Homeಮುಖಪುಟಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಈ ಮನೆಯನ್ನು 1936 ರಲ್ಲಿ ಖರೀದಿಸಿ, ಬಿಸ್ಮಿಲ್ಲಾ ಖಾನ್ ತಮ್ಮ ಜೀವನದುದ್ದಕ್ಕೂ ಇಲ್ಲಿಯೇ ವಾಸಿಸುತ್ತಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

- Advertisement -
- Advertisement -

ಮೂರು ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟುವ ಸಲುವಾಗಿ ವಾರಣಾಸಿಯ ಬೆನಿಯಾ ಬಾಗ್‌ನಲ್ಲಿರುವ ಶಹನಾಯ್ ವಿದ್ವಾನ್ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯನ್ನು ಕೆಡವಲಾಗುತ್ತಿದೆ.

ಈ ಮನೆಯನ್ನು 1936 ರಲ್ಲಿ ಖರೀದಿಸಿದ್ದ ಬಿಸ್ಮಿಲ್ಲಾ ಖಾನ್, ತಮ್ಮ ಜೀವನದುದ್ದಕ್ಕೂ ಅಲ್ಲಿಯೇ ವಾಸಿಸಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

ಈ ಮನೆ ಈಗ ಬಿಸ್ಮಿಲ್ಲಾಖಾನ್ ಮೊಮ್ಮಕ್ಕಳ ಒಡೆತನದಲ್ಲಿದೆ. ಬಿಸ್ಮಿಲ್ಲಾಖಾನ್ ಅವರ ಐದು ಗಂಡು ಮಕ್ಕಳಲ್ಲಿ ದಿವಂಗತ ಮೆಹ್ತಾಬ್ ಹುಸೇನ್ ಒಬ್ಬರು. ಅವರ ಮಗನಾದ ಮತ್ತು ಖಾನ್‌ ಮೊಮ್ಮಗನಾದ ಸೂಫಿ, ಆರ್ಥಿಕ ವಿಷಯಕ್ಕಾಗಿ ಮನೆಯನ್ನು ನೆಲಸಮ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಮೂರು ಅಂತಸ್ತಿನ ಕಮರ್ಷಿಯಲ್ ಅಪಾರ್ಟ್ಮೆಂಟ್ ನಿರ್ಮಿಸಲಾಗುವುದು. ಕಟ್ಟಡದ ಒಂದು ಭಾಗದಲ್ಲಿ ನಾವು ಬಿಸ್ಮಿಲ್ಲಾ ಖಾನ್ ಅವರ ವಸ್ತುಸಂಗ್ರಹಾಲಯವನ್ನು ನಿರ್ಮಿಸುತ್ತೇವೆ. ಅವರ ಎಲ್ಲಾ ವೈಯಕ್ತಿಕ ವಸ್ತುಗಳು, ಪ್ರಶಸ್ತಿಗಳು, ಪ್ರಶಂಸೆಗಳು ಇತ್ಯಾದಿಗಳನ್ನು ನಾವು ಈ ವಸ್ತು ಸಂಗ್ರಹಾಲಯದಲ್ಲಿ ಇಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಶಿಷ್ಯೆ ಮತ್ತು ಸಾಕು ಮಗಳು, ಗಾಯಕಿ ಸೋಮಾ ಘೋಷ್, ಮನೆಯನ್ನು ಕೆಡವುತ್ತಿರುವ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

‘ಬಾಬಾ’ (ಬಿಸ್ಮಿಲ್ಲಾಖಾನ್) ಅವರ ಕೊಠಡಿಯನ್ನು ಕೆಡವಿ, ಅವರ ವಸ್ತುಗಳನ್ನು ಎಸೆಯಲಾಗಿದೆ ಎಂದು ತಿಳಿದಾಗ ನನಗೆ ಆಘಾತವಾಯಿತು. ಅದು ಕೇವಲ ಒಂದು ಕೋಣೆಯಾಗಿರಲಿಲ್ಲ. ಅದು ಸಂಗೀತ ಪ್ರಿಯರಿಗೆ ಪೂಜಾ ಸ್ಥಳವಾಗಿದೆ. ಇದು ಒಂದು ಪರಂಪರೆ. ಅದನ್ನು ಸಂರಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಅವರು ಹೇಳಿದ್ದಾರೆ.

ಆಗಸ್ಟ್ 21 ರಂದು ಬಿಸ್ಮಿಲ್ಲಾ ಖಾನ್ ಅವರ 14ನೇ ನೆನಪಿನ ವಾರ್ಷಿಕೋತ್ಸವದ ಕೆಲವೇ ದಿನಗಳ ಮೊದಲು ಕೆಡವುವಿಕೆಯ ಪ್ರಕ್ರಿಯೆ ಪ್ರಾರಂಭವಾಗಿದೆ. 2006 ರಲ್ಲಿ ನಿಧನರಾದ ಬಿಸ್ಮಿಲ್ಲಾಖಾನ್ ಗೆ 2001 ರಲ್ಲಿ ಭಾರತ್ ರತ್ನ ಪ್ರಶಸ್ತಿ ನೀಡಲಾಗಿತ್ತು.

ಬಿಸ್ಮಿಲ್ಲಾ ಖಾನ್ ಆಗಸ್ಟ್ 15, 1947 ರಂದು ಕೆಂಪು ಕೋಟೆಯಲ್ಲಿ ಶಹನಾಯ್ ಕಾರ್ಯಕ್ರಮ ನೀಡಿ ಗಮನ ಸೆಳೆದಿದ್ದರು. ಇದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ರಾಜ್ ಕುಮಾರ್ ಅಭಿನಯದ ‘ಸನಾದಿ ಅಪ್ಪಣ್ಣ’ ಎನ್ನುವ ಕನ್ನಡ ಚಿತ್ರಕ್ಕೆ ಶಹನಾಯ್ ನುಡಿಸಿ ಸಾಕಷ್ಟು ಜನಪ್ರಿಯರಾಗಿದ್ದರು.

2017 ರ ಜನವರಿಯಲ್ಲಿ, ಅವರ ಮೊಮ್ಮಗ ಬಿಸ್ಮಿಲ್ಲಾಖಾನರ ನಾಲ್ಕು ಶಹನಾಯ್ ಗಳನ್ನು ಕದ್ದಿದ್ದು, ಅದರಲ್ಲಿ ಮೂರು ಬೆಳ್ಳಿಯಿಂದ ಮಾಡಲ್ಪಟ್ಟಿತ್ತು. ಅವುಗಳನ್ನು ಸ್ಥಳೀಯ ಆಭರಣ ವ್ಯಾಪಾರಿಗಳಿಗೆ 17,000 ರೂ.ಗೆ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಉತ್ತರ ಪ್ರದೇಶದ ಎಸ್‌ಟಿಎಫ್, ಅವರ ಮೊಮ್ಮಗ ಮತ್ತು ಇಬ್ಬರು ಆಭರಣ ವ್ಯಾಪಾರಿಗಳನ್ನು ಬಂಧಿಸಿ ಕರಗಿದ ಬೆಳ್ಳಿಯನ್ನು ವಶಪಡಿಸಿಕೊಂಡಿತ್ತು. ಮೂರು ಬೆಳ್ಳಿ ಶಹನಾಯ್ ಗಳನ್ನು ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್, ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಬಳುವಳಿಯಾಗಿ ನೀಡಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...