Homeಮುಖಪುಟಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ 'ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ' ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

- Advertisement -
- Advertisement -

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆಂದು ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸ ಮಾಡುವುದಕ್ಕೆ ಈಗ ತಡೆಯೊಡ್ಡಲಾಗಿದೆ ಎಂದು ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ (ವಿಡಿಎ) ತಿಳಿಸಿದೆ.

ಕುಟುಂಬ ಸದಸ್ಯರೊಬ್ಬರು ವಾಣಿಜ್ಯ ಲಾಭಕ್ಕಾಗಿ ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ವಲಯ ಅಧಿಕಾರಿ ಮತ್ತು ಕಿರಿಯ ಎಂಜಿನಿಯರ್ ಒಳಗೊಂಡ ವಿಡಿಎ ತಂಡವು ಕಳೆದ ವಾರ ಹಡಾಹ ಸರೈ ಪ್ರದೇಶದಲ್ಲಿರುವ ಬಿಸ್ಮಿಲ್ಲಾಖಾನ್ ಅವರ ಮನೆಗೆ ಭೇಟಿ ನೀಡಿತ್ತು.

ಬಿಸ್ಮಿಲ್ಲಾಖಾನ್ ಅವರ ಮನೆಯನ್ನು ‘ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆ’ ಎಂದು ಸಂರಕ್ಷಿಸಬೇಕೆಂಬ ಕೂಗು ಕೇಳಿಬರುತ್ತಿದ್ದಂತೆ, ಮನೆ ಉರುಳಿಸುವಿಕೆಯ ಚಟುವಟಿಕೆಯನ್ನು ನಿಲ್ಲಿಸಲಾಗಿದೆ. ವಿಡಿಎ ತಪಾಸಣೆ ವರದಿಯ ಪ್ರಕಾರ, ಎರಡನೇ ಮಹಡಿಯಲ್ಲಿರುವ ಕೊಠಡಿಯನ್ನು ಬಿಸ್ಮಿಲ್ಲಾಖಾನ್ ಅವರ ಮೊಮ್ಮಗ ಮತ್ತು ದಿವಂಗತ ಮೆಹ್ತಾಬ್ ಹುಸೇನ್ ಅವರ ಪುತ್ರ ಮೊಹಮ್ಮದ್ ಶಿಫ್ಟೈನ್ ನೆಲಸಮ ಮಾಡಿದ್ದಾರೆ. ಶಿಫ್ಟೈನ್ ಆ ಮನೆಯಲ್ಲಿ ವಾಸಿಸುತ್ತಿದ್ದರು.

ಬಿಸ್ಮಿಲ್ಲಾ ಖಾನ್ ಅವರಿಗೆ ಐದು ಗಂಡು ಮಕ್ಕಳಿದ್ದರು. ಕುಟುಂಬ ಸದಸ್ಯರಲ್ಲಿ ಆಸ್ತಿ ವಿಚಾರವಾಗಿ ವಿವಾದವಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

“ಇದು ಖಾಸಗಿ ಆಸ್ತಿಯ ಪ್ರಕರಣವಾದ್ದರಿಂದ, ವಿಡಿಎ ತಂಡವು ಮಾತುಕತೆಗಳ ಮೂಲಕ ಮತ್ತು ನೋಟಿಸ್ ಮೂಲಕ, ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದರೆ ಅದನ್ನು ನೆಲಸಮಗೊಳಿಸುವುದಕ್ಕೆ ನಗರಸಭೆಯಿಂದ ಅನುಮತಿ ಪಡೆಯಲು ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿತು. ಯಾವುದೇ ಹೊಸ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ನಕ್ಷೆಯನ್ನು ವಿಡಿಎಯಿಂದ ಅನುಮೋದಿಸಲು ನಿರ್ದೇಶಿಸಲಾಗಿದೆ “ಎಂದು ವಿಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಿಸ್ಮಿಲ್ಲಾಖಾನ್ ವಾಸಿಸುತ್ತಿದ್ದ ಮನೆಯ ಮೇಲಿನ ಮಹಡಿಯನ್ನು ಅವರ ಕೆಲ ಸಂಬಂಧಿಕರು ನೆಲಸಮಗೊಳಿಸಿ ಮನೆಯನ್ನು ವಾಣಿಜ್ಯ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಕುಟುಂಬದ ಇತರ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ ‘ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ’ ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

ಈ ಕುರಿತ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ದಿಲೀಪ್ ಕುಮಾರ್, ಎಐಡಿಒಒನ ಮಕಾರ್ಥ್ವಾಜ್ ಮತ್ತು ಎಐಎಂಎಸ್ಎಸ್ ನ ವಂದನಾ ಸಿಂಗ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನೆಯನ್ನು ರಕ್ಷಿಸಬೇಕೆಂದು ಒತ್ತಾಯಿಸಿದ್ದರು.

“ಇದನ್ನು ಶಹನಾಯ್ ತರಬೇತಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಕುಟುಂಬ ಸದಸ್ಯರನ್ನು ಬೇರೆಡೆ ಪುನರ್ವಸತಿಗೊಳಿಸಿ ಆರ್ಥಿಕ ನೆರವು ನೀಡಬೇಕು” ಎಂದು ಅವರು ಆಗ್ರಹಿಸಿದ್ದರು.

ಬಿಸ್ಮಿಲ್ಲಾ ಖಾನ್ ಅವರ ಸಾಕು ಮಗಳು ಮತ್ತು ಗಾಯಕಿ ಸೋಮ ಘೋಷ್ ಮತ್ತು ಕಾಂಗ್ರೆಸ್ ಮುಖಂಡ ಅಜಯ್ ರೈ ಕೂಡ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು. ಅವರ ಮನೆಯನ್ನು ವಸ್ತುಸಂಗ್ರಹಾಲಯವಾಗಿ ಸಂರಕ್ಷಿಸಲು ಸರ್ಕಾರ ಮುಂದೆ ಬರಬೇಕು ಎಂದು ಹೇಳಿದ್ದರು.


ಇದನ್ನೂ ಓದಿ: ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಶಹನಾಯಿಯ ಗಾರುಡಿಗ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮತ್ತು ಭಾರತೀಯ ಸಂಗೀತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...