Homeಮುಖಪುಟಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ - ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ – ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಉಳಿಸಲು ಮೋದಿ ಸರ್ಕಾರ ಬದ್ಧವಾಗಿದ್ದು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

- Advertisement -
- Advertisement -

ರಾಷ್ಟ್ರೀಯ ಪತ್ರಿಕಾ ದಿನದಂದು ಕೇಂದ್ರ ಗೃಹ ಮಂತ್ರಿ ಅಮಿತ್‌ ಷಾ, ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಮಾಡಿದ್ದ ಟ್ವೀಟ್‌ಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನವಾದ ನಿನ್ನೆ, “ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನ ಶುಭಾಶಯಗಳು. ನಮ್ಮ ಮಾಧ್ಯಮ ಭ್ರಾತೃತ್ವ ಮಹಾನ್ ದೇಶದ ಅಡಿಪಾಯವನ್ನು ಬಲಪಡಿಸಲು ದಣಿವರಿಯಿಲ್ಲದೆ ಕೆಲಸಗಳನ್ನು ಮಾಡುತ್ತಿದೆ. ಮೋದಿ ಸರ್ಕಾರ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ. ಕೊರೊನಾ ಸಮಯದಲ್ಲಿ ಮಾಧ್ಯಮದ ಗಮನಾರ್ಹ ಪಾತ್ರವನ್ನು ನಾನು ಶ್ಲಾಘಿಸುತ್ತೇನೆ” ಎಂದು ಅಮಿತ್‌ ಷಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಅರ್ನಬ್ ಪತ್ರಿಕೋದ್ಯಮ ಪೊಳ್ಳಾಗಿರುವ ಸಂದರ್ಭದಲ್ಲಿ ಪೊಲೀಸ್ ಅತಿರೇಕ ಸಮರ್ಥಿಸಬಾರದು, ದಿಟ ಮಾಧ್ಯಮ ಕಟ್ಟಬೇಕು

ಗೃಹಸಚಿವರ ಹೇಳಿಕೆಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಸಿದ್ದು, ಇನ್ನೂ ಪತ್ರಿಕಾ ಸ್ವಾತಂತ್ರವನ್ನು ಕೇಂದ್ರದ ಬಿಜೆಪಿ ಸರ್ಕಾರ ಧಮನಿಸುತ್ತಿದೆ. ಭಾರತವು ಪತ್ರಿಕಾ ಸ್ವಾತಂತ್ಯ್ರ ಸೂಚ್ಯಂಕದಲ್ಲಿ 180 ರಾಷ್ಟ್ರಗಳಲ್ಲಿ 142 ನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಅರ್ಪಿತಾ ಬಾತ್ರ, “ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ನಾವು 180 ರಾಷ್ಟ್ರಗಳಲ್ಲಿ 142 ನೇ ಸ್ಥಾನವನ್ನು ತಲುಪಿದ್ದೇವೆ. ನಾವು ಇನ್ನೂ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದರೆ, ಮ್ಯಾಜಿಕ್ ಸ್ಥಾನಕ್ಕೆ ಹೋಗಲು ಕೇವಲ 38 ಸ್ಥಾನಗಳ ದೂರದಲ್ಲಿದ್ದೇವೆ” ಎಂದು ವ್ಯಂಗ್ಯವಾಡಿ ದಿ ಹಿಂದೂ ಪತ್ರಿಕೆಯ ವರದಿಯೊಂದನ್ನು ಹಾಕಿದ್ದಾರೆ.

ಸಜ್ಜನ್ ಎಂ. ಎಸ್., “ಪತ್ರಿಕಾ ಸ್ವಾತಂತ್ಯ್ರ ಹರಣದ ವಿರುದ್ದದ ನಿಮ್ಮ ವಿರೋಧವು ಕೇವಲ ಅರ್ನಬ್‌ಗೆ ಮಾತ್ರ ಸೀಮಿತವಾಗದಿರಲಿ ಕೆಳಗಿನವರಿಗೂ ಅನ್ವಯಿಸಲಿ” ಎಂದು ಬಂಧನಕ್ಕೊಳಗಾದ ಹಲವಾರು ಪತ್ರಕರ್ತರ ಹೆಸರನ್ನು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಹರ್ಷ ಶರ್ಮ, “ಹೌದು ನಮ್ಮ ಸಮುದಾಯ, ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ನಾಶಮಾಡಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿ, ಭಾರತದ ಪತ್ರಿಕಾ ಸ್ವಾತಂತ್ಯ್ರದ ಸೂಚ್ಯಾಂಕ ಬಗೆಗಿನ ವರದಿಯೊಂದನ್ನು ಹಾಕಿದ್ದಾರೆ.

