Homeಮುಖಪುಟಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಈ ಮನೆಯನ್ನು 1936 ರಲ್ಲಿ ಖರೀದಿಸಿ, ಬಿಸ್ಮಿಲ್ಲಾ ಖಾನ್ ತಮ್ಮ ಜೀವನದುದ್ದಕ್ಕೂ ಇಲ್ಲಿಯೇ ವಾಸಿಸುತ್ತಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

- Advertisement -
- Advertisement -

ಮೂರು ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್ ಕಟ್ಟುವ ಸಲುವಾಗಿ ವಾರಣಾಸಿಯ ಬೆನಿಯಾ ಬಾಗ್‌ನಲ್ಲಿರುವ ಶಹನಾಯ್ ವಿದ್ವಾನ್ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮನೆಯನ್ನು ಕೆಡವಲಾಗುತ್ತಿದೆ.

ಈ ಮನೆಯನ್ನು 1936 ರಲ್ಲಿ ಖರೀದಿಸಿದ್ದ ಬಿಸ್ಮಿಲ್ಲಾ ಖಾನ್, ತಮ್ಮ ಜೀವನದುದ್ದಕ್ಕೂ ಅಲ್ಲಿಯೇ ವಾಸಿಸಿದ್ದರು. ಅವರು ಅಮೇರಿಕಾದಲ್ಲಿ ನೆಲೆಸಲು ತಮ್ಮ ಶಿಷ್ಯರು ನೀಡಿದ ಕರೆಯನ್ನು ಸಹ ತಿರಸ್ಕರಿಸಿದ್ದರು.

ಈ ಮನೆ ಈಗ ಬಿಸ್ಮಿಲ್ಲಾಖಾನ್ ಮೊಮ್ಮಕ್ಕಳ ಒಡೆತನದಲ್ಲಿದೆ. ಬಿಸ್ಮಿಲ್ಲಾಖಾನ್ ಅವರ ಐದು ಗಂಡು ಮಕ್ಕಳಲ್ಲಿ ದಿವಂಗತ ಮೆಹ್ತಾಬ್ ಹುಸೇನ್ ಒಬ್ಬರು. ಅವರ ಮಗನಾದ ಮತ್ತು ಖಾನ್‌ ಮೊಮ್ಮಗನಾದ ಸೂಫಿ, ಆರ್ಥಿಕ ವಿಷಯಕ್ಕಾಗಿ ಮನೆಯನ್ನು ನೆಲಸಮ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಮೂರು ಅಂತಸ್ತಿನ ಕಮರ್ಷಿಯಲ್ ಅಪಾರ್ಟ್ಮೆಂಟ್ ನಿರ್ಮಿಸಲಾಗುವುದು. ಕಟ್ಟಡದ ಒಂದು ಭಾಗದಲ್ಲಿ ನಾವು ಬಿಸ್ಮಿಲ್ಲಾ ಖಾನ್ ಅವರ ವಸ್ತುಸಂಗ್ರಹಾಲಯವನ್ನು ನಿರ್ಮಿಸುತ್ತೇವೆ. ಅವರ ಎಲ್ಲಾ ವೈಯಕ್ತಿಕ ವಸ್ತುಗಳು, ಪ್ರಶಸ್ತಿಗಳು, ಪ್ರಶಂಸೆಗಳು ಇತ್ಯಾದಿಗಳನ್ನು ನಾವು ಈ ವಸ್ತು ಸಂಗ್ರಹಾಲಯದಲ್ಲಿ ಇಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಶಿಷ್ಯೆ ಮತ್ತು ಸಾಕು ಮಗಳು, ಗಾಯಕಿ ಸೋಮಾ ಘೋಷ್, ಮನೆಯನ್ನು ಕೆಡವುತ್ತಿರುವ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ.

