Homeಮುಖಪುಟಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ - ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಕುರಿತ ಅಮಿತ್‌ ಷಾ ಹೇಳಿಕೆ – ’ಒಳ್ಳೆಯ ಜೋಕ್’ ಎಂದ ನೆಟ್ಟಿಗರು!

ಪತ್ರಿಕಾ ಸ್ವಾತಂತ್ಯ್ರ ಉಳಿಸಲು ಮೋದಿ ಸರ್ಕಾರ ಬದ್ಧವಾಗಿದ್ದು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

- Advertisement -
- Advertisement -

ರಾಷ್ಟ್ರೀಯ ಪತ್ರಿಕಾ ದಿನದಂದು ಕೇಂದ್ರ ಗೃಹ ಮಂತ್ರಿ ಅಮಿತ್‌ ಷಾ, ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ ಎಂದು ಮಾಡಿದ್ದ ಟ್ವೀಟ್‌ಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನವಾದ ನಿನ್ನೆ, “ರಾಷ್ಟ್ರೀಯ ಪತ್ರಿಕಾ ಸ್ವಾತಂತ್ಯ್ರ ದಿನ ಶುಭಾಶಯಗಳು. ನಮ್ಮ ಮಾಧ್ಯಮ ಭ್ರಾತೃತ್ವ ಮಹಾನ್ ದೇಶದ ಅಡಿಪಾಯವನ್ನು ಬಲಪಡಿಸಲು ದಣಿವರಿಯಿಲ್ಲದೆ ಕೆಲಸಗಳನ್ನು ಮಾಡುತ್ತಿದೆ. ಮೋದಿ ಸರ್ಕಾರ ಭಾರತದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಬರುವಲ್ಲಿ ಬದ್ಧವಾಗಿದೆ ಮತ್ತು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವವರನ್ನು ವಿರೋಧಿಸುತ್ತದೆ. ಕೊರೊನಾ ಸಮಯದಲ್ಲಿ ಮಾಧ್ಯಮದ ಗಮನಾರ್ಹ ಪಾತ್ರವನ್ನು ನಾನು ಶ್ಲಾಘಿಸುತ್ತೇನೆ” ಎಂದು ಅಮಿತ್‌ ಷಾ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಅರ್ನಬ್ ಪತ್ರಿಕೋದ್ಯಮ ಪೊಳ್ಳಾಗಿರುವ ಸಂದರ್ಭದಲ್ಲಿ ಪೊಲೀಸ್ ಅತಿರೇಕ ಸಮರ್ಥಿಸಬಾರದು, ದಿಟ ಮಾಧ್ಯಮ ಕಟ್ಟಬೇಕು

ಗೃಹಸಚಿವರ ಹೇಳಿಕೆಗೆ ನೆಟ್ಟಿಗರು ತೀಕ್ಷ್ಣವಾಗಿ ಪ್ರತಿಕ್ರಿಯಸಿದ್ದು, ಇನ್ನೂ ಪತ್ರಿಕಾ ಸ್ವಾತಂತ್ರವನ್ನು ಕೇಂದ್ರದ ಬಿಜೆಪಿ ಸರ್ಕಾರ ಧಮನಿಸುತ್ತಿದೆ. ಭಾರತವು ಪತ್ರಿಕಾ ಸ್ವಾತಂತ್ಯ್ರ ಸೂಚ್ಯಂಕದಲ್ಲಿ 180 ರಾಷ್ಟ್ರಗಳಲ್ಲಿ 142 ನೇ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಅರ್ಪಿತಾ ಬಾತ್ರ, “ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ನಾವು 180 ರಾಷ್ಟ್ರಗಳಲ್ಲಿ 142 ನೇ ಸ್ಥಾನವನ್ನು ತಲುಪಿದ್ದೇವೆ. ನಾವು ಇನ್ನೂ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದರೆ, ಮ್ಯಾಜಿಕ್ ಸ್ಥಾನಕ್ಕೆ ಹೋಗಲು ಕೇವಲ 38 ಸ್ಥಾನಗಳ ದೂರದಲ್ಲಿದ್ದೇವೆ” ಎಂದು ವ್ಯಂಗ್ಯವಾಡಿ ದಿ ಹಿಂದೂ ಪತ್ರಿಕೆಯ ವರದಿಯೊಂದನ್ನು ಹಾಕಿದ್ದಾರೆ.

