Homeಮುಖಪುಟಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

- Advertisement -
- Advertisement -

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಅವರು ಆಯ್ಕೆಯಾಗಿದ್ದಾರೆ. ಶೆಹಬಾಝ್ ಷರೀಫ್ ಅವರ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಪ್ರಧಾನಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

201 ಮತಗಳನ್ನು ಪಡೆಯುವ ಮೂಲಕ ಶೆಹಬಾಝ್ ಷರೀಫ್ ಗೆಲುವನ್ನು ಸಾಧಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿತ ಪಿಟಿಐ ಅಭ್ಯರ್ಥಿ ಓಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಮಾತ್ರ ಪಡೆದುಕೊಂಡು ಸೋಲನ್ನು ಅನುಭವಿಸಿದ್ದಾರೆ. ಶೆಹಬಾಝ್ ಕಳೆದ ತಿಂಗಳ ಚುನಾವಣೆಗೆ ಮುನ್ನ ಆಗಸ್ಟ್‌ನಲ್ಲಿ ಸಂಸತ್ತು ವಿಸರ್ಜನೆಗೊಳ್ಳುವವರೆಗೂ ಪ್ರಧಾನಿಯಾಗಿದ್ದರು.

ಭಾನುವಾರದ ಮತದಾನದಲ್ಲಿ ಒಟ್ಟು 293 ಮತಗಳಲ್ಲಿ 201 ಮತಗಳನ್ನು ಪಡೆಯುವ ಮೂಲಕ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಘೋಷಿಸಿದ್ದಾರೆ. ಷರೀಫ್ ಅವರ ಏಕೈಕ ಪ್ರತಿಸ್ಪರ್ಧಿ ಸುನ್ನಿ ಇತ್ತೆಹಾದ್ ಕೌನ್ಸಿಲ್ (SIC) ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಜಂಟಿ ಅಭ್ಯರ್ಥಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದಿದ್ದರು.

ಶೆಹಬಾಝ್‌ ತಮ್ಮ ವಿಜಯ ಭಾಷಣದಲ್ಲಿ ನವಾಜ್ ಷರೀಫ್ ಅವರನ್ನು ನೆನಪಿಸಿಕೊಂಡಿದ್ದಾರೆ.  ಮಿತ್ರಪಕ್ಷಗಳಿಗೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಭಾನಾಯಕನನ್ನಾಗಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪಾಕಿಸ್ತಾನವನ್ನು ಕಟ್ಟಿದ್ದು ನವಾಜ್ ಷರೀಫ್ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಶೆಹಬಾಝ್ ಅವರು ಮಾತನಾಡುವಾಗ, ಪಿಟಿಐ ಬೆಂಬಲಿತ ಶಾಸಕರು  ‘ಕಳ್ಳ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷವು ಆರೋಪಿಸಿದೆ. ಇತರೆ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆದರೂ ಪಿಎಂಎಲ್-ಎನ್ ಮತ್ತು ಪಿಪಿಪಿಯ ಹಲವು ಅಭ್ಯರ್ಥಿಗಳನ್ನು ವಿಜೇತರೆಂದು ಘೋಷಿಸಲಾಗಿದೆ ಎಂದು ಇಮ್ರಾನ್ ಖಾನ್ ಅವರ ಪಿಟಿಐ ಆರೋಪಿಸಿದೆ. ಅನೇಕ ಪಿಟಿಐ ನಾಯಕರು ಚುನಾವಣಾ ಅಧಿಕಾರಿಗಳು ಜನರ ಆದೇಶವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಮೊದಲು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳಿಗೆ ಪಿಎಂಎಲ್‌–ಎನ್‌, ಪಿಪಿಪಿ ಜೊತೆಯಾಗಿ ಕಣಕ್ಕಿಳಿಸಿದಿದ್ದ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಗೆಲುವಿನ ಬಳಿಕ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪ್ರಧಾನಿಯಾಗಿ ಷರೀಫ್ ಅವರನ್ನು ಘೋಷಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ಷರೀಫ್ ಅವರು PML-N, ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಾರ್ಲಿಮೆಂಟೇರಿಯನ್ಸ್, ಮುತ್ತಹಿದಾ ಕ್ವಾಮಿ ಮೂವ್ಮೆಂಟ್-ಪಾಕಿಸ್ತಾನ ಮತ್ತು ಇತರ ಮಿತ್ರಪಕ್ಷಗಳಿಂದ ಮತಗಳನ್ನು ಪಡೆದಿದ್ದರು.

ಫೆ.8ರಂದು ನಡೆದಿದ್ದ ಪಾಕಿಸ್ತಾನ ಸಂಸತ್‌ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆದುಕೊಂಡಿಲ್ಲ. ಪಿಟಿಐ ಬೆಂಬಲಿತ ಪಕ್ಷೇತರರು 101, ಪಿಎಂಎಲ್‌-ಎನ್‌ (ನವಾಜ್‌) 75, ಪಿಪಿಪಿ (ಭುಟ್ಟೊ) 54, ಇತರೆ ಪ್ರಾದೇಶಿಕ ಪಕ್ಷಗಳು 34 ಸ್ಥಾನಗಳಲ್ಲಿ ಜಯ ಗಳಿಸಿವೆ.

ಪ್ರಧಾನಿ ಹುದ್ದೆ ನೀಡಿದರೆ ಸಮ್ಮಿಶ್ರ ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಹೇಳಿದ್ದ ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ಜರ್ದಾರಿ, ಮಂಗಳವಾರ ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದರು. ಹೊಸ ಸರಕಾರ ರಚನೆಗೆ ಪಿಎಂಎನ್‌ಎಲ್‌ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡುವುದಾಗಿ ಹೇಳಿರುವ ಭುಟ್ಟೋ ಅವರು ಮಾಜಿ ಪ್ರಧಾನಿ ನವಾಜ್ ಷರೀಫ್‌ ಆಯ್ಕೆ ಮಾಡುವ ಅಭ್ಯರ್ಥಿಗೆ ನಮ್ಮ ಪಕ್ಷ ವಿಷಯಾಧಾರಿತ ಬೆಂಬಲ ನೀಡಲಿದೆ. ಆದರೆ, ಸರಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದರು.

ಇದನ್ನು ಓದಿ: ಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...