‘ಬಾಬಾ’ (ಬಿಸ್ಮಿಲ್ಲಾಖಾನ್) ಅವರ ಕೊಠಡಿಯನ್ನು ಕೆಡವಿ, ಅವರ ವಸ್ತುಗಳನ್ನು ಎಸೆಯಲಾಗಿದೆ ಎಂದು ತಿಳಿದಾಗ ನನಗೆ ಆಘಾತವಾಯಿತು. ಅದು ಕೇವಲ ಒಂದು ಕೋಣೆಯಾಗಿರಲಿಲ್ಲ. ಅದು ಸಂಗೀತ ಪ್ರಿಯರಿಗೆ ಪೂಜಾ ಸ್ಥಳವಾಗಿದೆ. ಇದು ಒಂದು ಪರಂಪರೆ. ಅದನ್ನು ಸಂರಕ್ಷಿಸಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಅವರು ಹೇಳಿದ್ದಾರೆ.

ಆಗಸ್ಟ್ 21 ರಂದು ಬಿಸ್ಮಿಲ್ಲಾ ಖಾನ್ ಅವರ 14ನೇ ನೆನಪಿನ ವಾರ್ಷಿಕೋತ್ಸವದ ಕೆಲವೇ ದಿನಗಳ ಮೊದಲು ಕೆಡವುವಿಕೆಯ ಪ್ರಕ್ರಿಯೆ ಪ್ರಾರಂಭವಾಗಿದೆ. 2006 ರಲ್ಲಿ ನಿಧನರಾದ ಬಿಸ್ಮಿಲ್ಲಾಖಾನ್ ಗೆ 2001 ರಲ್ಲಿ ಭಾರತ್ ರತ್ನ ಪ್ರಶಸ್ತಿ ನೀಡಲಾಗಿತ್ತು.

ಬಿಸ್ಮಿಲ್ಲಾ ಖಾನ್ ಆಗಸ್ಟ್ 15, 1947 ರಂದು ಕೆಂಪು ಕೋಟೆಯಲ್ಲಿ ಶಹನಾಯ್ ಕಾರ್ಯಕ್ರಮ ನೀಡಿ ಗಮನ ಸೆಳೆದಿದ್ದರು. ಇದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ರಾಜ್ ಕುಮಾರ್ ಅಭಿನಯದ ‘ಸನಾದಿ ಅಪ್ಪಣ್ಣ’ ಎನ್ನುವ ಕನ್ನಡ ಚಿತ್ರಕ್ಕೆ ಶಹನಾಯ್ ನುಡಿಸಿ ಸಾಕಷ್ಟು ಜನಪ್ರಿಯರಾಗಿದ್ದರು.

2017 ರ ಜನವರಿಯಲ್ಲಿ, ಅವರ ಮೊಮ್ಮಗ ಬಿಸ್ಮಿಲ್ಲಾಖಾನರ ನಾಲ್ಕು ಶಹನಾಯ್ ಗಳನ್ನು ಕದ್ದಿದ್ದು, ಅದರಲ್ಲಿ ಮೂರು ಬೆಳ್ಳಿಯಿಂದ ಮಾಡಲ್ಪಟ್ಟಿತ್ತು. ಅವುಗಳನ್ನು ಸ್ಥಳೀಯ ಆಭರಣ ವ್ಯಾಪಾರಿಗಳಿಗೆ 17,000 ರೂ.ಗೆ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ.

ಉತ್ತರ ಪ್ರದೇಶದ ಎಸ್‌ಟಿಎಫ್, ಅವರ ಮೊಮ್ಮಗ ಮತ್ತು ಇಬ್ಬರು ಆಭರಣ ವ್ಯಾಪಾರಿಗಳನ್ನು ಬಂಧಿಸಿ ಕರಗಿದ ಬೆಳ್ಳಿಯನ್ನು ವಶಪಡಿಸಿಕೊಂಡಿತ್ತು. ಮೂರು ಬೆಳ್ಳಿ ಶಹನಾಯ್ ಗಳನ್ನು ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್, ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು ಬಳುವಳಿಯಾಗಿ ನೀಡಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ನೇಮಕಾತಿಗಳಿಗೆ ‘ಒಂದೇ’ ಸಾಮಾನ್ಯ ಅರ್ಹತಾ ಪರೀಕ್ಷೆ: ಸಂಸತ್ತು ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...