Homeಮುಖಪುಟಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ 'ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ' ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

- Advertisement -
- Advertisement -

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆಂದು ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸ ಮಾಡುವುದಕ್ಕೆ ಈಗ ತಡೆಯೊಡ್ಡಲಾಗಿದೆ ಎಂದು ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ (ವಿಡಿಎ) ತಿಳಿಸಿದೆ.

ಕುಟುಂಬ ಸದಸ್ಯರೊಬ್ಬರು ವಾಣಿಜ್ಯ ಲಾಭಕ್ಕಾಗಿ ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ವಲಯ ಅಧಿಕಾರಿ ಮತ್ತು ಕಿರಿಯ ಎಂಜಿನಿಯರ್ ಒಳಗೊಂಡ ವಿಡಿಎ ತಂಡವು ಕಳೆದ ವಾರ ಹಡಾಹ ಸರೈ ಪ್ರದೇಶದಲ್ಲಿರುವ ಬಿಸ್ಮಿಲ್ಲಾಖಾನ್ ಅವರ ಮನೆಗೆ ಭೇಟಿ ನೀಡಿತ್ತು.

ಬಿಸ್ಮಿಲ್ಲಾಖಾನ್ ಅವರ ಮನೆಯನ್ನು ‘ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆ’ ಎಂದು ಸಂರಕ್ಷಿಸಬೇಕೆಂಬ ಕೂಗು ಕೇಳಿಬರುತ್ತಿದ್ದಂತೆ, ಮನೆ ಉರುಳಿಸುವಿಕೆಯ ಚಟುವಟಿಕೆಯನ್ನು ನಿಲ್ಲಿಸಲಾಗಿದೆ. ವಿಡಿಎ ತಪಾಸಣೆ ವರದಿಯ ಪ್ರಕಾರ, ಎರಡನೇ ಮಹಡಿಯಲ್ಲಿರುವ ಕೊಠಡಿಯನ್ನು ಬಿಸ್ಮಿಲ್ಲಾಖಾನ್ ಅವರ ಮೊಮ್ಮಗ ಮತ್ತು ದಿವಂಗತ ಮೆಹ್ತಾಬ್ ಹುಸೇನ್ ಅವರ ಪುತ್ರ ಮೊಹಮ್ಮದ್ ಶಿಫ್ಟೈನ್ ನೆಲಸಮ ಮಾಡಿದ್ದಾರೆ. ಶಿಫ್ಟೈನ್ ಆ ಮನೆಯಲ್ಲಿ ವಾಸಿಸುತ್ತಿದ್ದರು.

ಬಿಸ್ಮಿಲ್ಲಾ ಖಾನ್ ಅವರಿಗೆ ಐದು ಗಂಡು ಮಕ್ಕಳಿದ್ದರು. ಕುಟುಂಬ ಸದಸ್ಯರಲ್ಲಿ ಆಸ್ತಿ ವಿಚಾರವಾಗಿ ವಿವಾದವಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

“ಇದು ಖಾಸಗಿ ಆಸ್ತಿಯ ಪ್ರಕರಣವಾದ್ದರಿಂದ, ವಿಡಿಎ ತಂಡವು ಮಾತುಕತೆಗಳ ಮೂಲಕ ಮತ್ತು ನೋಟಿಸ್ ಮೂಲಕ, ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದರೆ ಅದನ್ನು ನೆಲಸಮಗೊಳಿಸುವುದಕ್ಕೆ ನಗರಸಭೆಯಿಂದ ಅನುಮತಿ ಪಡೆಯಲು ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿತು. ಯಾವುದೇ ಹೊಸ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ನಕ್ಷೆಯನ್ನು ವಿಡಿಎಯಿಂದ ಅನುಮೋದಿಸಲು ನಿರ್ದೇಶಿಸಲಾಗಿದೆ “ಎಂದು ವಿಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಿಸ್ಮಿಲ್ಲಾಖಾನ್ ವಾಸಿಸುತ್ತಿದ್ದ ಮನೆಯ ಮೇಲಿನ ಮಹಡಿಯನ್ನು ಅವರ ಕೆಲ ಸಂಬಂಧಿಕರು ನೆಲಸಮಗೊಳಿಸಿ ಮನೆಯನ್ನು ವಾಣಿಜ್ಯ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಕುಟುಂಬದ ಇತರ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ ‘ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ’ ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

ಈ ಕುರಿತ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ದಿಲೀಪ್ ಕುಮಾರ್, ಎಐಡಿಒಒನ ಮಕಾರ್ಥ್ವಾಜ್ ಮತ್ತು ಎಐಎಂಎಸ್ಎಸ್ ನ ವಂದನಾ ಸಿಂಗ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನೆಯನ್ನು ರಕ್ಷಿಸಬೇಕೆಂದು ಒತ್ತಾಯಿಸಿದ್ದರು.

“ಇದನ್ನು ಶಹನಾಯ್ ತರಬೇತಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಕುಟುಂಬ ಸದಸ್ಯರನ್ನು ಬೇರೆಡೆ ಪುನರ್ವಸತಿಗೊಳಿಸಿ ಆರ್ಥಿಕ ನೆರವು ನೀಡಬೇಕು” ಎಂದು ಅವರು ಆಗ್ರಹಿಸಿದ್ದರು.

ಬಿಸ್ಮಿಲ್ಲಾ ಖಾನ್ ಅವರ ಸಾಕು ಮಗಳು ಮತ್ತು ಗಾಯಕಿ ಸೋಮ ಘೋಷ್ ಮತ್ತು ಕಾಂಗ್ರೆಸ್ ಮುಖಂಡ ಅಜಯ್ ರೈ ಕೂಡ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು. ಅವರ ಮನೆಯನ್ನು ವಸ್ತುಸಂಗ್ರಹಾಲಯವಾಗಿ ಸಂರಕ್ಷಿಸಲು ಸರ್ಕಾರ ಮುಂದೆ ಬರಬೇಕು ಎಂದು ಹೇಳಿದ್ದರು.


ಇದನ್ನೂ ಓದಿ: ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಶಹನಾಯಿಯ ಗಾರುಡಿಗ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮತ್ತು ಭಾರತೀಯ ಸಂಗೀತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...