್ದು, ಇನ್ನೂ ಪತ್ರಿಕಾ ಸ್ವಾತಂತ್ರವನ್ನು ಕೇಂದ್ರದ ಬಿಜೆಪಿ ಸರ್ಕಾರ ಧಮನಿಸುತ್ತಿದೆ. ಭಾರತವು ಪತ್ರಿಕಾ ಸ್ವಾತಂತ್ಯ್ರ ಸೂಚ್ಯಂಕದಲ್ಲಿ 180 ರಾಷ್ಟ್ರಗಳಲ್ಲಿ 142 ನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಅರ್ಪಿತಾ ಬಾತ್ರ, “ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ನಾವು 180 ರಾಷ್ಟ್ರಗಳಲ್ಲಿ 142 ನೇ ಸ್ಥಾನವನ್ನು ತಲುಪಿದ್ದೇವೆ. ನಾವು ಇನ್ನೂ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದರೆ, ಮ್ಯಾಜಿಕ್ ಸ್ಥಾನಕ್ಕೆ ಹೋಗಲು ಕೇವಲ 38 ಸ್ಥಾನಗಳ ದೂರದಲ್ಲಿದ್ದೇವೆ” ಎಂದು ವ್ಯಂಗ್ಯವಾಡಿ ದಿ ಹಿಂದೂ ಪತ್ರಿಕೆಯ ವರದಿಯೊಂದನ್ನು ಹಾಕಿದ್ದಾರೆ.

ಸಜ್ಜನ್ ಎಂ. ಎಸ್., “ಪತ್ರಿಕಾ ಸ್ವಾತಂತ್ಯ್ರ ಹರಣದ ವಿರುದ್ದದ ನಿಮ್ಮ ವಿರೋಧವು ಕೇವಲ ಅರ್ನಬ್‌ಗೆ ಮಾತ್ರ ಸೀಮಿತವಾಗದಿರಲಿ ಕೆಳಗಿನವರಿಗೂ ಅನ್ವಯಿಸಲಿ” ಎಂದು ಬಂಧನಕ್ಕೊಳಗಾದ ಹಲವಾರು ಪತ್ರಕರ್ತರ ಹೆಸರನ್ನು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಹರ್ಷ ಶರ್ಮ, “ಹೌದು ನಮ್ಮ ಸಮುದಾಯ, ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ನಾಶಮಾಡಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿ, ಭಾರತದ ಪತ್ರಿಕಾ ಸ್ವಾತಂತ್ಯ್ರದ ಸೂಚ್ಯಾಂಕ ಬಗೆಗಿನ ವರದಿಯೊಂದನ್ನು ಹಾಕಿದ್ದಾರೆ.

ಪಂಕಜ್ ಸರಪ್, “ಕೊರೊನಾ ಮತ್ತು ಆರ್ಥಿಕ ಸಂಬಂಧಿತ ಸಮಸ್ಯೆಗಳನ್ನು ವರದಿ ಮಾಡದೆ, ಮಧ್ಯಮ ವರ್ಗದ ಜನರ ನಡುವೆ ದ್ವೇಷ ಹರಡಿ ಉತ್ತಮವಾಗಿ ಟೈಮ್‌ಪಾಸ್‌ಗೆ ತೊಡಗಿಸಿಕೊಂಡದ್ದಕ್ಕೆ ಈ ಶುಭಾಶಯವೆ” ಎಂದು ಪ್ರಶ್ನಿಸಿದ್ದಾರೆ.

