Homeಮುಖಪುಟಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ 'ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ' ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

- Advertisement -
- Advertisement -

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆಂದು ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸ ಮಾಡುವುದಕ್ಕೆ ಈಗ ತಡೆಯೊಡ್ಡಲಾಗಿದೆ ಎಂದು ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ (ವಿಡಿಎ) ತಿಳಿಸಿದೆ.

ಕುಟುಂಬ ಸದಸ್ಯರೊಬ್ಬರು ವಾಣಿಜ್ಯ ಲಾಭಕ್ಕಾಗಿ ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ವಲಯ ಅಧಿಕಾರಿ ಮತ್ತು ಕಿರಿಯ ಎಂಜಿನಿಯರ್ ಒಳಗೊಂಡ ವಿಡಿಎ ತಂಡವು ಕಳೆದ ವಾರ ಹಡಾಹ ಸರೈ ಪ್ರದೇಶದಲ್ಲಿರುವ ಬಿಸ್ಮಿಲ್ಲಾಖಾನ್ ಅವರ ಮನೆಗೆ ಭೇಟಿ ನೀಡಿತ್ತು.

ಬಿಸ್ಮಿಲ್ಲಾಖಾನ್ ಅವರ ಮನೆಯನ್ನು ‘ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆ’ ಎಂದು ಸಂರಕ್ಷಿಸಬೇಕೆಂಬ ಕೂಗು ಕೇಳಿಬರುತ್ತಿದ್ದಂತೆ, ಮನೆ ಉರುಳಿಸುವಿಕೆಯ ಚಟುವಟಿಕೆಯನ್ನು ನಿಲ್ಲಿಸಲಾಗಿದೆ. ವಿಡಿಎ ತಪಾಸಣೆ ವರದಿಯ ಪ್ರಕಾರ, ಎರಡನೇ ಮಹಡಿಯಲ್ಲಿರುವ ಕೊಠಡಿಯನ್ನು ಬಿಸ್ಮಿಲ್ಲಾಖಾನ್ ಅವರ ಮೊಮ್ಮಗ ಮತ್ತು ದಿವಂಗತ ಮೆಹ್ತಾಬ್ ಹುಸೇನ್ ಅವರ ಪುತ್ರ ಮೊಹಮ್ಮದ್ ಶಿಫ್ಟೈನ್ ನೆಲಸಮ ಮಾಡಿದ್ದಾರೆ. ಶಿಫ್ಟೈನ್ ಆ ಮನೆಯಲ್ಲಿ ವಾಸಿಸುತ್ತಿದ್ದರು.

ಬಿಸ್ಮಿಲ್ಲಾ ಖಾನ್ ಅವರಿಗೆ ಐದು ಗಂಡು ಮಕ್ಕಳಿದ್ದರು. ಕುಟುಂಬ ಸದಸ್ಯರಲ್ಲಿ ಆಸ್ತಿ ವಿಚಾರವಾಗಿ ವಿವಾದವಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

“ಇದು ಖಾಸಗಿ ಆಸ್ತಿಯ ಪ್ರಕರಣವಾದ್ದರಿಂದ, ವಿಡಿಎ ತಂಡವು ಮಾತುಕತೆಗಳ ಮೂಲಕ ಮತ್ತು ನೋಟಿಸ್ ಮೂಲಕ, ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದರೆ ಅದನ್ನು ನೆಲಸಮಗೊಳಿಸುವುದಕ್ಕೆ ನಗರಸಭೆಯಿಂದ ಅನುಮತಿ ಪಡೆಯಲು ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿತು. ಯಾವುದೇ ಹೊಸ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ನಕ್ಷೆಯನ್ನು ವಿಡಿಎಯಿಂದ ಅನುಮೋದಿಸಲು ನಿರ್ದೇಶಿಸಲಾಗಿದೆ “ಎಂದು ವಿಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಿಸ್ಮಿಲ್ಲಾಖಾನ್ ವಾಸಿಸುತ್ತಿದ್ದ ಮನೆಯ ಮೇಲಿನ ಮಹಡಿಯನ್ನು ಅವರ ಕೆಲ ಸಂಬಂಧಿಕರು ನೆಲಸಮಗೊಳಿಸಿ ಮನೆಯನ್ನು ವಾಣಿಜ್ಯ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಕುಟುಂಬದ ಇತರ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ ‘ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ’ ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

ಈ ಕುರಿತ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ದಿಲೀಪ್ ಕುಮಾರ್, ಎಐಡಿಒಒನ ಮಕಾರ್ಥ್ವಾಜ್ ಮತ್ತು ಎಐಎಂಎಸ್ಎಸ್ ನ ವಂದನಾ ಸಿಂಗ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನೆಯನ್ನು ರಕ್ಷಿಸಬೇಕೆಂದು ಒತ್ತಾಯಿಸಿದ್ದರು.

“ಇದನ್ನು ಶಹನಾಯ್ ತರಬೇತಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಕುಟುಂಬ ಸದಸ್ಯರನ್ನು ಬೇರೆಡೆ ಪುನರ್ವಸತಿಗೊಳಿಸಿ ಆರ್ಥಿಕ ನೆರವು ನೀಡಬೇಕು” ಎಂದು ಅವರು ಆಗ್ರಹಿಸಿದ್ದರು.

ಬಿಸ್ಮಿಲ್ಲಾ ಖಾನ್ ಅವರ ಸಾಕು ಮಗಳು ಮತ್ತು ಗಾಯಕಿ ಸೋಮ ಘೋಷ್ ಮತ್ತು ಕಾಂಗ್ರೆಸ್ ಮುಖಂಡ ಅಜಯ್ ರೈ ಕೂಡ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು. ಅವರ ಮನೆಯನ್ನು ವಸ್ತುಸಂಗ್ರಹಾಲಯವಾಗಿ ಸಂರಕ್ಷಿಸಲು ಸರ್ಕಾರ ಮುಂದೆ ಬರಬೇಕು ಎಂದು ಹೇಳಿದ್ದರು.


ಇದನ್ನೂ ಓದಿ: ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಶಹನಾಯಿಯ ಗಾರುಡಿಗ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮತ್ತು ಭಾರತೀಯ ಸಂಗೀತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...