Homeಮುಖಪುಟಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ 'ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ' ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

- Advertisement -
- Advertisement -

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆಂದು ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸ ಮಾಡುವುದಕ್ಕೆ ಈಗ ತಡೆಯೊಡ್ಡಲಾಗಿದೆ ಎಂದು ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ (ವಿಡಿಎ) ತಿಳಿಸಿದೆ.

ಕುಟುಂಬ ಸದಸ್ಯರೊಬ್ಬರು ವಾಣಿಜ್ಯ ಲಾಭಕ್ಕಾಗಿ ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ವಲಯ ಅಧಿಕಾರಿ ಮತ್ತು ಕಿರಿಯ ಎಂಜಿನಿಯರ್ ಒಳಗೊಂಡ ವಿಡಿಎ ತಂಡವು ಕಳೆದ ವಾರ ಹಡಾಹ ಸರೈ ಪ್ರದೇಶದಲ್ಲಿರುವ ಬಿಸ್ಮಿಲ್ಲಾಖಾನ್ ಅವರ ಮನೆಗೆ ಭೇಟಿ ನೀಡಿತ್ತು.

ಬಿಸ್ಮಿಲ್ಲಾಖಾನ್ ಅವರ ಮನೆಯನ್ನು ‘ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆ’ ಎಂದು ಸಂರಕ್ಷಿಸಬೇಕೆಂಬ ಕೂಗು ಕೇಳಿಬರುತ್ತಿದ್ದಂತೆ, ಮನೆ ಉರುಳಿಸುವಿಕೆಯ ಚಟುವಟಿಕೆಯನ್ನು ನಿಲ್ಲಿಸಲಾಗಿದೆ. ವಿಡಿಎ ತಪಾಸಣೆ ವರದಿಯ ಪ್ರಕಾರ, ಎರಡನೇ ಮಹಡಿಯಲ್ಲಿರುವ ಕೊಠಡಿಯನ್ನು ಬಿಸ್ಮಿಲ್ಲಾಖಾನ್ ಅವರ ಮೊಮ್ಮಗ ಮತ್ತು ದಿವಂಗತ ಮೆಹ್ತಾಬ್ ಹುಸೇನ್ ಅವರ ಪುತ್ರ ಮೊಹಮ್ಮದ್ ಶಿಫ್ಟೈನ್ ನೆಲಸಮ ಮಾಡಿದ್ದಾರೆ. ಶಿಫ್ಟೈನ್ ಆ ಮನೆಯಲ್ಲಿ ವಾಸಿಸುತ್ತಿದ್ದರು.

ಬಿಸ್ಮಿಲ್ಲಾ ಖಾನ್ ಅವರಿಗೆ ಐದು ಗಂಡು ಮಕ್ಕಳಿದ್ದರು. ಕುಟುಂಬ ಸದಸ್ಯರಲ್ಲಿ ಆಸ್ತಿ ವಿಚಾರವಾಗಿ ವಿವಾದವಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

“ಇದು ಖಾಸಗಿ ಆಸ್ತಿಯ ಪ್ರಕರಣವಾದ್ದರಿಂದ, ವಿಡಿಎ ತಂಡವು ಮಾತುಕತೆಗಳ ಮೂಲಕ ಮತ್ತು ನೋಟಿಸ್ ಮೂಲಕ, ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದರೆ ಅದನ್ನು ನೆಲಸಮಗೊಳಿಸುವುದಕ್ಕೆ ನಗರಸಭೆಯಿಂದ ಅನುಮತಿ ಪಡೆಯಲು ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿತು. ಯಾವುದೇ ಹೊಸ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ನಕ್ಷೆಯನ್ನು ವಿಡಿಎಯಿಂದ ಅನುಮೋದಿಸಲು ನಿರ್ದೇಶಿಸಲಾಗಿದೆ “ಎಂದು ವಿಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಿಸ್ಮಿಲ್ಲಾಖಾನ್ ವಾಸಿಸುತ್ತಿದ್ದ ಮನೆಯ ಮೇಲಿನ ಮಹಡಿಯನ್ನು ಅವರ ಕೆಲ ಸಂಬಂಧಿಕರು ನೆಲಸಮಗೊಳಿಸಿ ಮನೆಯನ್ನು ವಾಣಿಜ್ಯ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಕುಟುಂಬದ ಇತರ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ ‘ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ’ ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

ಈ ಕುರಿತ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ದಿಲೀಪ್ ಕುಮಾರ್, ಎಐಡಿಒಒನ ಮಕಾರ್ಥ್ವಾಜ್ ಮತ್ತು ಎಐಎಂಎಸ್ಎಸ್ ನ ವಂದನಾ ಸಿಂಗ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನೆಯನ್ನು ರಕ್ಷಿಸಬೇಕೆಂದು ಒತ್ತಾಯಿಸಿದ್ದರು.

“ಇದನ್ನು ಶಹನಾಯ್ ತರಬೇತಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಕುಟುಂಬ ಸದಸ್ಯರನ್ನು ಬೇರೆಡೆ ಪುನರ್ವಸತಿಗೊಳಿಸಿ ಆರ್ಥಿಕ ನೆರವು ನೀಡಬೇಕು” ಎಂದು ಅವರು ಆಗ್ರಹಿಸಿದ್ದರು.

ಬಿಸ್ಮಿಲ್ಲಾ ಖಾನ್ ಅವರ ಸಾಕು ಮಗಳು ಮತ್ತು ಗಾಯಕಿ ಸೋಮ ಘೋಷ್ ಮತ್ತು ಕಾಂಗ್ರೆಸ್ ಮುಖಂಡ ಅಜಯ್ ರೈ ಕೂಡ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು. ಅವರ ಮನೆಯನ್ನು ವಸ್ತುಸಂಗ್ರಹಾಲಯವಾಗಿ ಸಂರಕ್ಷಿಸಲು ಸರ್ಕಾರ ಮುಂದೆ ಬರಬೇಕು ಎಂದು ಹೇಳಿದ್ದರು.


ಇದನ್ನೂ ಓದಿ: ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಶಹನಾಯಿಯ ಗಾರುಡಿಗ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮತ್ತು ಭಾರತೀಯ ಸಂಗೀತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...