Homeಮುಖಪುಟಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

- Advertisement -
- Advertisement -

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಅವರು ಆಯ್ಕೆಯಾಗಿದ್ದಾರೆ. ಶೆಹಬಾಝ್ ಷರೀಫ್ ಅವರ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಪ್ರಧಾನಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

201 ಮತಗಳನ್ನು ಪಡೆಯುವ ಮೂಲಕ ಶೆಹಬಾಝ್ ಷರೀಫ್ ಗೆಲುವನ್ನು ಸಾಧಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿತ ಪಿಟಿಐ ಅಭ್ಯರ್ಥಿ ಓಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಮಾತ್ರ ಪಡೆದುಕೊಂಡು ಸೋಲನ್ನು ಅನುಭವಿಸಿದ್ದಾರೆ. ಶೆಹಬಾಝ್ ಕಳೆದ ತಿಂಗಳ ಚುನಾವಣೆಗೆ ಮುನ್ನ ಆಗಸ್ಟ್‌ನಲ್ಲಿ ಸಂಸತ್ತು ವಿಸರ್ಜನೆಗೊಳ್ಳುವವರೆಗೂ ಪ್ರಧಾನಿಯಾಗಿದ್ದರು.

ಭಾನುವಾರದ ಮತದಾನದಲ್ಲಿ ಒಟ್ಟು 293 ಮತಗಳಲ್ಲಿ 201 ಮತಗಳನ್ನು ಪಡೆಯುವ ಮೂಲಕ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಘೋಷಿಸಿದ್ದಾರೆ. ಷರೀಫ್ ಅವರ ಏಕೈಕ ಪ್ರತಿಸ್ಪರ್ಧಿ ಸುನ್ನಿ ಇತ್ತೆಹಾದ್ ಕೌನ್ಸಿಲ್ (SIC) ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಜಂಟಿ ಅಭ್ಯರ್ಥಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದಿದ್ದರು.

ಶೆಹಬಾಝ್‌ ತಮ್ಮ ವಿಜಯ ಭಾಷಣದಲ್ಲಿ ನವಾಜ್ ಷರೀಫ್ ಅವರನ್ನು ನೆನಪಿಸಿಕೊಂಡಿದ್ದಾರೆ.  ಮಿತ್ರಪಕ್ಷಗಳಿಗೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಭಾನಾಯಕನನ್ನಾಗಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪಾಕಿಸ್ತಾನವನ್ನು ಕಟ್ಟಿದ್ದು ನವಾಜ್ ಷರೀಫ್ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಶೆಹಬಾಝ್ ಅವರು ಮಾತನಾಡುವಾಗ, ಪಿಟಿಐ ಬೆಂಬಲಿತ ಶಾಸಕರು  ‘ಕಳ್ಳ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷವು ಆರೋಪಿಸಿದೆ. ಇತರೆ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆದರೂ ಪಿಎಂಎಲ್-ಎನ್ ಮತ್ತು ಪಿಪಿಪಿಯ ಹಲವು ಅಭ್ಯರ್ಥಿಗಳನ್ನು ವಿಜೇತರೆಂದು ಘೋಷಿಸಲಾಗಿದೆ ಎಂದು ಇಮ್ರಾನ್ ಖಾನ್ ಅವರ ಪಿಟಿಐ ಆರೋಪಿಸಿದೆ. ಅನೇಕ ಪಿಟಿಐ ನಾಯಕರು ಚುನಾವಣಾ ಅಧಿಕಾರಿಗಳು ಜನರ ಆದೇಶವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಮೊದಲು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳಿಗೆ ಪಿಎಂಎಲ್‌–ಎನ್‌, ಪಿಪಿಪಿ ಜೊತೆಯಾಗಿ ಕಣಕ್ಕಿಳಿಸಿದಿದ್ದ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಗೆಲುವಿನ ಬಳಿಕ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪ್ರಧಾನಿಯಾಗಿ ಷರೀಫ್ ಅವರನ್ನು ಘೋಷಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ಷರೀಫ್ ಅವರು PML-N, ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಾರ್ಲಿಮೆಂಟೇರಿಯನ್ಸ್, ಮುತ್ತಹಿದಾ ಕ್ವಾಮಿ ಮೂವ್ಮೆಂಟ್-ಪಾಕಿಸ್ತಾನ ಮತ್ತು ಇತರ ಮಿತ್ರಪಕ್ಷಗಳಿಂದ ಮತಗಳನ್ನು ಪಡೆದಿದ್ದರು.

ಫೆ.8ರಂದು ನಡೆದಿದ್ದ ಪಾಕಿಸ್ತಾನ ಸಂಸತ್‌ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆದುಕೊಂಡಿಲ್ಲ. ಪಿಟಿಐ ಬೆಂಬಲಿತ ಪಕ್ಷೇತರರು 101, ಪಿಎಂಎಲ್‌-ಎನ್‌ (ನವಾಜ್‌) 75, ಪಿಪಿಪಿ (ಭುಟ್ಟೊ) 54, ಇತರೆ ಪ್ರಾದೇಶಿಕ ಪಕ್ಷಗಳು 34 ಸ್ಥಾನಗಳಲ್ಲಿ ಜಯ ಗಳಿಸಿವೆ.

ಪ್ರಧಾನಿ ಹುದ್ದೆ ನೀಡಿದರೆ ಸಮ್ಮಿಶ್ರ ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಹೇಳಿದ್ದ ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ಜರ್ದಾರಿ, ಮಂಗಳವಾರ ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದರು. ಹೊಸ ಸರಕಾರ ರಚನೆಗೆ ಪಿಎಂಎನ್‌ಎಲ್‌ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡುವುದಾಗಿ ಹೇಳಿರುವ ಭುಟ್ಟೋ ಅವರು ಮಾಜಿ ಪ್ರಧಾನಿ ನವಾಜ್ ಷರೀಫ್‌ ಆಯ್ಕೆ ಮಾಡುವ ಅಭ್ಯರ್ಥಿಗೆ ನಮ್ಮ ಪಕ್ಷ ವಿಷಯಾಧಾರಿತ ಬೆಂಬಲ ನೀಡಲಿದೆ. ಆದರೆ, ಸರಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದರು.

ಇದನ್ನು ಓದಿ: ಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...