Homeಮುಖಪುಟಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಈ ಮನೆಯನ್ನು 1936 ರಲ್ಲಿ ಖರೀದಿಸಿ, ಬಿಸ್ಮಿಲ್ಲಾ ಖಾನ್ ತಮ್ಮ ಜೀವನದುದ್ದಕ್ಕೂ ಇಲ್ಲಿಯೇ ವಾಸಿಸುತ್ತಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

- Advertisement -
- Advertisement -

ಮೂರು ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟುವ ಸಲುವಾಗಿ ವಾರಣಾಸಿಯ ಬೆನಿಯಾ ಬಾಗ್‌ನಲ್ಲಿರುವ ಶಹನಾಯ್ ವಿದ್ವಾನ್ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯನ್ನು ಕೆಡವಲಾಗುತ್ತಿದೆ.

ಈ ಮನೆಯನ್ನು 1936 ರಲ್ಲಿ ಖರೀದಿಸಿದ್ದ ಬಿಸ್ಮಿಲ್ಲಾ ಖಾನ್, ತಮ್ಮ ಜೀವನದುದ್ದಕ್ಕೂ ಅಲ್ಲಿಯೇ ವಾಸಿಸಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

ಈ ಮನೆ ಈಗ ಬಿಸ್ಮಿಲ್ಲಾಖಾನ್ ಮೊಮ್ಮಕ್ಕಳ ಒಡೆತನದಲ್ಲಿದೆ. ಬಿಸ್ಮಿಲ್ಲಾಖಾನ್ ಅವರ ಐದು ಗಂಡು ಮಕ್ಕಳಲ್ಲಿ ದಿವಂಗತ ಮೆಹ್ತಾಬ್ ಹುಸೇನ್ ಒಬ್ಬರು. ಅವರ ಮಗನಾದ ಮತ್ತು ಖಾನ್‌ ಮೊಮ್ಮಗನಾದ ಸೂಫಿ, ಆರ್ಥಿಕ ವಿಷಯಕ್ಕಾಗಿ ಮನೆಯನ್ನು ನೆಲಸಮ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಮೂರು ಅಂತಸ್ತಿನ ಕಮರ್ಷಿಯಲ್ ಅಪಾರ್ಟ್ಮೆಂಟ್ ನಿರ್ಮಿಸಲಾಗುವುದು. ಕಟ್ಟಡದ ಒಂದು ಭಾಗದಲ್ಲಿ ನಾವು ಬಿಸ್ಮಿಲ್ಲಾ ಖಾನ್ ಅವರ ವಸ್ತುಸಂಗ್ರಹಾಲಯವನ್ನು ನಿರ್ಮಿಸುತ್ತೇವೆ. ಅವರ ಎಲ್ಲಾ ವೈಯಕ್ತಿಕ ವಸ್ತುಗಳು, ಪ್ರಶಸ್ತಿಗಳು, ಪ್ರಶಂಸೆಗಳು ಇತ್ಯಾದಿಗಳನ್ನು ನಾವು ಈ ವಸ್ತು ಸಂಗ್ರಹಾಲಯದಲ್ಲಿ ಇಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಶಿಷ್ಯೆ ಮತ್ತು ಸಾಕು ಮಗಳು, ಗಾಯಕಿ ಸೋಮಾ ಘೋಷ್, ಮನೆಯನ್ನು ಕೆಡವುತ್ತಿರುವ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

‘ಬಾಬಾ’ (ಬಿಸ್ಮಿಲ್ಲಾಖಾನ್) ಅವರ ಕೊಠಡಿಯನ್ನು ಕೆಡವಿ, ಅವರ ವಸ್ತುಗಳನ್ನು ಎಸೆಯಲಾಗಿದೆ ಎಂದು ತಿಳಿದಾಗ ನನಗೆ ಆಘಾತವಾಯಿತು. ಅದು ಕೇವಲ ಒಂದು ಕೋಣೆಯಾಗಿರಲಿಲ್ಲ. ಅದು ಸಂಗೀತ ಪ್ರಿಯರಿಗೆ ಪೂಜಾ ಸ್ಥಳವಾಗಿದೆ. ಇದು ಒಂದು ಪರಂಪರೆ. ಅದನ್ನು ಸಂರಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಅವರು ಹೇಳಿದ್ದಾರೆ.

ಆಗಸ್ಟ್ 21 ರಂದು ಬಿಸ್ಮಿಲ್ಲಾ ಖಾನ್ ಅವರ 14ನೇ ನೆನಪಿನ ವಾರ್ಷಿಕೋತ್ಸವದ ಕೆಲವೇ ದಿನಗಳ ಮೊದಲು ಕೆಡವುವಿಕೆಯ ಪ್ರಕ್ರಿಯೆ ಪ್ರಾರಂಭವಾಗಿದೆ. 2006 ರಲ್ಲಿ ನಿಧನರಾದ ಬಿಸ್ಮಿಲ್ಲಾಖಾನ್ ಗೆ 2001 ರಲ್ಲಿ ಭಾರತ್ ರತ್ನ ಪ್ರಶಸ್ತಿ ನೀಡಲಾಗಿತ್ತು.

ಬಿಸ್ಮಿಲ್ಲಾ ಖಾನ್ ಆಗಸ್ಟ್ 15, 1947 ರಂದು ಕೆಂಪು ಕೋಟೆಯಲ್ಲಿ ಶಹನಾಯ್ ಕಾರ್ಯಕ್ರಮ ನೀಡಿ ಗಮನ ಸೆಳೆದಿದ್ದರು. ಇದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ರಾಜ್ ಕುಮಾರ್ ಅಭಿನಯದ ‘ಸನಾದಿ ಅಪ್ಪಣ್ಣ’ ಎನ್ನುವ ಕನ್ನಡ ಚಿತ್ರಕ್ಕೆ ಶಹನಾಯ್ ನುಡಿಸಿ ಸಾಕಷ್ಟು ಜನಪ್ರಿಯರಾಗಿದ್ದರು.

2017 ರ ಜನವರಿಯಲ್ಲಿ, ಅವರ ಮೊಮ್ಮಗ ಬಿಸ್ಮಿಲ್ಲಾಖಾನರ ನಾಲ್ಕು ಶಹನಾಯ್ ಗಳನ್ನು ಕದ್ದಿದ್ದು, ಅದರಲ್ಲಿ ಮೂರು ಬೆಳ್ಳಿಯಿಂದ ಮಾಡಲ್ಪಟ್ಟಿತ್ತು. ಅವುಗಳನ್ನು ಸ್ಥಳೀಯ ಆಭರಣ ವ್ಯಾಪಾರಿಗಳಿಗೆ 17,000 ರೂ.ಗೆ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಉತ್ತರ ಪ್ರದೇಶದ ಎಸ್‌ಟಿಎಫ್, ಅವರ ಮೊಮ್ಮಗ ಮತ್ತು ಇಬ್ಬರು ಆಭರಣ ವ್ಯಾಪಾರಿಗಳನ್ನು ಬಂಧಿಸಿ ಕರಗಿದ ಬೆಳ್ಳಿಯನ್ನು ವಶಪಡಿಸಿಕೊಂಡಿತ್ತು. ಮೂರು ಬೆಳ್ಳಿ ಶಹನಾಯ್ ಗಳನ್ನು ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್, ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಬಳುವಳಿಯಾಗಿ ನೀಡಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...