ಪಿ. ಬಾಲಸುಂದರಂ, ಗೃಹಮಂತ್ರಿಗಳ ಶುಭಾಶಯ ಹಾಗೂ ಪತ್ರಿಕಾ ಸ್ವಾತಂತ್ಯ್ರದ ಬಗೆಗಿನ ಮಾತುಗಳ ಹೊರತಾಗಿಯೂ, ನಮ್ಮ ಪ್ರಧಾನ ಮಂತ್ರಿ ಪತ್ರಿಕೆಯವರನ್ನು ಯಾಕೆ ಇನ್ನೂ ಭೇಟಿಯಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತವನ್ನು ವಹಿಸಿಕೊಂಡ ನಂತರ ಪೂರ್ಣ ಪ್ರಮಾಣದ ಪತ್ರಿಕಾಗೋಷ್ಠಿಯನ್ನಾಗಲಿ ಪತ್ರಕರ್ತರ ಪ್ರಶ್ನೆಗಳನ್ನಾಗಿ ಇದುವರೆಗೂ ಎದುರಿಸಲಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

ರೆಡ್ ಇಂಡಿಯನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, ಉತ್ತರ ಪ್ರದೇಶ ಸರ್ಕಾರದಿಂದ ಬಂಧಿತರಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಬಗ್ಗೆ ಪ್ರಶ್ನಿಸಿದ್ದು, “ಸಿದ್ದೀಕ್ ಕಪ್ಪನ್ ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಾತನಾಡಿ, ಇದು ಒಳ್ಳೆಯ ಕೆಲಸ” ಎಂದು ಹೇಳಿದ್ದಾರೆ.

ರಾಜೇಶ್ ಸ್ರೀವಾತ್ಸವ, “ಭಾರತದಲ್ಲಿ ಇಂದು ಬಿಜೆಪಿಯ ಸಾಕು ಪ್ರಾಣಿಗಳ ದಿನ, ಶುಭಾಶಯಗಳು ಅರ್ನಬ್, ಅಂಜನಾ, ಸುಧೀರ್‌ ಚೌಧರಿ, ದೀಪಕ್‌ ಚುರಾಸಿಯಾ, ನಾವಿಕಾ ಕುಮಾರ್‌, ಶಿವ ಶಂಕರ್‌, ಅಮಿಶ್ ದೇವಗನ್, ರುಬಿಕಾ ಲಿಕಾಯತ್ ಮತ್ತು ಈ ಪಟ್ಟಿಗೆ ಕೊನೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಗುಡ್ ಮ್ಯಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ಎಲ್ಲವನ್ನೂ ಖರೀದಿ ಮಾಡಲಾಗಿದೆ ಮೋಟಾ ಭಾಯ್” ಎಂದು ಹೇಳಿದ್ದಾರೆ.

ಆರ್‌‌. ಥಾನ್‌ಕಪ್ಪನ್, ಬಿಜೆಪಿ ಸರ್ಕರ ಬಂಧಿಸಿದ ಎಲ್ಲಾ ಪತ್ರಕರ್ತರಿಗೆ ಅನುಕಂಪವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶರಣು ಎನ್. ಒಳ್ಳೆಯ ಹಾಸ್ಯ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ನೀತಿ ಧಿಕ್ಕರಿಸಿ ಮೃತದೇಹದ ಚಿತ್ರ ಪ್ರಕಟಣೆ ಸಮರ್ಥಿಸಿಕೊಂಡ ’ಗುಜರಾತ್ ಸಮಾಚಾರ್‌’

ಅಮಿತ್‌ ಅಣ್ಣಾ ನಿಮಗೆ ಒಳ್ಳೆಯ ಹಾಸ್ಯ ಗುಣವಿದೆ ಎಂದು ನಂದು ಬರೆದಿದ್ದಾರೆ.

“ಗೃಹ ಸಚಿವರು ತಮ್ಮ ಸಂದೇಶದ ನಂತರ ನಗುತ್ತಿರುವ ಸ್ಟಿಕ್ಕರ್‌ ಹಾಕಲು ಮರೆತಿದ್ದಾರೆ ಎಂಬ ವ್ಯಂಗ್ಯ”

ಸುನಿಲ್ ಕುಮಾರ್‌, ವಿಶೇಷವಾಗಿ ಅರ್ನಬ್‌ಗೆ ಈ ಸಂದೇಶ ಎಂದು ವ್ಯಂಗ್ಯವಾಡಿದ್ದಾರೆ.

ಐಶಿ, “ವ್ಯಂಗ್ಯ ಸತ್ತೇ ಹೋಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...