ಸಜ್ಜನ್ ಎಂ. ಎಸ್., “ಪತ್ರಿಕಾ ಸ್ವಾತಂತ್ಯ್ರ ಹರಣದ ವಿರುದ್ದದ ನಿಮ್ಮ ವಿರೋಧವು ಕೇವಲ ಅರ್ನಬ್‌ಗೆ ಮಾತ್ರ ಸೀಮಿತವಾಗದಿರಲಿ ಕೆಳಗಿನವರಿಗೂ ಅನ್ವಯಿಸಲಿ” ಎಂದು ಬಂಧನಕ್ಕೊಳಗಾದ ಹಲವಾರು ಪತ್ರಕರ್ತರ ಹೆಸರನ್ನು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಸ್ವಾತಂತ್ರ್ಯ ಎಂದರೆ ಪತ್ರಕರ್ತನನ್ನು ಪ್ರಶ್ನೆ ಕೇಳಬಾರದು ಎಂದರ್ಥವಲ್ಲ: ಸುಪ್ರೀಂಕೋರ್ಟ್

ಹರ್ಷ ಶರ್ಮ, “ಹೌದು ನಮ್ಮ ಸಮುದಾಯ, ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ನಾಶಮಾಡಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿ, ಭಾರತದ ಪತ್ರಿಕಾ ಸ್ವಾತಂತ್ಯ್ರದ ಸೂಚ್ಯಾಂಕ ಬಗೆಗಿನ ವರದಿಯೊಂದನ್ನು ಹಾಕಿದ್ದಾರೆ.

ಪಂಕಜ್ ಸರಪ್, “ಕೊರೊನಾ ಮತ್ತು ಆರ್ಥಿಕ ಸಂಬಂಧಿತ ಸಮಸ್ಯೆಗಳನ್ನು ವರದಿ ಮಾಡದೆ, ಮಧ್ಯಮ ವರ್ಗದ ಜನರ ನಡುವೆ ದ್ವೇಷ ಹರಡಿ ಉತ್ತಮವಾಗಿ ಟೈಮ್‌ಪಾಸ್‌ಗೆ ತೊಡಗಿಸಿಕೊಂಡದ್ದಕ್ಕೆ ಈ ಶುಭಾಶಯವೆ” ಎಂದು ಪ್ರಶ್ನಿಸಿದ್ದಾರೆ.

ಪಿ. ಬಾಲಸುಂದರಂ, ಗೃಹಮಂತ್ರಿಗಳ ಶುಭಾಶಯ ಹಾಗೂ ಪತ್ರಿಕಾ ಸ್ವಾತಂತ್ಯ್ರದ ಬಗೆಗಿನ ಮಾತುಗಳ ಹೊರತಾಗಿಯೂ, ನಮ್ಮ ಪ್ರಧಾನ ಮಂತ್ರಿ ಪತ್ರಿಕೆಯವರನ್ನು ಯಾಕೆ ಇನ್ನೂ ಭೇಟಿಯಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತವನ್ನು ವಹಿಸಿಕೊಂಡ ನಂತರ ಪೂರ್ಣ ಪ್ರಮಾಣದ ಪತ್ರಿಕಾಗೋಷ್ಠಿಯನ್ನಾಗಲಿ ಪತ್ರಕರ್ತರ ಪ್ರಶ್ನೆಗಳನ್ನಾಗಿ ಇದುವರೆಗೂ ಎದುರಿಸಲಿಲ್ಲ.

