Homeಮುಖಪುಟಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಈ ಮನೆಯನ್ನು 1936 ರಲ್ಲಿ ಖರೀದಿಸಿ, ಬಿಸ್ಮಿಲ್ಲಾ ಖಾನ್ ತಮ್ಮ ಜೀವನದುದ್ದಕ್ಕೂ ಇಲ್ಲಿಯೇ ವಾಸಿಸುತ್ತಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

- Advertisement -
- Advertisement -

ಮೂರು ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟುವ ಸಲುವಾಗಿ ವಾರಣಾಸಿಯ ಬೆನಿಯಾ ಬಾಗ್‌ನಲ್ಲಿರುವ ಶಹನಾಯ್ ವಿದ್ವಾನ್ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯನ್ನು ಕೆಡವಲಾಗುತ್ತಿದೆ.

ಈ ಮನೆಯನ್ನು 1936 ರಲ್ಲಿ ಖರೀದಿಸಿದ್ದ ಬಿಸ್ಮಿಲ್ಲಾ ಖಾನ್, ತಮ್ಮ ಜೀವನದುದ್ದಕ್ಕೂ ಅಲ್ಲಿಯೇ ವಾಸಿಸಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

ಈ ಮನೆ ಈಗ ಬಿಸ್ಮಿಲ್ಲಾಖಾನ್ ಮೊಮ್ಮಕ್ಕಳ ಒಡೆತನದಲ್ಲಿದೆ. ಬಿಸ್ಮಿಲ್ಲಾಖಾನ್ ಅವರ ಐದು ಗಂಡು ಮಕ್ಕಳಲ್ಲಿ ದಿವಂಗತ ಮೆಹ್ತಾಬ್ ಹುಸೇನ್ ಒಬ್ಬರು. ಅವರ ಮಗನಾದ ಮತ್ತು ಖಾನ್‌ ಮೊಮ್ಮಗನಾದ ಸೂಫಿ, ಆರ್ಥಿಕ ವಿಷಯಕ್ಕಾಗಿ ಮನೆಯನ್ನು ನೆಲಸಮ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಮೂರು ಅಂತಸ್ತಿನ ಕಮರ್ಷಿಯಲ್ ಅಪಾರ್ಟ್ಮೆಂಟ್ ನಿರ್ಮಿಸಲಾಗುವುದು. ಕಟ್ಟಡದ ಒಂದು ಭಾಗದಲ್ಲಿ ನಾವು ಬಿಸ್ಮಿಲ್ಲಾ ಖಾನ್ ಅವರ ವಸ್ತುಸಂಗ್ರಹಾಲಯವನ್ನು ನಿರ್ಮಿಸುತ್ತೇವೆ. ಅವರ ಎಲ್ಲಾ ವೈಯಕ್ತಿಕ ವಸ್ತುಗಳು, ಪ್ರಶಸ್ತಿಗಳು, ಪ್ರಶಂಸೆಗಳು ಇತ್ಯಾದಿಗಳನ್ನು ನಾವು ಈ ವಸ್ತು ಸಂಗ್ರಹಾಲಯದಲ್ಲಿ ಇಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಶಿಷ್ಯೆ ಮತ್ತು ಸಾಕು ಮಗಳು, ಗಾಯಕಿ ಸೋಮಾ ಘೋಷ್, ಮನೆಯನ್ನು ಕೆಡವುತ್ತಿರುವ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

‘ಬಾಬಾ’ (ಬಿಸ್ಮಿಲ್ಲಾಖಾನ್) ಅವರ ಕೊಠಡಿಯನ್ನು ಕೆಡವಿ, ಅವರ ವಸ್ತುಗಳನ್ನು ಎಸೆಯಲಾಗಿದೆ ಎಂದು ತಿಳಿದಾಗ ನನಗೆ ಆಘಾತವಾಯಿತು. ಅದು ಕೇವಲ ಒಂದು ಕೋಣೆಯಾಗಿರಲಿಲ್ಲ. ಅದು ಸಂಗೀತ ಪ್ರಿಯರಿಗೆ ಪೂಜಾ ಸ್ಥಳವಾಗಿದೆ. ಇದು ಒಂದು ಪರಂಪರೆ. ಅದನ್ನು ಸಂರಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಅವರು ಹೇಳಿದ್ದಾರೆ.

ಆಗಸ್ಟ್ 21 ರಂದು ಬಿಸ್ಮಿಲ್ಲಾ ಖಾನ್ ಅವರ 14ನೇ ನೆನಪಿನ ವಾರ್ಷಿಕೋತ್ಸವದ ಕೆಲವೇ ದಿನಗಳ ಮೊದಲು ಕೆಡವುವಿಕೆಯ ಪ್ರಕ್ರಿಯೆ ಪ್ರಾರಂಭವಾಗಿದೆ. 2006 ರಲ್ಲಿ ನಿಧನರಾದ ಬಿಸ್ಮಿಲ್ಲಾಖಾನ್ ಗೆ 2001 ರಲ್ಲಿ ಭಾರತ್ ರತ್ನ ಪ್ರಶಸ್ತಿ ನೀಡಲಾಗಿತ್ತು.

ಬಿಸ್ಮಿಲ್ಲಾ ಖಾನ್ ಆಗಸ್ಟ್ 15, 1947 ರಂದು ಕೆಂಪು ಕೋಟೆಯಲ್ಲಿ ಶಹನಾಯ್ ಕಾರ್ಯಕ್ರಮ ನೀಡಿ ಗಮನ ಸೆಳೆದಿದ್ದರು. ಇದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ರಾಜ್ ಕುಮಾರ್ ಅಭಿನಯದ ‘ಸನಾದಿ ಅಪ್ಪಣ್ಣ’ ಎನ್ನುವ ಕನ್ನಡ ಚಿತ್ರಕ್ಕೆ ಶಹನಾಯ್ ನುಡಿಸಿ ಸಾಕಷ್ಟು ಜನಪ್ರಿಯರಾಗಿದ್ದರು.

2017 ರ ಜನವರಿಯಲ್ಲಿ, ಅವರ ಮೊಮ್ಮಗ ಬಿಸ್ಮಿಲ್ಲಾಖಾನರ ನಾಲ್ಕು ಶಹನಾಯ್ ಗಳನ್ನು ಕದ್ದಿದ್ದು, ಅದರಲ್ಲಿ ಮೂರು ಬೆಳ್ಳಿಯಿಂದ ಮಾಡಲ್ಪಟ್ಟಿತ್ತು. ಅವುಗಳನ್ನು ಸ್ಥಳೀಯ ಆಭರಣ ವ್ಯಾಪಾರಿಗಳಿಗೆ 17,000 ರೂ.ಗೆ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಉತ್ತರ ಪ್ರದೇಶದ ಎಸ್‌ಟಿಎಫ್, ಅವರ ಮೊಮ್ಮಗ ಮತ್ತು ಇಬ್ಬರು ಆಭರಣ ವ್ಯಾಪಾರಿಗಳನ್ನು ಬಂಧಿಸಿ ಕರಗಿದ ಬೆಳ್ಳಿಯನ್ನು ವಶಪಡಿಸಿಕೊಂಡಿತ್ತು. ಮೂರು ಬೆಳ್ಳಿ ಶಹನಾಯ್ ಗಳನ್ನು ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್, ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಬಳುವಳಿಯಾಗಿ ನೀಡಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...