Homeಮುಖಪುಟಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ 'ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ' ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

- Advertisement -
- Advertisement -

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆಂದು ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸ ಮಾಡುವುದಕ್ಕೆ ಈಗ ತಡೆಯೊಡ್ಡಲಾಗಿದೆ ಎಂದು ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ (ವಿಡಿಎ) ತಿಳಿಸಿದೆ.

ಕುಟುಂಬ ಸದಸ್ಯರೊಬ್ಬರು ವಾಣಿಜ್ಯ ಲಾಭಕ್ಕಾಗಿ ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ವಲಯ ಅಧಿಕಾರಿ ಮತ್ತು ಕಿರಿಯ ಎಂಜಿನಿಯರ್ ಒಳಗೊಂಡ ವಿಡಿಎ ತಂಡವು ಕಳೆದ ವಾರ ಹಡಾಹ ಸರೈ ಪ್ರದೇಶದಲ್ಲಿರುವ ಬಿಸ್ಮಿಲ್ಲಾಖಾನ್ ಅವರ ಮನೆಗೆ ಭೇಟಿ ನೀಡಿತ್ತು.

ಬಿಸ್ಮಿಲ್ಲಾಖಾನ್ ಅವರ ಮನೆಯನ್ನು ‘ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆ’ ಎಂದು ಸಂರಕ್ಷಿಸಬೇಕೆಂಬ ಕೂಗು ಕೇಳಿಬರುತ್ತಿದ್ದಂತೆ, ಮನೆ ಉರುಳಿಸುವಿಕೆಯ ಚಟುವಟಿಕೆಯನ್ನು ನಿಲ್ಲಿಸಲಾಗಿದೆ. ವಿಡಿಎ ತಪಾಸಣೆ ವರದಿಯ ಪ್ರಕಾರ, ಎರಡನೇ ಮಹಡಿಯಲ್ಲಿರುವ ಕೊಠಡಿಯನ್ನು ಬಿಸ್ಮಿಲ್ಲಾಖಾನ್ ಅವರ ಮೊಮ್ಮಗ ಮತ್ತು ದಿವಂಗತ ಮೆಹ್ತಾಬ್ ಹುಸೇನ್ ಅವರ ಪುತ್ರ ಮೊಹಮ್ಮದ್ ಶಿಫ್ಟೈನ್ ನೆಲಸಮ ಮಾಡಿದ್ದಾರೆ. ಶಿಫ್ಟೈನ್ ಆ ಮನೆಯಲ್ಲಿ ವಾಸಿಸುತ್ತಿದ್ದರು.

ಬಿಸ್ಮಿಲ್ಲಾ ಖಾನ್ ಅವರಿಗೆ ಐದು ಗಂಡು ಮಕ್ಕಳಿದ್ದರು. ಕುಟುಂಬ ಸದಸ್ಯರಲ್ಲಿ ಆಸ್ತಿ ವಿಚಾರವಾಗಿ ವಿವಾದವಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

“ಇದು ಖಾಸಗಿ ಆಸ್ತಿಯ ಪ್ರಕರಣವಾದ್ದರಿಂದ, ವಿಡಿಎ ತಂಡವು ಮಾತುಕತೆಗಳ ಮೂಲಕ ಮತ್ತು ನೋಟಿಸ್ ಮೂಲಕ, ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದರೆ ಅದನ್ನು ನೆಲಸಮಗೊಳಿಸುವುದಕ್ಕೆ ನಗರಸಭೆಯಿಂದ ಅನುಮತಿ ಪಡೆಯಲು ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿತು. ಯಾವುದೇ ಹೊಸ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ನಕ್ಷೆಯನ್ನು ವಿಡಿಎಯಿಂದ ಅನುಮೋದಿಸಲು ನಿರ್ದೇಶಿಸಲಾಗಿದೆ “ಎಂದು ವಿಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಿಸ್ಮಿಲ್ಲಾಖಾನ್ ವಾಸಿಸುತ್ತಿದ್ದ ಮನೆಯ ಮೇಲಿನ ಮಹಡಿಯನ್ನು ಅವರ ಕೆಲ ಸಂಬಂಧಿಕರು ನೆಲಸಮಗೊಳಿಸಿ ಮನೆಯನ್ನು ವಾಣಿಜ್ಯ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಕುಟುಂಬದ ಇತರ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ ‘ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ’ ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

ಈ ಕುರಿತ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ದಿಲೀಪ್ ಕುಮಾರ್, ಎಐಡಿಒಒನ ಮಕಾರ್ಥ್ವಾಜ್ ಮತ್ತು ಎಐಎಂಎಸ್ಎಸ್ ನ ವಂದನಾ ಸಿಂಗ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನೆಯನ್ನು ರಕ್ಷಿಸಬೇಕೆಂದು ಒತ್ತಾಯಿಸಿದ್ದರು.

“ಇದನ್ನು ಶಹನಾಯ್ ತರಬೇತಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಕುಟುಂಬ ಸದಸ್ಯರನ್ನು ಬೇರೆಡೆ ಪುನರ್ವಸತಿಗೊಳಿಸಿ ಆರ್ಥಿಕ ನೆರವು ನೀಡಬೇಕು” ಎಂದು ಅವರು ಆಗ್ರಹಿಸಿದ್ದರು.

ಬಿಸ್ಮಿಲ್ಲಾ ಖಾನ್ ಅವರ ಸಾಕು ಮಗಳು ಮತ್ತು ಗಾಯಕಿ ಸೋಮ ಘೋಷ್ ಮತ್ತು ಕಾಂಗ್ರೆಸ್ ಮುಖಂಡ ಅಜಯ್ ರೈ ಕೂಡ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು. ಅವರ ಮನೆಯನ್ನು ವಸ್ತುಸಂಗ್ರಹಾಲಯವಾಗಿ ಸಂರಕ್ಷಿಸಲು ಸರ್ಕಾರ ಮುಂದೆ ಬರಬೇಕು ಎಂದು ಹೇಳಿದ್ದರು.


ಇದನ್ನೂ ಓದಿ: ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಶಹನಾಯಿಯ ಗಾರುಡಿಗ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮತ್ತು ಭಾರತೀಯ ಸಂಗೀತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...