ಇದನ್ನೂ ಓದಿ: ಭಾರತದಲ್ಲಿ ಪತ್ರಕರ್ತರಿಗೆ ಕಿರುಕುಳ: ಮೋದಿಗೆ ಪತ್ರ ಬರೆದ ಅಂತರಾಷ್ಟ್ರೀಯ ಪತ್ರಿಕಾ ಸಂಘಗಳು!

ರೆಡ್ ಇಂಡಿಯನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, ಉತ್ತರ ಪ್ರದೇಶ ಸರ್ಕಾರದಿಂದ ಬಂಧಿತರಾಗಿರುವ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಬಗ್ಗೆ ಪ್ರಶ್ನಿಸಿದ್ದು, “ಸಿದ್ದೀಕ್ ಕಪ್ಪನ್ ಇನ್ನೂ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಾತನಾಡಿ, ಇದು ಒಳ್ಳೆಯ ಕೆಲಸ” ಎಂದು ಹೇಳಿದ್ದಾರೆ.

ರಾಜೇಶ್ ಸ್ರೀವಾತ್ಸವ, “ಭಾರತದಲ್ಲಿ ಇಂದು ಬಿಜೆಪಿಯ ಸಾಕು ಪ್ರಾಣಿಗಳ ದಿನ, ಶುಭಾಶಯಗಳು ಅರ್ನಬ್, ಅಂಜನಾ, ಸುಧೀರ್‌ ಚೌಧರಿ, ದೀಪಕ್‌ ಚುರಾಸಿಯಾ, ನಾವಿಕಾ ಕುಮಾರ್‌, ಶಿವ ಶಂಕರ್‌, ಅಮಿಶ್ ದೇವಗನ್, ರುಬಿಕಾ ಲಿಕಾಯತ್ ಮತ್ತು ಈ ಪಟ್ಟಿಗೆ ಕೊನೆಯಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಗುಡ್ ಮ್ಯಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ಎಲ್ಲವನ್ನೂ ಖರೀದಿ ಮಾಡಲಾಗಿದೆ ಮೋಟಾ ಭಾಯ್” ಎಂದು ಹೇಳಿದ್ದಾರೆ.

ಆರ್‌‌. ಥಾನ್‌ಕಪ್ಪನ್, ಬಿಜೆಪಿ ಸರ್ಕರ ಬಂಧಿಸಿದ ಎಲ್ಲಾ ಪತ್ರಕರ್ತರಿಗೆ ಅನುಕಂಪವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಶರಣು ಎನ್. ಒಳ್ಳೆಯ ಹಾಸ್ಯ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ನೀತಿ ಧಿಕ್ಕರಿಸಿ ಮೃತದೇಹದ ಚಿತ್ರ ಪ್ರಕಟಣೆ ಸಮರ್ಥಿಸಿಕೊಂಡ ’ಗುಜರಾತ್ ಸಮಾಚಾರ್‌’

ಅಮಿತ್‌ ಅಣ್ಣಾ ನಿಮಗೆ ಒಳ್ಳೆಯ ಹಾಸ್ಯ ಗುಣವಿದೆ ಎಂದು ನಂದು ಬರೆದಿದ್ದಾರೆ.

“ಗೃಹ ಸಚಿವರು ತಮ್ಮ ಸಂದೇಶದ ನಂತರ ನಗುತ್ತಿರುವ ಸ್ಟಿಕ್ಕರ್‌ ಹಾಕಲು ಮರೆತಿದ್ದಾರೆ ಎಂಬ ವ್ಯಂಗ್ಯ”

ಸುನಿಲ್ ಕುಮಾರ್‌, ವಿಶೇಷವಾಗಿ ಅರ್ನಬ್‌ಗೆ ಈ ಸಂದೇಶ ಎಂದು ವ್ಯಂಗ್ಯವಾಡಿದ್ದಾರೆ.

ಐಶಿ, “ವ್ಯಂಗ್ಯ ಸತ್ತೇ ಹೋಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...