Homeಮುಖಪುಟಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

- Advertisement -
- Advertisement -

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಅವರು ಆಯ್ಕೆಯಾಗಿದ್ದಾರೆ. ಶೆಹಬಾಝ್ ಷರೀಫ್ ಅವರ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಪ್ರಧಾನಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

201 ಮತಗಳನ್ನು ಪಡೆಯುವ ಮೂಲಕ ಶೆಹಬಾಝ್ ಷರೀಫ್ ಗೆಲುವನ್ನು ಸಾಧಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿತ ಪಿಟಿಐ ಅಭ್ಯರ್ಥಿ ಓಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಮಾತ್ರ ಪಡೆದುಕೊಂಡು ಸೋಲನ್ನು ಅನುಭವಿಸಿದ್ದಾರೆ. ಶೆಹಬಾಝ್ ಕಳೆದ ತಿಂಗಳ ಚುನಾವಣೆಗೆ ಮುನ್ನ ಆಗಸ್ಟ್‌ನಲ್ಲಿ ಸಂಸತ್ತು ವಿಸರ್ಜನೆಗೊಳ್ಳುವವರೆಗೂ ಪ್ರಧಾನಿಯಾಗಿದ್ದರು.

ಭಾನುವಾರದ ಮತದಾನದಲ್ಲಿ ಒಟ್ಟು 293 ಮತಗಳಲ್ಲಿ 201 ಮತಗಳನ್ನು ಪಡೆಯುವ ಮೂಲಕ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಘೋಷಿಸಿದ್ದಾರೆ. ಷರೀಫ್ ಅವರ ಏಕೈಕ ಪ್ರತಿಸ್ಪರ್ಧಿ ಸುನ್ನಿ ಇತ್ತೆಹಾದ್ ಕೌನ್ಸಿಲ್ (SIC) ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಜಂಟಿ ಅಭ್ಯರ್ಥಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದಿದ್ದರು.

ಶೆಹಬಾಝ್‌ ತಮ್ಮ ವಿಜಯ ಭಾಷಣದಲ್ಲಿ ನವಾಜ್ ಷರೀಫ್ ಅವರನ್ನು ನೆನಪಿಸಿಕೊಂಡಿದ್ದಾರೆ.  ಮಿತ್ರಪಕ್ಷಗಳಿಗೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಭಾನಾಯಕನನ್ನಾಗಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪಾಕಿಸ್ತಾನವನ್ನು ಕಟ್ಟಿದ್ದು ನವಾಜ್ ಷರೀಫ್ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಶೆಹಬಾಝ್ ಅವರು ಮಾತನಾಡುವಾಗ, ಪಿಟಿಐ ಬೆಂಬಲಿತ ಶಾಸಕರು  ‘ಕಳ್ಳ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷವು ಆರೋಪಿಸಿದೆ. ಇತರೆ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆದರೂ ಪಿಎಂಎಲ್-ಎನ್ ಮತ್ತು ಪಿಪಿಪಿಯ ಹಲವು ಅಭ್ಯರ್ಥಿಗಳನ್ನು ವಿಜೇತರೆಂದು ಘೋಷಿಸಲಾಗಿದೆ ಎಂದು ಇಮ್ರಾನ್ ಖಾನ್ ಅವರ ಪಿಟಿಐ ಆರೋಪಿಸಿದೆ. ಅನೇಕ ಪಿಟಿಐ ನಾಯಕರು ಚುನಾವಣಾ ಅಧಿಕಾರಿಗಳು ಜನರ ಆದೇಶವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಮೊದಲು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳಿಗೆ ಪಿಎಂಎಲ್‌–ಎನ್‌, ಪಿಪಿಪಿ ಜೊತೆಯಾಗಿ ಕಣಕ್ಕಿಳಿಸಿದಿದ್ದ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಗೆಲುವಿನ ಬಳಿಕ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪ್ರಧಾನಿಯಾಗಿ ಷರೀಫ್ ಅವರನ್ನು ಘೋಷಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ಷರೀಫ್ ಅವರು PML-N, ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಾರ್ಲಿಮೆಂಟೇರಿಯನ್ಸ್, ಮುತ್ತಹಿದಾ ಕ್ವಾಮಿ ಮೂವ್ಮೆಂಟ್-ಪಾಕಿಸ್ತಾನ ಮತ್ತು ಇತರ ಮಿತ್ರಪಕ್ಷಗಳಿಂದ ಮತಗಳನ್ನು ಪಡೆದಿದ್ದರು.

ಫೆ.8ರಂದು ನಡೆದಿದ್ದ ಪಾಕಿಸ್ತಾನ ಸಂಸತ್‌ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆದುಕೊಂಡಿಲ್ಲ. ಪಿಟಿಐ ಬೆಂಬಲಿತ ಪಕ್ಷೇತರರು 101, ಪಿಎಂಎಲ್‌-ಎನ್‌ (ನವಾಜ್‌) 75, ಪಿಪಿಪಿ (ಭುಟ್ಟೊ) 54, ಇತರೆ ಪ್ರಾದೇಶಿಕ ಪಕ್ಷಗಳು 34 ಸ್ಥಾನಗಳಲ್ಲಿ ಜಯ ಗಳಿಸಿವೆ.

ಪ್ರಧಾನಿ ಹುದ್ದೆ ನೀಡಿದರೆ ಸಮ್ಮಿಶ್ರ ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಹೇಳಿದ್ದ ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ಜರ್ದಾರಿ, ಮಂಗಳವಾರ ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದರು. ಹೊಸ ಸರಕಾರ ರಚನೆಗೆ ಪಿಎಂಎನ್‌ಎಲ್‌ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡುವುದಾಗಿ ಹೇಳಿರುವ ಭುಟ್ಟೋ ಅವರು ಮಾಜಿ ಪ್ರಧಾನಿ ನವಾಜ್ ಷರೀಫ್‌ ಆಯ್ಕೆ ಮಾಡುವ ಅಭ್ಯರ್ಥಿಗೆ ನಮ್ಮ ಪಕ್ಷ ವಿಷಯಾಧಾರಿತ ಬೆಂಬಲ ನೀಡಲಿದೆ. ಆದರೆ, ಸರಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದರು.

ಇದನ್ನು ಓದಿ: ಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...