ಪಂಕಜ್ ಸರಪ್, “ಕೊರೊನಾ ಮತ್ತು ಆರ್ಥಿಕ ಸಂಬಂಧಿತ ಸಮಸ್ಯೆಗಳನ್ನು ವರದಿ ಮಾಡದೆ, ಮಧ್ಯಮ ವರ್ಗದ ಜನರ ನಡುವೆ ದ್ವೇಷ ಹರಡಿ ಉತ್ತಮವಾಗಿ ಟೈಮ್‌ಪಾಸ್‌ಗೆ ತೊಡಗಿಸಿಕೊಂಡದ್ದಕ್ಕೆ ಈ ಶುಭಾಶಯವೆ” ಎಂದು ಪ್ರಶ್ನಿಸಿದ್ದಾರೆ.

ಪಿ. ಬಾಲಸುಂದರಂ, ಗೃಹಮಂತ್ರಿಗಳ ಶುಭಾಶಯ ಹಾಗೂ ಪತ್ರಿಕಾ ಸ್ವಾತಂತ್ಯ್ರದ ಬಗೆಗಿನ ಮಾತುಗಳ ಹೊರತಾಗಿಯೂ, ನಮ್ಮ ಪ್ರಧಾನ ಮಂತ್ರಿ ಪತ್ರಿಕೆಯವರನ್ನು ಯಾಕೆ ಇನ್ನೂ ಭೇಟಿಯಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತವನ್ನು ವಹಿಸಿಕೊಂಡ ನಂತರ ಪೂರ್ಣ ಪ್ರಮಾಣದ ಪತ್ರಿಕಾಗೋಷ್ಠಿಯನ್ನಾಗಲಿ ಪತ್ರಕರ್ತರ ಪ್ರಶ್ನೆಗಳನ್ನಾಗಿ ಇದುವರೆಗೂ ಎದುರಿಸಲಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

ರೆಡ್ ಇಂಡಿಯನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, ಉತ್ತರ ಪ್ರದೇಶ ಸರ್ಕಾರದಿಂದ ಬಂಧಿತರಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಬಗ್ಗೆ ಪ್ರಶ್ನಿಸಿದ್ದು, “ಸಿದ್ದೀಕ್ ಕಪ್ಪನ್ ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಾತನಾಡಿ, ಇದು ಒಳ್ಳೆಯ ಕೆಲಸ” ಎಂದು ಹೇಳಿದ್ದಾರೆ.

ರಾಜೇಶ್ ಸ್ರೀವಾತ್ಸವ, “ಭಾರತದಲ್ಲಿ ಇಂದು ಬಿಜೆಪಿಯ ಸಾಕು ಪ್ರಾಣಿಗಳ ದಿನ, ಶುಭಾಶಯಗಳು ಅರ್ನಬ್, ಅಂಜನಾ, ಸುಧೀರ್‌ ಚೌಧರಿ, ದೀಪಕ್‌ ಚುರಾಸಿಯಾ, ನಾವಿಕಾ ಕುಮಾರ್‌, ಶಿವ ಶಂಕರ್‌, ಅಮಿಶ್ ದೇವಗನ್, ರುಬಿಕಾ ಲಿಕಾಯತ್ ಮತ್ತು ಈ ಪಟ್ಟಿಗೆ ಕೊನೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಗುಡ್ ಮ್ಯಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ಎಲ್ಲವನ್ನೂ ಖರೀದಿ ಮಾಡಲಾಗಿದೆ ಮೋಟಾ ಭಾಯ್” ಎಂದು ಹೇಳಿದ್ದಾರೆ.

ಆರ್‌‌. ಥಾನ್‌ಕಪ್ಪನ್, ಬಿಜೆಪಿ ಸರ್ಕರ ಬಂಧಿಸಿದ ಎಲ್ಲಾ ಪತ್ರಕರ್ತರಿಗೆ ಅನುಕಂಪವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶರಣು ಎನ್. ಒಳ್ಳೆಯ ಹಾಸ್ಯ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ನೀತಿ ಧಿಕ್ಕರಿಸಿ ಮೃತದೇಹದ ಚಿತ್ರ ಪ್ರಕಟಣೆ ಸಮರ್ಥಿಸಿಕೊಂಡ ’ಗುಜರಾತ್ ಸಮಾಚಾರ್‌’

ಅಮಿತ್‌ ಅಣ್ಣಾ ನಿಮಗೆ ಒಳ್ಳೆಯ ಹಾಸ್ಯ ಗುಣವಿದೆ ಎಂದು ನಂದು ಬರೆದಿದ್ದಾರೆ.

“ಗೃಹ ಸಚಿವರು ತಮ್ಮ ಸಂದೇಶದ ನಂತರ ನಗುತ್ತಿರುವ ಸ್ಟಿಕ್ಕರ್‌ ಹಾಕಲು ಮರೆತಿದ್ದಾರೆ ಎಂಬ ವ್ಯಂಗ್ಯ”

ಸುನಿಲ್ ಕುಮಾರ್‌, ವಿಶೇಷವಾಗಿ ಅರ್ನಬ್‌ಗೆ ಈ ಸಂದೇಶ ಎಂದು ವ್ಯಂಗ್ಯವಾಡಿದ್ದಾರೆ.

ಐಶಿ, “ವ್ಯಂಗ್ಯ ಸತ್ತೇ ಹೋಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...