Homeಮುಖಪುಟಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಈ ಮನೆಯನ್ನು 1936 ರಲ್ಲಿ ಖರೀದಿಸಿ, ಬಿಸ್ಮಿಲ್ಲಾ ಖಾನ್ ತಮ್ಮ ಜೀವನದುದ್ದಕ್ಕೂ ಇಲ್ಲಿಯೇ ವಾಸಿಸುತ್ತಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

- Advertisement -
- Advertisement -

ಮೂರು ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟುವ ಸಲುವಾಗಿ ವಾರಣಾಸಿಯ ಬೆನಿಯಾ ಬಾಗ್‌ನಲ್ಲಿರುವ ಶಹನಾಯ್ ವಿದ್ವಾನ್ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯನ್ನು ಕೆಡವಲಾಗುತ್ತಿದೆ.

ಈ ಮನೆಯನ್ನು 1936 ರಲ್ಲಿ ಖರೀದಿಸಿದ್ದ ಬಿಸ್ಮಿಲ್ಲಾ ಖಾನ್, ತಮ್ಮ ಜೀವನದುದ್ದಕ್ಕೂ ಅಲ್ಲಿಯೇ ವಾಸಿಸಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

ಈ ಮನೆ ಈಗ ಬಿಸ್ಮಿಲ್ಲಾಖಾನ್ ಮೊಮ್ಮಕ್ಕಳ ಒಡೆತನದಲ್ಲಿದೆ. ಬಿಸ್ಮಿಲ್ಲಾಖಾನ್ ಅವರ ಐದು ಗಂಡು ಮಕ್ಕಳಲ್ಲಿ ದಿವಂಗತ ಮೆಹ್ತಾಬ್ ಹುಸೇನ್ ಒಬ್ಬರು. ಅವರ ಮಗನಾದ ಮತ್ತು ಖಾನ್‌ ಮೊಮ್ಮಗನಾದ ಸೂಫಿ, ಆರ್ಥಿಕ ವಿಷಯಕ್ಕಾಗಿ ಮನೆಯನ್ನು ನೆಲಸಮ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಮೂರು ಅಂತಸ್ತಿನ ಕಮರ್ಷಿಯಲ್ ಅಪಾರ್ಟ್ಮೆಂಟ್ ನಿರ್ಮಿಸಲಾಗುವುದು. ಕಟ್ಟಡದ ಒಂದು ಭಾಗದಲ್ಲಿ ನಾವು ಬಿಸ್ಮಿಲ್ಲಾ ಖಾನ್ ಅವರ ವಸ್ತುಸಂಗ್ರಹಾಲಯವನ್ನು ನಿರ್ಮಿಸುತ್ತೇವೆ. ಅವರ ಎಲ್ಲಾ ವೈಯಕ್ತಿಕ ವಸ್ತುಗಳು, ಪ್ರಶಸ್ತಿಗಳು, ಪ್ರಶಂಸೆಗಳು ಇತ್ಯಾದಿಗಳನ್ನು ನಾವು ಈ ವಸ್ತು ಸಂಗ್ರಹಾಲಯದಲ್ಲಿ ಇಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಶಿಷ್ಯೆ ಮತ್ತು ಸಾಕು ಮಗಳು, ಗಾಯಕಿ ಸೋಮಾ ಘೋಷ್, ಮನೆಯನ್ನು ಕೆಡವುತ್ತಿರುವ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

‘ಬಾಬಾ’ (ಬಿಸ್ಮಿಲ್ಲಾಖಾನ್) ಅವರ ಕೊಠಡಿಯನ್ನು ಕೆಡವಿ, ಅವರ ವಸ್ತುಗಳನ್ನು ಎಸೆಯಲಾಗಿದೆ ಎಂದು ತಿಳಿದಾಗ ನನಗೆ ಆಘಾತವಾಯಿತು. ಅದು ಕೇವಲ ಒಂದು ಕೋಣೆಯಾಗಿರಲಿಲ್ಲ. ಅದು ಸಂಗೀತ ಪ್ರಿಯರಿಗೆ ಪೂಜಾ ಸ್ಥಳವಾಗಿದೆ. ಇದು ಒಂದು ಪರಂಪರೆ. ಅದನ್ನು ಸಂರಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಅವರು ಹೇಳಿದ್ದಾರೆ.

ಆಗಸ್ಟ್ 21 ರಂದು ಬಿಸ್ಮಿಲ್ಲಾ ಖಾನ್ ಅವರ 14ನೇ ನೆನಪಿನ ವಾರ್ಷಿಕೋತ್ಸವದ ಕೆಲವೇ ದಿನಗಳ ಮೊದಲು ಕೆಡವುವಿಕೆಯ ಪ್ರಕ್ರಿಯೆ ಪ್ರಾರಂಭವಾಗಿದೆ. 2006 ರಲ್ಲಿ ನಿಧನರಾದ ಬಿಸ್ಮಿಲ್ಲಾಖಾನ್ ಗೆ 2001 ರಲ್ಲಿ ಭಾರತ್ ರತ್ನ ಪ್ರಶಸ್ತಿ ನೀಡಲಾಗಿತ್ತು.

ಬಿಸ್ಮಿಲ್ಲಾ ಖಾನ್ ಆಗಸ್ಟ್ 15, 1947 ರಂದು ಕೆಂಪು ಕೋಟೆಯಲ್ಲಿ ಶಹನಾಯ್ ಕಾರ್ಯಕ್ರಮ ನೀಡಿ ಗಮನ ಸೆಳೆದಿದ್ದರು. ಇದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ರಾಜ್ ಕುಮಾರ್ ಅಭಿನಯದ ‘ಸನಾದಿ ಅಪ್ಪಣ್ಣ’ ಎನ್ನುವ ಕನ್ನಡ ಚಿತ್ರಕ್ಕೆ ಶಹನಾಯ್ ನುಡಿಸಿ ಸಾಕಷ್ಟು ಜನಪ್ರಿಯರಾಗಿದ್ದರು.

2017 ರ ಜನವರಿಯಲ್ಲಿ, ಅವರ ಮೊಮ್ಮಗ ಬಿಸ್ಮಿಲ್ಲಾಖಾನರ ನಾಲ್ಕು ಶಹನಾಯ್ ಗಳನ್ನು ಕದ್ದಿದ್ದು, ಅದರಲ್ಲಿ ಮೂರು ಬೆಳ್ಳಿಯಿಂದ ಮಾಡಲ್ಪಟ್ಟಿತ್ತು. ಅವುಗಳನ್ನು ಸ್ಥಳೀಯ ಆಭರಣ ವ್ಯಾಪಾರಿಗಳಿಗೆ 17,000 ರೂ.ಗೆ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಉತ್ತರ ಪ್ರದೇಶದ ಎಸ್‌ಟಿಎಫ್, ಅವರ ಮೊಮ್ಮಗ ಮತ್ತು ಇಬ್ಬರು ಆಭರಣ ವ್ಯಾಪಾರಿಗಳನ್ನು ಬಂಧಿಸಿ ಕರಗಿದ ಬೆಳ್ಳಿಯನ್ನು ವಶಪಡಿಸಿಕೊಂಡಿತ್ತು. ಮೂರು ಬೆಳ್ಳಿ ಶಹನಾಯ್ ಗಳನ್ನು ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್, ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಬಳುವಳಿಯಾಗಿ ನೀಡಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....